LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲಿಂಗಸೂರನಲ್ಲಿ ಅಕ್ಕ ಕೆಫೆ ವೀಕ್ಷಣೆ ಮಾಡಿದ ಜಿಪಂ ಸಿಇಓ

 

ರಾಯಚೂರು, ಜುಲೈ 21):ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕಾಂದೂ ಅವರು ಜುಲೈ 19ರಂದು ಲಿಂಗಸೂಗೂರು ತಾಲೂಕಿಗೆ ತೆರಳಿ ಅಲ್ಲಿನ ತಾಲೂಕು ಪಂಚಾಯತಿ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಅಕ್ಕ ಕೆಫೆಯ ವೀಕ್ಷಣೆ ನಡೆಸಿದರು.
ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರೇ ಅಕ್ಕ ಕೆಫೆ ನಿರ್ವಹಣೆ ಮಾಡಬೇಕು. ತಾಲೂಕು ಪಂಚಾಯತ್ ಕಾರ್ಯನಿರ್ವಾಹ ಅಧಿಕಾರಿಗಳೊಂದಿಗೆ ಎನ್‌ಆರ್‌ಎಲ್‌ಎಂ ಸಿಬ್ಬಂದಿಯು ಸಭೆ ಮಾಡಿ ಊಟ ಮತ್ತು ಉಪಹಾರದ ದರಪಟ್ಟಿ ನಿಗದಿಮಾಡಿಕೊಳ್ಳಬೇಕು ಎಂದು ಸಿಇಓ ಅವರು ಸೂಚನೆ ನೀಡಿದರು. ಈ ಕೆಫೆಯಲ್ಲಿ ದೂಮಪಾನ, ಮಧ್ಯಪಾನ ಮಾಡದಂತೆ ಕಟ್ಟುನಿಟ್ಟಿನ ಕ್ರಮವಹಿಸಬೇಕು. ಸಿ.ಸಿ ಟಿವಿ ಕ್ಯಾಮರಾ, ಬೆಂಕಿ ನಿಯಂತ್ರಣ ಯಂತ್ರ ಅಳವಡಿಸಬೇಕು. ಅಕ್ಕ ಕೆಫೆ ನಿರ್ವಹಣೆ ಮಾಡಲು ನೀಡಿರುವ ಕಟ್ಟಡಕ್ಕೆ ಬಾಡಿಗೆ ನಿಗದಿಪಡಿಸುವಂತೆ ಸೂಚಿಸಿದರು.
ಅಕ್ಕ ಕೆಫೆಯ ಮುಖ್ಯ ಬಾಗಿಲಿನ ಮುಂದೆ ಮೇಲ್ಚಾವಣೆಯ ನೀರು ಬೀಳುವುದನ್ನು ತಪ್ಪಿಸಿ ಹಿಂಭಾಗದಲ್ಲಿ ಪೈಪು ಅಳವಡಿಸಿ ನೀರು ಹರಿಬಿಡಬೇಕು ಎಂದು ಸಿಇಓ ಅವರು ಸಲಹೆ ಮಾಡಿದರು. ಈ ಕೆಫೆ ನಿರ್ವಹಣೆಯನ್ನು ಮಾಡಲು ಪುರುಷರಿಗೆ ಅವಕಾಶವಿರುವುದಿಲ್ಲ ಎಂಬುದರ ಬಗ್ಗೆ ತಿಳಿಯಬೇಕು ಎಂದು ಸಿಇಓ ಅವರು ತಿಳಿಸಿದರು.
ಅಕ್ಕ ಕೆಫೆಯ ಉದ್ಘಾಟನೆ ಮಾಡುವ ಮುಂಚಿತವಾಗಿ ಸ್ವ-ಸಹಾಯ ಗುಂಪಿನ ಸದಸ್ಯರಿಗೆ ತರಬೇತಿ ನೀಡಬೇಕು ಹಾಗೂ ಅಕ್ಕ ಕೆಫೆಯನ್ನು 15 ದಿನದೊಳಗೆ ಉದ್ಘಾಟನೆ ಮಾಡುವಂತೆ ಸಿಇಓ ಅವರು ನಿರ್ದೇಶನ ನೀಡಿದರು.
ವಿಶೇಷ ಮಹಿಳೆಯರಿಗೆ ಕೆಫೆ ನಿರ್ವಹಣೆ ಮಾಡುವ ವ್ಯವಸ್ಥೆ ಮಾಡಬೇಕು. ಸುಮಾರು 2 ರಿಂದ 3 ಎಸ್‌ಎಚ್‌ಜಿಯವರಿಂದ ಅಕ್ಕ ಕೆಫೆ ನಿರ್ವಹಣೆ ಮಾಡಬೇಕು. ಸ್ಥಳೀಯವಾಗಿ ತಯಾರಿಸುವ ವೆಜ್ ನಾನ್ ವೆಜ್ ಉಪಹಾರಗಳನ್ನು ಸಿದ್ಧಪಡಿಸುವಂತೆ ಸೂಚಿಸಿದರು.
ಅಕ್ಕ ಕೆಫೆ ನಿರ್ವಹಣೆ ಮಾಡುವ ಸದಸ್ಯರು ಸಮವಸ್ತ್ರದೊಂದಿಗೆ ಕೆಫೆಯಲ್ಲಿ ಕಾರ್ಯನಿರ್ವಹಿಸಬೇಕು. ಈ ಕೆಫೆ ನಿರ್ವಹಣೆ ಮಾಡುವ ಗುಂಪು ಹಾಗೂ ತಾಲೂಕು ಪಂಚಾಯತ್ ನಡುವೆ ಒಪ್ಪಂದ ಮಾಡಿಕೊಳ್ಳಬೇಕು ಎಂದು ಸಿಇಓ ಅವರು ತಿಳಿಸಿದರು.
ಈ ವೇಳೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ರ‍್ಡಿಪಿಆರ್ ಸಹಾಯಕ ನಿರ್ದೇಶಕರು, ತಾಲೂಕು ಯೋಜನಾಧಿಕಾರಿಗಳು, ತಾಲೂಕ ಪಂಚಾಯತ್ ಮತ್ತು ಎನ್‌ಆರ್‌ಎಲ್‌ಎಂ ಸಿಬ್ಬಂದಿ ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು