LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ. ಮೀರದಂತೆ ಸರ್ಕಾರ ಆದೇಶ

ಬೆಂಗಳೂರು: ಸಿನಿಪ್ರಿಯರಿಗೆ ಸಿಹಿ ಸುದ್ದಿ. ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್​ಗಳಲ್ಲಿ ಇನ್ಮುಂದೆ ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ.

ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ. ಸಿನಿಮಾ ಪ್ರದರ್ಶನದ ಟಿಕೆಟ್ ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಎಲ್ಲ ಭಾಷೆಯ ಸಿನಿಮಾಗಳಿಗೂ ಅನ್ವಯ ಆಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ.

ಕನ್ನಡ ಚಿತ್ರರಂಗ ಕಷ್ಟದಲ್ಲಿದೆ. ನಿರೀಕ್ಷಿತ ಪ್ರಮಾಣದ ಪ್ರೇಕ್ಷಕರು ಬಾರದೇ ಇರುವುದರಿಂದ ಅನೇಕ ಚಿತ್ರಮಂದಿರಗಳನ್ನು ಮುಚ್ಚಲಾಗಿದೆ. ಕರ್ನಾಟಕದಲ್ಲಿಯೇ ಪರಭಾಷೆ ಸಿನಿಮಾಗಳು ಬಹುಕೋಟಿ ರೂಪಾಯಿ ಮಾಡಿಕೊಳ್ಳುತ್ತವೆ. ಪರಭಾಷೆ ಸಿನಿಮಾಗಳ ಟಿಕೆಟ್​ಗಳು ಸಾವಿರ ರೂಪಾಯಿ ಮೀರಿದ ಉದಾಹರಣೆ ಕೂಡ ಇದೆ. ಆದ್ದರಿಂದ ಟಿಕೆಟ್ ಬೆಲೆ ಕಡಿಮೆ ಆಗಬೇಕು ಎಂಬುದು ಬಹುದಿನಗಳ ಬೇಡಿಕೆ ಆಗಿತ್ತು.

ಏಕಪರದೆ ಚಿತ್ರಮಂದಿರಗಳಿಗೆ ಹೋಲಿಸಿದರೆ ಮಲ್ಟಿಪ್ಲೆಕ್ಸ್​ಗಳಲ್ಲಿ ಸಿನಿಮಾಗಳ ಟಿಕೆಟ್ ಬೆಲೆ ದುಬಾರಿ ಆಗಿರುತ್ತದೆ. ಆ ಕಾರಣದಿಂದಲೇ ಜನರು ಚಿತ್ರಮಂದಿರಗಳಿಂದ ದೂರ ಉಳಿದುಕೊಂಡಿದ್ದಾರೆ ಎಂಬುದು ಅನೇಕರ ಅಭಿಪ್ರಾಯ ಆಗಿತ್ತು. ಹಾಗಾಗಿ ಸಿನಿಮಾಗಳ ಟಿಕೆಟ್ ಬೆಲೆ ತಗ್ಗಿಸಬೇಕು ಎಂದು ಹೇಳಲಾಗುತ್ತಿತ್ತು. ಅದಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದೆ.

2025-26ನೇ ಸಾಲಿನ ರಾಜ್ಯ ಬಜೆಟ್​ನಲ್ಲಿ ಸರ್ಕಾರ ಈ ಬಗ್ಗೆ ಪ್ರಕಟಿಸಿತ್ತು. ಮಲ್ಟಿಪ್ಲೆಕ್ಸ್​ಗಳಲ್ಲಿ ಎಗ್ಗಿಲ್ಲದೇ ಏರಿಕೆ ಆಗುತ್ತಿದ್ದ ಟಿಕೆಟ್ ಬೆಲೆಗೆ ಕಡಿವಾಳ ಹಾಕಲು ಸರ್ಕಾರ ಮುಂದಾಗಿತ್ತು. ಈಗ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಇನ್ಮುಂದೆ ಪ್ರೇಕ್ಷಕರಿಗೆ ಟಿಕೆಟ್ ಬೆಲೆಯ ಹೊರೆ ಕಡಿಮೆ ಆಗಲಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026