LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಣೇಶ ಚತುರ್ಥಿ ಪ್ರಸಾದಕ್ಕೆ FSSAI ಕಡ್ಡಾಯ; ಹಿಂದೂ ಹಬ್ಬದ ಆಚರಣೆಗೆ ಹುಳಿ ಹಿಂಡಿದ ಬಿಬಿಎಂಪಿ !

ಬೆಂಗಳೂರು : ಅನೇಕ ವರ್ಷಗಳಿಂದ ಹಿಂದೂ ಸಮಾಜ ಅತ್ಯಂತ ಶ್ರದ್ಧೆ ಮತ್ತು ಭಕ್ತಿಯಿಂದ ಗಣೇಶೋತ್ಸವವನ್ನು ಆಚರಿಸುತ್ತ ಬಂದಿದೆ. ಈ ಮೂಲಕ ಇಡೀ ಸಮಾಜ ಯಾವುದೇ ಬೇಧವಿಲ್ಲದೆ ಒಂದಾಗುತ್ತದೆ. ಈ ಗಣೇಶೋತ್ಸವ ಪೆಂಡಾಲುಗಳಲ್ಲಿ ತಲತಲಾಂತರಗಳಿಂದ ನಮ್ಮ ಬಂಧು ಮಿತ್ರರಿಗೆ ಪ್ರಸಾದ ಹಂಚುವುದು, ಅನ್ನ ಸಂತರ್ಪಣೆಯಂತಹ ಪುಣ್ಯಕಾರ್ಯಗಳನ್ನು ಮಾಡಲಾಗುತ್ತದೆ. ಈ ವೇಳೆ ಪೆಂಡಾಲುಗಳಲ್ಲಿ ಪ್ರಸಾದ ತಯಾರಿಸುವ ವ್ಯಕ್ತಿ FSSAI ಪ್ರಮಾಣಪತ್ರ ಪಡೆದಿರಬೇಕೆಂಬ ಕಡ್ಡಾಯ ಆದೇಶ ಜಾರಿಗೊಳಿಸಿ ಬಿಬಿಎಂಪಿ ಈ ಪುಣ್ಯಕಾರ್ಯದಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದೆ. ಇದನ್ನು ಹಿಂದೂ ಜನಜಾಗೃತಿ ಸಮಿತಿ ತೀವ್ರವಾಗಿ ಖಂಡಿಸುತ್ತದೆ.

ಅನೇಕ ಕಡೆಗಳಲ್ಲಿ ಗಣೇಶಭಕ್ತರು ಅತ್ಯಂತ ಶ್ರದ್ಧೆ ಭಕ್ತಿಯಿಂದ ತಮ್ಮ ತಮ್ಮ ಮನೆಗಳಲ್ಲಿ ಪ್ರಸಾದದ ತಯಾರಿ ಮಾಡಿ ಅದನ್ನು ಪೆಂಡಾಲುಗಳಲ್ಲಿ ಇತರರಿಗೆ ಹಂಚುತ್ತಾರೆ. ಹೀಗಿರುವಾಗ ಅಂಥವರು FSSAI ಸರ್ಟಿಫಿಕೇಟ್ ಎಲ್ಲಿಂದ ತರಬೇಕು ? ಇಫ್ತಾರ್ ಮತ್ತಿತರ ಸಂದರ್ಭದಲ್ಲಿ ಅಕ್ರಮವಾಗಿ ರಸ್ತೆ ಮಧ್ಯದಲ್ಲಿಯೇ ಅಡುಗೆ ಮಾಡಿ ವಿತರಣೆ ಮಾಡಲಾಗುತ್ತದೆ. ಇದರ ಗುಣಮಟ್ಟ ಪರಿಶೀಲನೆ ಬಗ್ಗೆ ಬಿಬಿಎಂಪಿ ಎಂದಾದರೂ ಪ್ರಶ್ನಿಸುವುದೇ ?

ಅನೇಕ ವರ್ಷಗಳಿಂದ ಹಿಂದೂ ಸಮಾಜ ಈ ಪ್ರಸಾದ ಸೇವೆ ಮಾಡುತ್ತಾ ಬಂದಿದೆ, ಇದುವರೆಗೆ ಇದರ ಬಗ್ಗೆ ಹಿಂದೂ ಸಮಾಜದಲ್ಲಿ ಯಾವುದೇ ಆಕ್ಷೇಪವಿಲ್ಲದಿರುವಾಗ ಬಿಬಿಎಂಪಿಗೆ ಇದರಲ್ಲಿ ಮೂಗು ತೂರಿಸುವ ಆವಶ್ಯಕತೆ ಏನಿದೆ ? ಕೇವಲ ಹಿಂದೂ ಹಬ್ಬಗಳ ಸಂದರ್ಭದಲ್ಲಿ ಇಂತಹ ಧೋರಣೆಗಳನ್ನು ತಂದು ಕಾಂಗ್ರೆಸ್ ಪನಃ ತನ್ನ ಹಿಂದೂದ್ವೇಷವನ್ನು ಎತ್ತಿ ಹಿಡಿದಿದ್ದಲ್ಲದೆ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನು ಹಿಂದೂ ಸಮಾಜ ಎಂದಿಗೂ ಸಹಿಸುವುದಿಲ್ಲ !
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆ