Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಭಾರತದ ನೂತನ ಸಿಡಿಎಸ್ ಆಗಿ ಜನರಲ್ ರಾಜಾ ಸುಬ್ರಮಣಿ ಅಧಿಕಾರ ಸ್ವೀಕಾರ

ನವದೆಹಲಿ: ಭಾರತದ ನೂತನ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಆಗಿ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರು ಭಾನುವಾರ (ಮೇ 31) ಅಧಿಕಾರ ವಹಿಸಿಕೊಂಡಿದ್ದಾರೆ. ಮೂರೂ ಸೇನಾ ಪಡೆಗಳ ನಡುವೆ ಸಮನ್ವಯತೆಯನ್ನು ಬಲಪಡಿಸುವುದು ಮತ್ತು ಮಿಲಿಟರಿ ಥಿಯೇಟರ್ ಕಮಾಂಡ್ ಯೋಜನೆ ಜಾರಿಗೆ ತರುವುದು ಅವರ ಪ್ರಮುಖ ಆದ್ಯತೆಗಳಾಗಿವೆ.
ಜನರಲ್ ಸುಬ್ರಮಣಿ ಅವರ ಬಗ್ಗೆ…
ಪಾಕಿಸ್ತಾನ ಮತ್ತು ಚೀನಾ ವಿಷಯಗಳಲ್ಲಿ ರಕ್ಷಣಾ ತಜ್ಞರೆಂದು ಹೆಸರಾಗಿರುವ ಜನರಲ್ ಸುಬ್ರಮಣಿ ಅವರು, ಸಿಡಿಎಸ್ ಆಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯದಲ್ಲಿ (NSCS) ಮಿಲಿಟರಿ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ವರ್ಷ ಜುಲೈ 31 ರಂದು ಅವರು ಸೇನಾ ಉಪ ಮುಖ್ಯಸ್ಥರಾಗಿ (ವೈಸ್ ಚೀಫ್ ಆಫ್ ಆರ್ಮಿ ಸ್ಟಾಫ್) ನಿವೃತ್ತರಾಗಿದ್ದರು.

ಸಿಡಿಎಸ್ ಆಗಿ ಜನರಲ್ ಸುಬ್ರಮಣಿ ಅವರ ಪ್ರಾಥಮಿಕ ಜವಾಬ್ದಾರಿಯು, ಮೂರೂ ಸೇವೆಗಳ ನಡುವೆ ಜಂಟಿ ಕಾರ್ಯಾಚರಣೆಯನ್ನು ‘ಸಮಗ್ರ ಥಿಯೇಟರ್ ಕಮಾಂಡ್’ಗಳ ರಚನೆ ಮತ್ತು ಅನುಷ್ಠಾನದ ಮೂಲಕ ಮಿಲಿಟರಿ ಥಿಯೇಟರೈಸೇಶನ್ ಯೋಜನೆಯನ್ನು ಮುನ್ನಡೆಸುವುದಾಗಿದೆ.
ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ತಮ್ಮ ಸುದೀರ್ಘ ಮತ್ತು ಮಿಲಿಟರಿ ವೃತ್ತಿಜೀವನದಲ್ಲಿ, ಅವರು ವ್ಯಾಪಕ ಶ್ರೇಣಿಯಯಲ್ಲಿ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಹಲವು ಪ್ರಮುಖ ಕಮಾಂಡ್, ಸ್ಟಾಫ್ ಮತ್ತು ತರಬೇತಿ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅವರು ಜುಲೈ 1, 2024 ರಿಂದ ಜುಲೈ 31, 2025 ರವರೆಗೆ ಸೇನಾ ಉಪ ಮುಖ್ಯಸ್ಥರಾಗಿ ಮತ್ತು ಅದಕ್ಕೂ ಮುನ್ನ ಮಾರ್ಚ್ 2023 ರಿಂದ ಜೂನ್ 2024 ರವರೆಗೆ ಸೆಂಟ್ರಲ್ ಕಮಾಂಡ್‌ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ