LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇನ್ನು ತಾಲೂಕು ಪಂಚಾಯಿತಿಗಳ ಮೂಲಕ ಗೃಹಲಕ್ಷ್ಮಿ ಹಣ ಪಾವತಿ?

ಬೆಂಗಳೂರು: ಕಾಂಗ್ರೆಸ್‌ ಸರಕಾರದ ಮಹತ್ವಾಕಾಂಕ್ಷಿ ಕೊಡುಗೆಯಾಗಿರುವ ಗೃಹಲಕ್ಷ್ಮೀ ಗ್ಯಾರಂಟಿಯ ಹಣ ವಿತರಣೆ ಅಸಮರ್ಪಕವಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ತಾಲೂಕು ಪಂಚಾಯಿತಿಗಳ ಮೂಲಕ ಜಾರಿಗೊಳಿಸಲು ಸರಕಾರ ಮುಂದಾಗಿದೆ.

ಇಲ್ಲಿಯವರೆಗೆ ರಾಜ್ಯ ಕಾರ್ಯದರ್ಶಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರ ಮೂಲಕ ಹಣ ಪಾವತಿಯಾಗುತಿತ್ತು. ಇನ್ನು ಮುಂದೆ ರಾಜ್ಯ ಕಾರ್ಯದರ್ಶಿಯಿಂದ ತಾಲೂಕು ಪಂಚಾಯಿತಿಗೆ ಹಣ ಪಾವತಿ ಆಗಲಿದೆ. ತಾಲೂಕು ಪಂಚಾಯಿತಿಯಿಂದ ನೇರವಾಗಿ ಫಲಾನುಭವಿಗಳಿಗೆ ಹಣ ತಲುಪಲಿದೆ.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಇಲಾಖೆಯದ್ದೇ ಬಹಳಷ್ಟು ಜವಾಬ್ದಾರಿಯಿದೆ. ಈಗ ಗೃಹಲಕ್ಷ್ಮಿನಿಭಾಯಿಸುವುದು ಮತ್ತಷ್ಟು ಹೊರೆಯಾಗುತ್ತಿದೆ.

ಈ ಹೊರೆ ತಪ್ಪಿಸುವ ಸಲುವಾಗಿ ಬದಲಾವಣೆ ಮಾಡಲು ಇಲಾಖೆ ಮುಂದಾಗಿದೆ ಎನ್ನಲಾಗುತ್ತಿದೆ.ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯುರ ಖಾತೆಗೆ ಬಂದಿಲ್ಲ. ಹೀಗಾಗಿ ಹಣ ಪಾವತಿಯ ಕಾರ್ಯವಿಧಾನದಲ್ಲೇ ಬದಲಾವಣೆ ಮಾಡಲು ಮುಂದಾಗಿದೆ. ಈ ವಿಚಾರದ ಬಗ್ಗೆ ಈಗ ಇಲಾಖೆ ಹಂತದಲ್ಲಿ ಚರ್ಚೆ ನಡೆಯುತ್ತಿದೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಆರೋಗ್ಯ ಸ್ಥಿತಿ ಸುಧಾರಣೆಯಾದ ಬಳಿಕ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆಯಿದೆ.ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹಣದ ಕೊರತೆಯಾಗಿದೆ ಎಂದು ಕಾಂಗ್ರೆಸ್‌ ಶಾಸಕರೇ ಮಾತನಾಡಿಕೊಳ್ಳುತ್ತಿದ್ದಾರೆ. ಈಗ ಗೃಹಲಕ್ಷ್ಮಿ ಕಂತು ಪಾವತಿಗೂ ಹಣದ ಕೊರತೆ ಉಂಟಾಗಿದೆ. ಹೀಗಾಗಿ 3 ಕಂತು ಪಾವತಿ ಮಾಡಿಲ್ಲ ಎಂದು ಎಂದು ಮಹಿಳೆಯರು ಮಾತನಾಡಿಕೊಳ್ಳುತ್ತಿದ್ದಾರೆ.ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಹಣ ಪ್ರತಿ ತಿಂಗಳು ರೈತರ ಖಾತೆಗೆ ಜಮೆ ಆಗುತ್ತಿದೆ. ಇದು ದೇಶವ್ಯಾಪಿ ನಡೆಯುತ್ತಿರುವಾಗ ಗೃಹಲಕ್ಷ್ಮಿ ಹಣ ಪಾವತಿಗೆ ಕಷ್ಟ ಆಗಲಾರದು ಎಂದು ಸರಕಾರ ಭಾವಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಅತ್ಯಾಚಾರ ಮತ್ತು ಅಟ್ರಾಸಿಟಿ ಕೇಸ್ ದಾಖಲು.!ಮೊಂಥಾ ಚಂಡಮಾರುತದ ಅಬ್ಬರ: ಇಂದಿನಿಂದ 5 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ.!ಮತಾಂತರಕ್ಕೆ ಒಪ್ಪದ ಪ್ರಿಯತಮೆಗೆ ಕೈಕೊಟ್ಟ ಲವ್ ಜಿಹಾದ್ ಆರೋಪಿ ಅರೆಸ್ಟ್ಪ್ರಧಾನಿ ಮೋದಿ ವಿರುದ್ಧ ಹತ್ಯೆ ಸಂಚು? - ವೈರಲ್ ಆಗುತ್ತಿರುವ ನಿಗೂಢ ವರದಿಗಳು!ಐಎಎಸ್ ಆಯುಷಿ ದಬಾಸ್ ಯಶಸ್ಸಿನ ಕಥನನಿಮ್ಮ ಏಳಿಗೆ ಪ್ರಗತಿ ಸಹಿಸದ ಶತ್ರುಗಳಿಗೆ ಅಷ್ಟಮಂಡಲ ಹಾಕುವ ಕಪ್ಪು ಕವಡೆಗಳಿಂದ ಶತ್ರುನಾಶ ಸರಳ ತಂತ್ರ ಮಾಡಬಹುದು!ಕೆ.ಎಲ್.ಇ. ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ.!ಡಿಸೆಂಬರ್ ಅಥವಾ ಮಾರ್ಚ್‍ನಲ್ಲಿ ರಾಷ್ಟ್ರಮಟ್ಟದ: ಖೋ ಖೋ ಪಂದ್ಯಾವಳಿ: ದಿನೇಶ್ ಕೆ.ಶೆಟ್ಟಿವಚನ.: -ನಗೆಯ ಮಾರಿತಂದೆಪ್ರಚೋದನಕಾರಿ ಹೇಳಿಕೆ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್.!