Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಪ್ರವಾಸಿಗರಿಗೆ ಗುಡ್ ನ್ಯೂಸ್: ಕೆಎಸ್‌ಆರ್‌ಟಿಸಿಯಿಂದ ವಾರಾಂತ್ಯದ ವಿಶೇಷ ಪ್ಯಾಕೇಜ್ ಟೂರ್‌

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ  ಬೆಂಗಳೂರು ಕೇಂದ್ರೀಯ ವಿಭಾಗವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾರಾಂತ್ಯದ ದಿನಗಳಲ್ಲಿ (ಶನಿವಾರ ಮತ್ತು ಭಾನುವಾರ) ವಿವಿಧ ಪ್ರವಾಸಿ ತಾಣಗಳಿಗೆ ವಿಶೇಷ
'ಪ್ಯಾಕೇಜ್ ಟೂರ್' ಬಸ್ ಸೇವೆಗಳನ್ನು ಆರಂಭಿಸಿದೆ. ಈ ಪ್ರವಾಸಗಳಿಗೆ ರಾಜಹಂಸ ಮತ್ತು ಅಶ್ವಮೇಧ ಕ್ಲಾಸಿಕ್ ಬಸ್‍ಗಳನ್ನು ಬಳಸಲಾಗುತ್ತಿದ್ದು, ಪ್ರವೇಶ ಶುಲ್ಕ, ಉಪಹಾರ ಮತ್ತು ಊಟದ ವೆಚ್ಚವನ್ನು ಹೊರತುಪಡಿಸಿ ಕೇವಲ ಪ್ರಯಾಣ ದರವನ್ನು ಮಾತ್ರ ನಿಗದಿಪಡಿಸಲಾಗಿದೆ.

ಬೆಂಗಳೂರು - ಗಗನಚುಕ್ಕಿ ಪ್ರವಾಸ (ರಾಜಹಂಸ ಬಸ್):
ಈ ಪ್ರವಾಸವು ಸೋಮನಾಥಪುರ
, ತಲಕಾಡು, ಮಧ್ಯರಂಗ, ಭರಚುಕ್ಕಿ ಮತ್ತು ಗಗನಚುಕ್ಕಿ ತಾಣಗಳನ್ನು ಒಳಗೊಂಡಿದೆ. ಒಟ್ಟು 340 ಕಿ.ಮೀ ದೂರದ ಈ ಪ್ರಯಾಣಕ್ಕೆ ರಾಜಹಂಸ ಬಸ್ಸಿನ ವ್ಯವಸ್ಥೆಯಿದ್ದು, ವಯಸ್ಕರಿಗೆ 750 ರೂ. ಹಾಗೂ ಮಕ್ಕಳಿಗೆ 600 ರೂ. ದರ ನಿಗದಿಪಡಿಸಲಾಗಿದೆ. ಈ ಸೇವೆಯು 05-07-2025 ರಿಂದ ಜಾರಿಯಲ್ಲಿದೆ.

ಬೆಂಗಳೂರು - ಗಗನಚುಕ್ಕಿ ಪ್ರವಾಸ (ಅಶ್ವಮೇಧ ಕ್ಲಾಸಿಕ್):
ಪ್ರವಾಸಿ ತಾಣಗಳಾದ ಸೋಮನಾಥಪುರ
, ತಲಕಾಡು, ಮಧ್ಯರಂಗ ಮತ್ತು ಅವಳಿ ಜಲಪಾತಗಳ ವೀಕ್ಷಣೆಗೆ ಅಶ್ವಮೇಧ ಕ್ಲಾಸಿಕ್ ಬಸ್ಸಿನ ಆಯ್ಕೆಯೂ ಇದೆ. ಇದರ ಒಟ್ಟು ದೂರ 340 ಕಿ.ಮೀ ಆಗಿದ್ದು, ವಯಸ್ಕರಿಗೆ 600 ರೂ. ಮತ್ತು ಮಕ್ಕಳಿಗೆ 450 ರೂ. ದರವಿದೆ. ಈ ಸೇವೆಯು 20-07-2024 ರಿಂದಲೇ ಆರಂಭವಾಗಿದೆ.

ಬೆಂಗಳೂರು - ಚಿಕ್ಕತಿರುಪತಿ ಮತ್ತು ಕೋಲಾರ ಪ್ರವಾಸ:
ಧಾರ್ಮಿಕ ಆಸಕ್ತಿಯುಳ್ಳವರಿಗಾಗಿ ಈ ವಿಶೇಷ ಪ್ಯಾಕೇಜ್ ರೂಪಿಸಲಾಗಿದ್ದು
, ಇದರಲ್ಲಿ ಚಿಕ್ಕತಿರುಪತಿ, ಕೋಟೆಲಿಂಗೇಶ್ವರ, ಬಂಗಾರು ತಿರುಪತಿ, ಆವಣಿ, ಮುಳಬಾಗಿಲು, ಕುರುಡುಮಲೆ ಮತ್ತು ಕೋಲಾರ ಕ್ಷೇತ್ರಗಳ ದರ್ಶನ ಪಡೆಯಬಹುದು. 270 ಕಿ.ಮೀ ದೂರದ ಈ ಪ್ರವಾಸಕ್ಕೆ ಅಶ್ವಮೇಧ ಕ್ಲಾಸಿಕ್ ಬಸ್ ಲಭ್ಯವಿದ್ದು, ವಯಸ್ಕರಿಗೆ 600 ರೂ. ಹಾಗೂ ಮಕ್ಕಳಿಗೆ 450 ರೂ. ದರ ನಿಗದಿ ಮಾಡಲಾಗಿದೆ. ಇದು 28-06-2025 ರಿಂದ ಲಭ್ಯವಿದೆ.

ಬೆಂಗಳೂರು - ಮೇಲುಕೋಟೆ ಪ್ರವಾಸ:
ಐತಿಹಾಸಿಕ ತಾಣಗಳಾದ ಶ್ರೀರಂಗಪಟ್ಟಣ
, ಕಲ್ಪಳ್ಳಿ ಮತ್ತು ಮೇಲುಕೋಟೆ ವೀಕ್ಷಣೆಗೆ ಈ ಪ್ಯಾಕೇಜ್ ಪೂರಕವಾಗಿದೆ. 350 ಕಿ.ಮೀ ದೂರದ ಈ ಪ್ರಯಾಣಕ್ಕೆ ಅಶ್ವಮೇಧ ಕ್ಲಾಸಿಕ್ ಬಸ್ ಬಳಸಲಾಗುತ್ತಿದ್ದು, ವಯಸ್ಕರಿಗೆ 670 ರೂ. ಮತ್ತು ಮಕ್ಕಳಿಗೆ 500 ರೂ. ಪ್ರಯಾಣ ದರವಿದೆ. ಈ ಸೇವೆಯು 31-05-2025 ರಿಂದ ಜಾರಿಗೆ ಬಂದಿದೆ.

ಪ್ರಮುಖ ಸೂಚನೆ: ಈ ಮೇಲಿನ ಎಲ್ಲಾ ಪ್ಯಾಕೇಜ್‍ಗಳಲ್ಲಿ ಪ್ರವೇಶ ಶುಲ್ಕ, ಉಪಹಾರ ಮತ್ತು ಮಧ್ಯಾಹ್ನ ಅಥವಾ ರಾತ್ರಿಯ ಊಟದ ವೆಚ್ಚವನ್ನು ಪ್ರಯಾಣಿಕರೇ ಭರಿಸಬೇಕಾಗುತ್ತದೆ.

ಈ ಪ್ಯಾಕೇಜ್ ಟೂರ್‌ಗಳ ಪ್ರಯೋಜನ ಪಡೆಯಲು ಇಚ್ಛಿಸುವ ಸಾರ್ವಜನಿಕರು  ಕೆಎಸ್‌ಆರ್‌ಟಿಸಿಯ ಅಧಿಕೃತ ವೆಬ್‍ಸೈಟ್‍ಗಳಾದ www.ksrtc.in ಅಥವಾ www.ksrtc.karnataka.gov.in  ಮೂಲಕ ಟಿಕೆಟ್ ಕಾಯ್ದಿರಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗಳನ್ನು ದೂರವಾಣಿ ಸಂಖ್ಯೆ 080-26252625, ಮೊಬೈಲ್ ಸಂಖ್ಯೆ7760990100 / 7760990560 / 7760990287 ಗಳನ್ನು ಸಂಪರ್ಕಿಸಬಹುದು.

ವಾರಾಂತ್ಯದ ರಜೆಯನ್ನು ಸುಂದರ ಪ್ರವಾಸಿ ತಾಣಗಳ ವೀಕ್ಷಣೆಯೊಂದಿಗೆ ಕಳೆಯಲು ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ