LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಚಿತ ಹೃದಯರೋಗ, ನರರೋಗ, ಮೂತ್ರಪಿಂಡದ ಕಲ್ಲು ಕಾಯಿಲೆಗಳ ಹಾಗೂ ಕಣ್ಣಿನ ತಪಾಸಣಾ ಶಿಬಿರ ಯಶಸ್ವಿ.

ಗಂಗಾವತಿ:  ಶೇಷಾದ್ರಿ ಶಿಕ್ಷಣ ಸಂಸ್ಥೆ (ರಿ) ಗಂಗಾವತಿ  ಮಂಜುನಾಥ ಆಸ್ಪತ್ರೆ ಗಂಗಾವತಿ, ಸ್ವಾಮಿ ವಿವೇಕಾನಂದ ಸೇವಾ ಸಂಘ (ರಿ) ಶ್ರೀರಾಮನಗರ, ಎಸ್.ಎಸ್ ಸ್ಪರ್ಶ್ ಆಸ್ಪತ್ರೆ ಬೆಂಗಳೂರು ಹಾಗೂ ಐದೃಷ್ಟಿ ಕಣ್ಣಿನ ಆಸ್ಪತ್ರೆ ಹೊಸಪೇಟೆ ಇವರುಗಳ ಸಂಯುಕ್ತಾಶ್ರಯದಲ್ಲಿ ಗಂಗಾವತಿ ನಗರದ ಹೊಸಳ್ಳಿ ರಸ್ತೆಯ ಕನಕದಾಸ ವೃತ್ತದಲ್ಲಿರುವ  ಮಂಜುನಾಥ ಆಸ್ಪತ್ರೆಯಲ್ಲಿ ಜೂನ್-13 ಗುರುವಾರ ಬೃಹತ್ ಉಚಿತ ಹೃದಯರೋಗ ಹಾಗೂ ಕಣ್ಣಿನ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.ಈ ಶಿಬಿರಕ್ಕೆ ಗಂಗಾವತಿಯ ತಹಶೀಲ್ದಾರ ಗ್ರೇಡ್-2 ಆದ ಮಾಂತಗೌಡ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ಸ್ವಾಮಿ ವಿವೇಕಾನಂದ ಸೇವಾ ಸಂಘದ ಅಧ್ಯಕ್ಷರಾದ ಜಿ. ರಾಮಕೃಷ್ಣ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಮಾಜಿ ನಗರಸಭೆ ಸದಸ್ಯರಾದ ಪರಮೇಶಪ್ಪ ಈಡಿಗರ, ಬಿಜೆಪಿ ಹಿರಿಯ ಮುಖಂಡ ಶ್ರವಣಕುಮಾರ ರಾಯಕರ ಆಗಮಿಸಿದ್ದರು.ಶಿಬಿರದಲ್ಲಿ ತಜ್ಞರ ಸಲಹೆ ಮೇರೆಗೆ ಉಚಿತವಾಗಿ ಸುಮಾರು 30 ಇ.ಸಿ.ಜಿ, 2ಡಿ ಎಕೋ ಸ್ಕ್ಯಾನಿಂಗ್, ಶುಗರ್ ಪರೀಕ್ಷೆ ಮಾಡಲಾಯಿತು. ಈ ವೇಳೆ ವಿವೇಕಾನಂದಸೇವಾ ಸಂಘದ ಅಧ್ಯಕ್ಷ ಜಿ. ರಾಮಕೃಷ್ಣ ಮಾತನಾಡಿ ಈ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 200ಕ್ಕೂ ಅಧಿಕ ರೋಗಿಗಳಿಗೆ ತಪಾಸಣೆ ಮಾಡಲಾಗಿದೆ. ಸುಮಾರು 150 ಜನರಿಗೆ ಕಣ್ಣಿನ ತಪಾಸಣೆ ಮಾಡಲಾಗಿದ್ದು, ಅದರಲ್ಲಿ 20 ಜನ ಕಣ್ಣಿನ ರೋಗಿಗಳಿಗೆ ಹೊಸಪೇಟೆಯ ಐದೃಷ್ಟಿ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತ ಶಸ್ತçಚಿಕಿತ್ಸೆಗೆ ನೋಂದಾಯಿಸಲಾಗಿದೆ ಮತ್ತು ಈ ಶಿಬಿರ ಯಶಸ್ವಿಯಾಗಲು ಸಹಕರಿಸಿದ ಎಸ್.ಎಸ್ ಸ್ಪರ್ಶð ಆಸ್ಪತ್ರೆ ಬೆಂಗಳುರು ಹಾಗೂ ವಿವಿಧ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳಿಗೆ, ಶಿಬಿರಕ್ಕೆ ಸ್ಥಳಾವಕಾಶ ನೀಡಿದ  ಮಂಜುನಾಥ ಆಸ್ಪತ್ರೆಯವರಿಗೆ ನಮ್ಮ ಸ್ವಾಮಿ ವಿವೇಕಾನಂದ ಸೇವಾ ಸಂಘದಿಂದ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.ಈ ವೇಳೆ ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಯ ವೈದ್ಯರುಗಳಾದ ಡಾ. ಮಧುಸೂದನ, ಡಾ. ಅಭಿಲಾಷ್ ಬನಶಾಳ, ಹೊಸಪೇಟೆಯ ಐದೃಷ್ಟಿ ಕಣ್ಣಿನ ಆಸ್ಪತ್ರೆಯ ವೈದ್ಯರಾದ ಡಾ. ಸಂದೀಪ,  ಮಂಜುನಾಥ ಆಸ್ಪತ್ರೆಯ ವೈದ್ಯರಾದ ಡಾ. ಕೃಷ್ಣಕುಮಾರ, ಡಾ. ಶರಣಕುಮಾರ ಹಾಗೂಇತರೆ ಸಿಬ್ಬಂಧಿಗಳು ಪಾಲ್ಗೊಂಡಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು