LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೇಕರಿಕಳ್ಳತನಕ್ಕೆ ಯತ್ನ ಅಂಗಡಿಮಾಲಿನಕನಿಂದ ಬೈಕ್ ಕಸಿದು ಕೊಂಡು ಹೊದ ಕದಿಮರ ಗ್ಯಾಂಗ್

ಸಿರುಗುಪ್ಪ ಮಾರ್ಚ್28. ತಾಲೂಕಿನ ಬಗ್ಗುರು ಕ್ರಾಸ್ ಬಳಿಇರುವ ಬಸವೇಶ್ವರ ಬೇಕರಿಯ ಶಟ್ಟರ್ ಕಳ್ಳತನ ಮಾಡಲು ಬಂದಿದ್ದ,ಕಳ್ಳರ ಗ್ಯಾಂಗೋಂದು ಬೇಕರಿ ಮಾಲಿಕನಿಂದಲೆ ಬೈಕ್ ಕಸಿದುಕೊಂಡು ಹೊದಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ.
ಬೋಲೆರೋ ಪಿಕಪ್ ವಾಹನದಲ್ಲಿ ಶುಕ್ರವಾರ ಬೆಳಗಿನ ಜಾವ 4: 30 ಸೂಮಾರಿಗೆ ಬಂದಿದ್ದ ಐದು ಜನ ಕಳ್ಳರ ತಂಡಒಂದು
ಬೇಕರಿಯ ಬಾಗಿಲು ಮುರಿಯುವ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಬೇಕರಿಯ ಮಾಲೀಕ ಹೇಮನಗೌಡ ಇಲ್ಲಿ ನೀವೇನು ಮಾಡುತ್ತಿದ್ದೀರಿ ಎಂದು ಕಳ್ಳರನ್ನು ವಿಚಾರಿಸಲು ಮುಂದಾದಾಗ, ನೀನು ಸರಿಯಾದ ಸಮಯಕ್ಕೆ ಬಂದಿದ್ದೀಯಾ, ನಿನ್ನ ದ್ವಿಚಕ್ರವಾಹನದ ಬೀಗದ ಕೈ ಕೊಡು ಎಂದು ಕನ್ನಡದಲ್ಲಿಯೇ ಮಾತನಾಡಿಬೇಕರಿ ಮಾಲೀಕನಿಂದ ದ್ವಿಚಕ್ರ ವಾಹನದ ಬೀಗದ ಕೈ ಕಸಿದುಕೊಂಡ ಕಳ್ಳರು ಬೈಕ್ ಹಾಕಿಕೊಂಡು ತಾವು ತಂದಿದ್ದ ಬೊಲೆರೋ ಪಿಕಪ್ ವಾಹನದೊಂದಿಗೆ ಆದೋನಿ ರಸ್ತೆಯ ಕಡೆಗೆ ತೆರಳಿದ್ದಾರೆ.


ಬೇಕರಿ ಮಾಲೀಕ ಹೇಮನಗೌಡ ಈ ಬಗ್ಗೆ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ವಿ.ಜಿ, ಉಪ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಬೇಕರಿ ಮಾಲೀಕನಿಂದ ಮಾಹಿತಿ ಪಡೆದರು.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಬಗ್ಗೆ ಸ್ಥಳ ಪರಿಶೀಲನೆ ಮಾಡಲಾಗಿದ್ದು, ಬೇಕರಿ ಮಾಲೀಕನಿಂದ ಮಾಹಿತಿ ಪಡೆದಿದ್ದೇವೆ, ದುಷ್ಕರ್ಮಿಗಳ ಪತ್ತೆಗಾಗಿ ವಿಶೇಷ ತಂಡ ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ ನೀಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು