LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಉತ್ತರಕ್ಕೆ ಬಿಎಸ್ ಪಿ ಪಕ್ಷೇತರ ಅಭ್ಯರ್ಥಿಯಾಗಿ ಗೋವಿಂದಯ್ಯ ನಾಮಪತ್ರ ಸಲ್ಲಿಕೆ

ಬೆಂಗಳೂರು : ಬೆಂಗಳೂರು ಉತ್ತರದಿಂದ ಬಿಎಸ್ಪಿ ಪಕ್ಷದ ಪಕ್ಷೇತರ ಅಭ್ಯರ್ಥಿಯಾಗಿ ಗೋವಿಂದಯ್ಯ ಅವರು ಕಂದಾಯ ಭವನದಲ್ಲಿ ಜಿಲ್ಲಾಧಿಕಾರಿ ದಯಾನಂದ ಅವರಿಗೆ ನಾಮಪತ್ರವನ್ನು ಸಲ್ಲಿಸಿದರು.

ಗೋವಿಂದಯ್ಯ ಅವರು ನಾಮಪತ್ರ ಸಲ್ಲಿಸುವ ವೇಳೆ ಸರಳವಾಗಿ ಕಚೇರಿಗೆ ತೆರಳಿ ತಮ್ಮ ದಾಖಲೆಗಳನ್ನು ನೀಡಿದರು, ನಂತರ ಮಾತನಾಡಿದ ಅವರು, ಬಿ ಎಸ್ ಪಿ ಪಕ್ಷದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜಿಲ್ಲಾ ಅಧ್ಯಕ್ಷನಾಗಿ ಸಾಕಷ್ಟು ಕಾರ್ಯವನ್ನು ನಿರ್ವಹಿಸಿದ್ದೇನೆ, ಅಲ್ಲದೆ ಪಕ್ಷ ಸಂಘಟನೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ ಎಂದು ತಿಳಿಸಿದರು.

ಬಿಜೆಪಿಯಿಂದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಕುಮಾರಿ ಶೋಭಾ ಕರಂದ್ಲಾಜೆಯವರು ಸ್ಪರ್ಧೆ ಮಾಡಿದ್ದು ಈ ಹಿಂದೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿದ್ದರು. ಈ ಬಾರಿ ಅವರಿಗೆ ಟಿಕೆಟ್ ನೀಡದೆ ಬಿಜೆಪಿಯವರು ಬೆಂಗಳೂರು ಉತ್ತರಕ್ಕೆ ಟಿಕೆಟ್ ನೀಡಿರುವುದು ಯಾವ ಪುರುಷಾರ್ಥಕ್ಕಾಗಿ ಎಂಬುದು ಗೊತ್ತಾಗಿಲ್ಲ, ಶೋಭಾ ಕರಂದ್ಲಾಜೆ ಅವರಿಗೆ ತಮ್ಮ ತವರು ಕ್ಷೇತ್ರವನ್ನು ಬಿಟ್ಟು ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಟಿಕೆಟ್ ನೀಡಿರುವುದು ಗೆಲ್ಲುವ ಅನುಮಾನ ನೂರಕ್ಕೆ ನೂರು ಸುಳ್ಳು ಎಂದು ತಿಳಿಸಿದರು ಅವರು ಯಾವುದೇ ಕೆಲಸ ಕಾರ್ಯಗಳನ್ನು ಮಾಡಿಲ್ಲ ಅವರ ಮೇಲೆ ಸಾಕಷ್ಟು ಹಗರಣಗಳು ಅವರ ಮೇಲೆ ಇದೆ ಎಂದು ತಿಳಿಸಿದರು.

ಈ ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ನಾನು ಅಲ್ಲೇ ಹುಟ್ಟಿ ಬೆಳೆದಿರುವ ಕಾರಣ ಅಲ್ಲಿನ ಎಲ್ಲಾ ಜನರಿಗೂ ಸಹ ನಾನು ಚಿರಪರಿಚಿತ ನಾಗಿದ್ದೇನೆ ಹಾಗೆ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದೇನೆ, ಹೀಗಾಗಿ ಈ ಬಾರಿ ಕ್ಷೇತ್ರದ ಜನ ನನ್ನನ್ನು ಕೈಬಿಡುವುದಿಲ್ಲ, ಅವರ ನಂಬಿಕೆಯಿಂದ ಸ್ಪರ್ಧೆ ಮಾಡಿದ್ದೇನೆ ಎಂದು ತಿಳಿಸಿದರು.

ಇನ್ನು ನಾಮಪತ್ರ ಸಲ್ಲಿಸಬೇಡಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಧ್ಯಕ್ಷರಾಗಿರುವ ಗೋವಿಂದಯ್ಯ ಅವರ ಜೊತೆಗೆ ಪಕ್ಷದ ಪದಾಧಿಕಾರಿಗಳು ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆಚಲನಚಿತ್ರ ಪೋಷಕ ಕಲಾವಿದರ ಸಂಘದ ಚುನಾವಣೆಗೆ ನ್ಯಾಯಾಲಯದ ತಡೆಭಾರತಿ ಟೀಚರ್ 7ನೇ ತರಗತಿಗೆ @ 50ರ ಸಂಭ್ರಮಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳುಅಂಕಿ-ಅಂಶಗಳ ಬಜೆಟ್‌, ದಿಕ್ಕು ದಿಸೆಯಿಲ್ಲದ ಆಯವ್ಯಯ’: ಅರವಿಂದ ಬೆಲ್ಲದಮಾ.21ರಂದು ರಾಮಾನಂದಾಚಾರ್ಯರ ಆಧ್ಯಾತ್ಮಿಕ ಪ್ರವಚನಗ್ರಾಮ ಸಹಾಯಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯಜನ್ಮಧಾತೆ ಕನ್ನಡ ಸಿನೆಮಾ ಮಾ.20 ರಂದು ಪ್ರದರ್ಶನಕನ್ನಡಿಗರ ಉದ್ಯೋಗಿಗಳನ್ನು ಕೇಂದ್ರ ಸರ್ಕಾರ ಅತಂತ್ರ ಸ್ಥಿತಿಗೆ ತಳ್ಳಿದೆ: ಸಿಎಂ