LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಣ್ಣಿನ ವಾಸನೆಯೊಂದಿಗೆ ಬದುಕುವ ಕಿಲಾರಿಗಳಲ್ಲಿ ಸಮರ್ಪಣಾ ಮನೋಭಾವ: ಗೊಲ್ಲಹಳ್ಳಿ ಶಿವಪ್ರಸಾದ್.!

 

ಚಿತ್ರದುರ್ಗ : ಮಣ್ಣಿನ ವಾಸನೆಯೊಂದಿಗೆ ಬದುಕುವ ಕಿಲಾರಿಗಳಲ್ಲಿ ಸಮರ್ಪಣಾ ಮನೋಭಾವವಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಹೇಳಿದರು.

ಕರ್ನಾಟಕ ಜಾನಪದ ಅಕಾಡೆಮಿ, ಸ್ನಾತಕೋತ್ತರ ಅಧ್ಯಯನ ವಿಭಾಗಗಳ ಸಹಯೋಗದೊಂದಿಗೆ ಇಲ್ಲಿನ ಸರ್ಕಾರಿ ಕಲಾ ಕಾಲೇಜು(ಸ್ವಾಯತ್ತ) ಇಲ್ಲಿ ಸೋಮವಾರ ನಡೆದ ಕಿಲಾರಿ ಕಲರವ ಉದ್ಗಾಟಿಸಿ ಮಾತನಾಡಿದರು.

ಗುಡುಗು, ಸಿಡಿಲು, ಮಳೆ, ಗಾಳಿ ಇದ್ಯಾವುದನ್ನು ಲೆಕ್ಕಿಸದೆ ಸಮಾಜ, ನೆಲ, ಸಮುದಾಯ ಪ್ರಕೃತಿಗಾಗಿ ಬದುಕುವ ಕಿಲಾರಿಗಳು ಬೆಳ್ಳಿ, ಬಂಗಾರ, ಕಂಚು

ಹಿತ್ತಾಳೆ ಯಾವುದಕ್ಕೂ ಆಸೆ ಪಡುವವರಲ್ಲ. ಪ್ರಕೃತಿಯೊಂದಿಗೆ ಬದುಕನ್ನು ಸಮರ್ಪಿಸಿಕೊಳ್ಳುವ ಕಿಲಾರಿಗಳನ್ನು ಒಳಗಣ್ಣಿನಿಂದ ನೋಡಬೇಕು. ಬಾಹ್ಯ ಸೌಂದರ್ಯಕ್ಕೆ ಆಕರ್ಷಿತರಾಗಿ ಮಾನವ ಹಾಳಾಗುತ್ತಿದ್ದಾನೆಂದು ವಿಷಾಧಿಸಿದರು.

ಬುದ್ದ, ಬಸವ, ಅಂಬೇಡ್ಕರ್ ಇವರುಗಳನ್ನೆಲ್ಲಾ ಒಂದೊಂದು ಹೆಜ್ಜೆಯನ್ನಾಗಿಸಿಕೊಂಡು ನಡೆಯಬೇಕು. ಕಿಲಾರಿಗಳು ಕಾವ್ಯವನ್ನು ಸೃಷ್ಟಿಸಿಲ್ಲ. ಆದರೂ ಕವಿಗಳು. ಯುದ್ದ, ಆಕ್ರಮ, ರಕ್ತವನ್ನು ಬಯಸುತ್ತದೆ. ಬುದ್ದ ಶಾಂತಿಯನ್ನು ಪ್ರತಿಪಾದಿಸುತ್ತಾನೆ. ಹೆಣ್ಣು-ಗಂಡನ್ನು ಸಮಾನವಾಗಿ ನೋಡುವ ಕಣ್ಣುಗಳು ಬೇಕು. ಮಾತೊಂದು, ಮನಸ್ಸೊಂದು

ನಡೆಯೊಂದು, ನುಡಿಯೊಂದಿದ್ದಾಗ ಸಮ ಸಮಾಜ ಕಟ್ಟಲು ಆಗುವುದಿಲ್ಲ. ಮೊಬೈಲ್ನಿಂದ ಆತಂಕ. ಭಯ ಕಾಡುತ್ತಿದೆ. ಪರಂಪರೆಯ ಪಾದದ ಸ್ಪರ್ಶ ಮರೆತಿದ್ದೇವೆ. ಬೂಟಾಟಿಕೆ, ಆಡಂಭರ, ಅಟ್ಟಹಾಸವಿರುವ ಕಡೆ ವಾಸ್ತವವಿರುವುದಿಲ್ಲ. ಅಸಹನೆ, ಅಹಂಕಾರ, ಇರುವ ಕಡೆ ಸ್ನೇಹ ಸಂಬಂಧಕ್ಕೆ ಜಾಗವಿರುವುದಿಲ್ಲ. ಪ್ರೀತಿಗಿಂತ ದೊಡ್ಡ ಆಯುಧ ಜಗತ್ತಿನಲ್ಲಿ ಯಾವುದೂ ಇಲ್ಲ. ವಕ್ರವಾದ ಸಂಸ್ಕøತಿ, ಅಭಿವೃದ್ದಿಯ ವೇಗದಲ್ಲಿ ಸಂಬಂಧಗಳು ನಶಿಸುತ್ತಿವೆ ಎಂದರು.

ಕನ್ನಡ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ.ಜೆ.ಕರಿಯಪ್ಪ ಮಾಳಿಗೆ ಮಾತನಾಡಿ ನಿರ್ಲಕ್ಷಿತ ಸಮುದಾಯಗಳ ಜ್ಞಾನ, ಪರಂಪರೆಯನ್ನು ಶೋಧಿಸುವ ಸಂಶೋಧನೆಗಳು ನಡೆಯಬೇಕು. ನೆಲದ ಅರಿವು, ಪ್ರಜ್ಞೆ, ಬೆಳಕು, ತತ್ವಪದಕಾರರ ನಾಥ, ಸಿದ್ದ, ಅವಧೂತರ ಪರಂಪರೆಯನ್ನು ಒಳಗೊಂಡಂತೆ ಕಿಲಾರಿಗಳ ಚರಿತ್ರೆಯನ್ನು ಶೈಕ್ಷಣಿಕ ಶಿಸ್ತಿನೊಳಗೆ ದಾಖಲಿಸುವ ಪ್ರಯತ್ನವಾಗಬೇಕೆಂದರು.

ಬಯಲ ಬದುಕನ್ನು ಕಟ್ಟಿಕೊಂಡ ಬಡುಕಟ್ಟು ಸಮುದಾಯದ ಚರಿತ್ರೆ ಮತ್ತು ಜ್ಞಾನವನ್ನು ಸಮಕಾಲೀನ ಸಂದರ್ಭಕ್ಕೆ ಮುಖಾಮುಖಿಗೊಳಿಸುವ ಅನಿವಾರ್ಯತೆಯಲ್ಲಿದ್ದೇವೆಂದು ಹೇಳಿದರು. ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಿ.ಟಿ.ತಿಪ್ಪೇರುದ್ರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇಂಗ್ಲಿಷ್ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥೆ ತಾರಿಣಿ ಶುಭದಾಯಿನಿ, ಸಮಾಜಶಾಸ್ತ್ರ ವಿಭಾಗದ ಪ್ರೊ.ಯಶೋಧಮ್ಮ, ಸಾಂಸ್ಕøತಿಕ ಕಾರ್ಯದರ್ಶಿ ಕೆ.ಮಂಜುನಾಥ್ ವೇದಿಕೆಯಲ್ಲಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದ ವಿವಿಧ ಬ್ಯಾಂಕ್ ಗಳಲ್ಲಿ 150 ಕೋಟಿ ರೂ. ಕಳ್ಳತನ : ದಾವಣಗೆರೆಯಲ್ಲಿ ಖತರ್ನಾಕ್ ವಂಚಕ ಅರೆಸ್ಟ್!ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್ಅ.17ಕ್ಕೆ ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ ಮೊದಲ ಹಾರಾಟಪಿಎಫ್ಐ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ಮುಸ್ಲಿಂ ಧರ್ಮಗುರು ಬಂಧನ..!!ಮದುವೆಯಾದ ಪುರುಷರು ಪರ ಸ್ತ್ರೀಯರ ಮೇಲೆ ವ್ಯಾಮೋಹ ಹೊಂದಲು ಅಕ್ರಮ ಸಂಬಂಧಗಳ ಸುಳಿಯಲ್ಲಿ ಸಿಲುಕಲು ಕಾರಣವೇನು ತಿಳಿಯಿರಿ!ಸೈಕಲ್ ರಿಪೇರಿ ಮಾಡುತ್ತಿದ್ದ ವರುಣ್ ಬರನ್ವಾಲ್ ಐಎಎಸ್ ಅಧಿಕಾರಿಯಾದ ಕಥೆ'ನಮ್ಮಂತೆ ಪಾಕ್ ಕೂಡ ಭಯೋತ್ಪಾದನೆ ನಿರ್ನಾಮ ಮಾಡ್ಬೇಕು'- ಭಾರತದಿಂದ ತಾಲಿಬಾನ್ ಸಚಿವ ಸಲಹೆಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಯಡಿಯೂರಪ್ಪರಿಗೆ ತಪ್ಪದ ಸಂಕಷ್ಟ.!ಬೆಂಗಳೂರು ಸೇರಿದಂತೆ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ ಈ ಜಿಲ್ಲೆಗಳಲ್ಲಿ.!ಡ್ರಗ್ಸ್ ಜಾಲ;: ಜಿಲ್ಲೆಯಲ್ಲಿ ನಶೆ ಮುಕ್ತವಾಗಿಸಲು ಎಸ್.ಪಿ ರಂಜಿತ್ಕುಮಾರ್ ಭಂಡಾರು ಮನವಿ