LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಗತಿಗೆ ಅರಸು ಅಡಿಪಾಯ

ಬೆಂಗಳೂರು,ಜೂ. 06 : ದೇವರಾಜ ಅರಸು ಅವರು ನಮ್ಮ ರಾಜ್ಯದ ಪ್ರಗತಿಗೆ ಅಡಿಪಾಯ ಹಾಕಿದ್ದಾರೆ. 100 ವರ್ಷವಾದರೂ ಸಾಧನೆಗಳ ಮೂಲಕ ಅವರು ಜೀವಂತವಾಗಿರುತ್ತಾರೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜು ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು.
ದೇವರಾಜ ಅರಸು ಅವರು ನಮ್ಮನ್ನು ಅಗಲಿ 45 ವರ್ಷಗಳಾಗಿವೆ. ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ಅವರ ಭಾಷಣಗಳನ್ನು ಕೇಳಿದ್ದೇನೆ. ಅವರು ರಾಜಿನಾಮೆ ಕೊಟ್ಟಾಗ ಮಾಡಿದ ಕೊನೇ ಭಾಷಣ ನನ್ನ ಕಿವಿಯಲ್ಲಿ ಹಾಗೆ ಉಳಿದಿದೆ. ಅವರು ಯಾವ ಭಾವನೆಯೊಂದಿಗೆ ರಾಜಕಾರಣ, ಅಕಾರ ನಡೆಸಿದ್ದರು ಎಂದು ಅವರು ಹೇಳಿದ್ದರು. ಇಂದಿರಾ ಗಾಂಧಿ ಅವರ ಮಾರ್ಗದರ್ಶನದಲ್ಲಿ ಅರಸು ಅವರ ನಾಯಕತ್ವದಲ್ಲಿ ಉಳುವವನಿಗೆ ಭೂಮಿ ನೀಡಬೇಕು ಎಂದು ತಂದ ಭೂ ಸುಧಾರಣಾ ಕಾಯ್ದೆ ದೇಶಕ್ಕೆ ಒಂದು ಮಾದರಿ. ಅದೊಂದು ಕ್ರಾಂತಿ. ಅರಸು ಅವರೊಬ್ಬ ಮಂತ ನಾಯಕ. ಅವರು ಎಲ್ಲಾ ಜನಾಂಗದವರನ್ನು ಬೆಳೆಸಿ, ಹಿಂದುಳಿದ ವರ್ಗಗಳ ನಾಯಕರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಹಿಂದುಳಿದವರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಬೆಳೆಸಲು ಅವರು ಕ್ರಮ ಕೈಗೊಂಡರು ಎಂದು ಸ್ಮರಿಸಿದರು.
ಎಲೆಕ್ಟ್ರಾನಿಕ್ ಸಿಟಿ ನಿರ್ಮಾಣಕ್ಕೆ ಅರಸು ಅವರೇ ಕಾರಣ ಅಂದಿನ ಕಾಲದಲ್ಲಿ ಎಲೆಕ್ಟ್ರಾನಿಕ್ ಸಿಟಿಗೆ ಅಡಿಪಾಯ ಹಾಕಿದ ಮಂತ ನಾಯಕ. ರೈತರು ಮಾತ್ರವಲ್ಲ ಎಲ್ಲ ಕ್ಷೇತ್ರದ ಅಭಿವೃದ್ಧಿಗೆ ಕಾರಣರಾಗಿದ್ದರು. ಅವರು ಕೊಡುಗೆಯನ್ನು ನಾವು ಉಳಿಸಿ ಬೆಳೆಸಿಕೊಂಡು ಹೋಗುತ್ತಿದ್ದೇವೆ. ನಾನು ಮುಖ್ಯಮಂತ್ರಿಯಾಗಿ ಅಕಾರ ತೆಗೆದುಕೊಂಡ ಬಳಿಕ ಎಲ್ಲಾ ನಾಯಕರಿಗೆ ನಮನ ಅರ್ಪಿಸಿದ್ದೆ, ಇಂದು ಅರಸು ಅವರನ್ನು ಸ್ಮರಿಸುತ್ತಿದ್ದೇವೆ. ಅವರ ಮಾರ್ಗದರ್ಶನದಲ್ಲಿ ನಾವೆ ಲ್ಲರೂ ಹೆಜ್ಜೆ ಹಾಕೋಣ ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST