LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಪ್ರಧಾನಿ ರಾಜೀವ್ ಗಾಂಧಿರವರ ಪುಣ್ಯಸ್ಮರಣೆ:ರಕ್ತದಾನ ಶಿಬಿರ

ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ರವರು ದೂರದೃಷ್ಟಿ ಚಿಂತನೆಯ ನಾಯಕ, ಅತಿ ಕಿರಿಯ ವಯಸ್ಸಿನ ಪ್ರಧಾನಿಯಾಗಿ ಉತ್ತಮ ಆಡಳಿತ ನೀಡಿದರು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಮಾಜಿ ಪ್ರಧಾಮಂತ್ರಿಗಳಾದ ದಿವಂಗತ ರಾಜೀವ್ ಗಾಂಧಿಯವರ ಪುಣ್ಯ ಸ್ಮರಣಾರ್ಥ ಅಂಗವಾಗಿ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಮಂಜುನಾಥ್ ಗೌಡ ರವರ ನೇತ್ರತ್ವದಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿತ್ತು.

ಮಾಜಿ ಪ್ರಧಾನಿ ರಾಜೀವ್ ಗಾಂಧಿರವರ ಬಾವಚಿತ್ರಕ್ಕೆ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು ಮತ್ತು ಕಾರ್ಯಾಧ್ಯಕ್ಷರಾದ ಹೆಚ್.ಎಸ್.ಮಂಜುನಾಥ್ ಗೌಡರು ಪುಷ್ಪನಮನ ಸಲ್ಲಿಸಿ, ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.

ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು ಮಾತನಾಡಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ರವರು ದೂರದೃಷ್ಟಿ ಚಿಂತನೆಯ ನಾಯಕ, ಅತಿ ಕಿರಿಯ ವಯಸ್ಸಿನ ಪ್ರಧಾನಿಯಾಗಿ ಉತ್ತಮ ಆಡಳಿತ ನೀಡಿದರು.ರಾಜೀವ್ ಗಾಂಧಿಯರವರ ನನ್ನ ನಡುವೆ ನಿಕಟ ಬಾಂಧ್ಯವವಿತ್ತು , ನನ್ನ ಹೋರಾಟ, ಸಂಘಟನೆಯಲ್ಲಿ ಯಶ್ವಸಿಯಾಗಲು ಅವರು ಸ್ಪೂರ್ತಿಯಾಗಿದ್ದಾರೆ.

ಯುವ ಕಾಂಗ್ರೆಸ್ ರಾಜೀವ್ ಗಾಂಧಿರವರ ಪುಣ್ಯಸ್ಮರಣೆ ಸಂದರ್ಭದಲ್ಲಿ ರಕ್ತದಾನ ಶಿಬಿರ ಆಯೋಜಿಸಿ ಉತ್ತಮ ಕೆಲಸ ಮಾಡುತ್ತಿದೆ.ಕಿಂಗ್ ಮೇಕರ್ ಆಗುವ ಭ್ರಮೆಯಲ್ಲಿ ಮಾಜಿ ಕುಮಾರಸ್ವಾಮಿರವರು ಇದ್ದಾರೆ. ಅಸೂಯೆ ಇದ್ದವರಿಗೆ ಮದ್ದು ಇಲ್ಲ ಎಂದು ಹೇಳಿದರು.

ಹೆಚ್.ಎಸ್.ಮಂಜುನಾಥ್ ಗೌಡರವರು ಮಾತನಾಡಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ರವರ ಸರಳ, ಸಜ್ಜನ ರಾಜಕಾರಣಿ. 40ನೇ ವಯಸ್ಸಿನಲ್ಲಿ ಪ್ರಧಾನಿಯಾಗಿ ಉತ್ತಮ ಆಡಳಿತ ದೇಶಕ್ಕೆ ನೀಡಿದರು.ರಾಜೀವ್ ಗಾಂಧಿರವರು ಯುವ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿದರು.ವಿಜ್ಞಾನ, ತಂತ್ರಜ್ಞಾನ ಕೈಗಾರಿಕೆ ಮತ್ತು ಕೃಷಿಯಲ್ಲಿ ಆಧುನಿಕತೆ ಸ್ಪರ್ಶ ನೀಡಿ ದೇಶದ ಅಭಿವೃದ್ದಿಗೆ ಅಪಾರ ಕೊಡುಗೆ ನೀಡಿದರು.

ರಾಜೀವ್ ಗಾಂಧಿರವರು ಯುವ ಸಮೂದಾಯಕ್ಕೆ ಆಶಾಕಿರಣರಾಗಿದ್ದರು.ಪೆರಂಬದೂರುನಲ್ಲಿ ಬಹಿರಂಗ ಪ್ರಚಾರದಲ್ಲಿ ಉಗ್ರರ ದಾಳಿಯಿಂದ ಹತ್ಯೆಯಾದರು.ದೇಶದ ಏಕತೆ,ಸಮಗ್ರತೆಗೆ ಶ್ರೀಮತಿ ಇಂದಿರಾ ಗಾಂಧಿ ರವರು ರಾಜೀವ್ ಗಾಂಧಿರವರು ತಮ್ಮ ಪ್ರಾಣವನ್ನೆ ಬಲಿದಾನ ಮಾಡಿದರು.ಇಂದು ದೇಶದಲ್ಲಿ ಉಗ್ರವಾದ , ಕೋಮುವಾದ ಆಶಾಂತಿ ತಲೆದೂರಿದೆ.ದೇಶದಲ್ಲಿ ಮತ್ತೋಮ್ಮೆ ಶಾಂತಿ ನೆಲಸಬೇಕು ಎಂದರೆ ಯುವ ಸಮುದಾಯ ಈ ನಿಟ್ಟಿನಲ್ಲಿ ಸಂಘಟಿತರಾಗಬೇಕು. ದಿವಂಗತ ರಾಜೀವ್ ಗಾಂಧಿರವರ ಆದರ್ಶ, ಮಾರ್ಗದರ್ಶನದಲ್ಲಿ ಶಾಂತಿ, ಸೌಹರ್ದತೆಯ ಮತ್ತು ಬಲಿಷ್ಠ ಭಾರತ ಕಟ್ಟೋಣ ಎಂದು ಹೇಳಿದರು.

500ಕ್ಕೂ ಹೆಚ್ಚು ಯುವಕರು ರಕ್ತದಾನ ಮಾಡಿದರು, ರಕ್ತದಾನ ಮಾಡಿದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು, ರಕ್ತದಾನ ಶಿಬಿರಕ್ಕೆ ರೆಡ್ ಕ್ರಾಸ್ ಸಂಸ್ಥೆಯವರು ಸಹಕಾರ ನೀಡಿದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನ