LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಾಹ್ಯಾಕಾಶ ಯಾನ ಮುಗಿಸಿ ಭೂಮಿಯತ್ತ ಹೊರಟ ನಾಲ್ವರು ಗಗನಯಾತ್ರಿಗಳು

ನವದೆಹಲಿ : ಆಕ್ಸಿಯಮ್-4 ಅಡಿಯಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಭಾರತಕ್ಕೆ ಹಿಂದಿರುಗುತ್ತಿದ್ದಾರೆ.

ಡ್ರ‍್ಯಾಗನ್ ನೌಕೆ ಮೂಲಕ ಭೂಮಿಯತ್ತ ಆಗಮಿಸುತ್ತಿರುವ ಭಾರತೀಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವ್ಹಿಟ್ಸನ್, ಪೋಲೆಂಡ್‌ನ ಮಿಷನ್ ಸ್ಪೆಷಲಿಸ್ಟ್ ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನೀವ್ಸ್ಕಿ, ಹಂಗೇರಿಯದ ಗಗನಯಾನಿ ಟಿಬೋರ್ ಕಾಪು ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಭೂಮಿಯತ್ತ ಪ್ರಯಾಣ ಬೆಳೆಸಿದ್ದಾರೆ. ಐಎಸ್‌ಎಸ್‌ನಿಂದ ಯಶಸ್ವಿಯಾಗಿ ಹೊರಟಿರುವ ಡ್ರ‍್ಯಾಗನ್ ನೌಕೆ ಜುಲೈ 5ರಂದು ಭಾರತೀಯ ಕಾಲಮಾನ ಮಧ್ಯಾಹ್ನ 3ಕ್ಕೆ ಭೂಮಿ ತಲುಪಲಿದೆ.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 18 ದಿನಗಳ ಬಾಹ್ಯಾಕಾಶಯಾನ ಮುಗಿಸಿ ಭೂಮಿಯತ್ತ ಪ್ರಯಾಣ ಮಾಡಿರುವ ಈ ಗಗನಯಾತ್ರಿಗಳನ್ನು ಹೊತ್ತು ಕರೆತರುತ್ತಿರುವ ಡ್ರ‍್ಯಾಗನ್ ನೌಕೆ ನಾಳೆ ಮಧ್ಯಾಹ್ನ ಕ್ಯಾಲಿಫೋರ್ನಿಯಾದ ಕರಾವಳಿ ಪ್ರದೇಶದಲ್ಲಿ ಇಳಿಯಲಿದೆ. 'ಈ ಸಮಯ ಸರಿಸುಮಾರು 1 ಗಂಟೆಯ ಅಂತರವನ್ನು ಹೊಂದಿವೆ' ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಭೂ ವಿಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.

ಭೂಮಿಗೆ ವಾಪಾಸ್ ಹೊರಡುವ ಮುನ್ನ ಶುಭಾಂಶು ಶುಕ್ಲಾ ಐಎಸ್‌ಎಸ್‌ನಲ್ಲಿ ಮಾಡಿದ ತಮ್ಮ ವಿದಾಯ ಭಾಷಣ ಮಾಡಿದ್ದು, "41 ವರ್ಷಗಳ ಹಿಂದೆ ಭಾರತೀಯರೊಬ್ಬರು ಬಾಹ್ಯಾಕಾಶಕ್ಕೆ ಬಂದರು. ಭಾರತವು ಮೇಲಿನಿಂದ ಹೇಗೆ ಕಾಣುತ್ತದೆ ಎಂದು ಅವರು ನಮಗೆ ಹೇಳಿದರು. ಇಂದಿನ ಭಾರತವು ಬಾಹ್ಯಾಕಾಶದಿಂದ ಮಹತ್ವಾಕಾಂಕ್ಷೆಯಂತೆ ಕಾಣುತ್ತಿದೆ, ಇಂದಿನ ಭಾರತವು ನಿರ್ಭೀತವಾಗಿ ಕಾಣುತ್ತಿದೆ, ಇಂದಿನ ಭಾರತವು ಆತ್ಮವಿಶ್ವಾಸದಿಂದ ಕಾಣುತ್ತಿದೆ, ಇಂದಿನ ಭಾರತವು ಹೆಮ್ಮೆಯಿಂದ ತುಂಬಿದೆ. ಇಂದಿನ ಭಾರತವು ಇನ್ನೂ 'ಸಾರೆ ಜಹಾಂ ಸೆ ಅಚ್ಚಾ' ಎಂದು ಕಾಣುತ್ತದೆ. ಬಾಹ್ಯಾಕಾಶ ಪರಿಶೋಧನೆಯಲ್ಲಿ ನಮ್ಮ ಮುಂದಿನ ಪ್ರಯಾಣ ದೀರ್ಘ ಮತ್ತು ಕಷ್ಟಕರವಾಗಿರಬಹುದು, ಆದರೆ ಅದು ಪ್ರಾರಂಭವಾಗಿದೆ ಎಂಬುದಂತೂ ನಿಜ" ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026