LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ಗೃಹಲಕ್ಷ್ಮಿ’ ಯಿಂದ ಬದುಕಿಗೆ ಹೊಸ ಚೈತನ್ಯ ಮೂಡಿದೆ: ಮುಖ್ಯಮಂತ್ರಿಗಳ ಎದುರು ಗೃಹಲಕ್ಷ್ಮಿಯರ ಪ್ರಶಂಸೆ

ಬೆಳಗಾವಿ, : ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

*ಮನೆಯಲ್ಲಿ ಕಲಹ ತಂದಿದೆ ಎಂಬ ಬಿಜೆಪಿ ಆರೋಪ ಸುಳ್ಳು*

ಇಂದು ಗೃಹಲಕ್ಷ್ಮಿ ಯೋಜನೆಯ ಹಣದಿಂದ ನಾನಾ ಬದುಕಿನ ಅವಕಾಶಗಳನ್ನು ಸೃಷ್ಟಿಸಿಕೊಂಡ 25 ಕ್ಕೂ ಹೆಚ್ಚು ಮಂದಿ ಫಲಾನುಭವಿಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ. ಗೃಹಲಕ್ಷ್ಮಿ ಯೋಜನೆಯಿಂದ ಫಲಾನುಭವಿಗಳ ಜೀವನದಲ್ಲಿ ಆಗಿರುವ ಲಾಭಗಳ ಬಗ್ಗೆ ವಿವರಿಸಿದ್ದಾರೆ. ಬದುಕಿಗೆ ಹೊಸ ಚೈತನ್ಯ ನೀಡಿದ ಗೃಹಲಕ್ಷ್ಮಿ ಯೋಜನೆಯನ್ನು ಸಾಕಾರಗೊಳಿಸಿದ ಮುಖ್ಯಮಂತ್ರಿಗಳು, ಇಲಾಖೆಯ ಸಚಿವರು ಹಾಗೂ ಸರ್ಕಾರಕ್ಕೆ ಕೃತಜ್ಞರಾಗಿರುವುದಾಗಿ ಗೃಹಲಕ್ಷ್ಮಿಯರು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯಿಂದ ಒಂದೇ ಮನೆಯ ಅತ್ತೆ ಸೊಸೆಯ ಮಧ್ಯೆ ಜಗಳ ತಂದಿದೆ ಎಂದು ಬಿಜೆಪಿಯವರು ಆರೋಪಿಸಿದ್ದರು. ಆದರೆ ಇಂದಿನ ಕಾರ್ಯಕ್ರಮಕ್ಕೆ ಅತ್ತೆಸೊಸೆಯರೇ ಜೊತೆ ಜೊತೆಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯೋಜನೆಯಿಂದ ತಮಗಾಗಿರುವ ಲಾಭದ ಬಗ್ಗೆ ಮಾತನಾಡಿದ್ದಾರೆ.

ಈ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗುತ್ತಿರುವುದು ಸಂತೋಷದ ವಿಚಾರ. ಆದ್ದರಿಂದ ಮಹಿಳೆಯರನ್ನು ಸಶಕ್ತಗೊಳಿಸುವ ಈ ಯೋಜನೆಯನ್ನು ಮುಂದುವರಿಸಲಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿಯಾದ ಕಾರಣದ ಬಗ್ಗೆ ಮಾಧ್ಯಮದವರಿಗೆ ಉತ್ತರಿಸಿ, ಬೆಂಗಳೂರು ನಗರದ ರಸ್ತೆಗಳ ಅಭಿವೃದ್ಧಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ ಎಂದರು.

*ಬಿಜೆಪಿಯವರು ಸಂವಿಧಾನ ವಿರೋಧಿಗಳು*

*ಎಐಸಿಸಿ ಅಧಿವೇಶನಕ್ಕೆ ಅಡ್ಡಿಪಡಿಸಿದರೆ ಕಾನೂನಿನ ರೀತಿ ಕ್ರಮ*

ಎಐಸಿಸಿ ಅಧಿವೇಶನದ ದಿನವೇ , ಬಿಜೆಪಿಯವರು ವಕ್ಫ್ ಹೋರಾಟ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮಹಾತ್ಮಾಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸದೇ ಹೋಗಿದ್ದರೆ, ಎಲ್ಲರೂ ಸ್ವತಂತ್ರವಾಗಿರಲು ಸಾಧ್ಯವಾಗುತ್ತಿತ್ತೇ? ಸಂವಿಧಾನ ರಚನೆಯಾದ ನಂತರವೇ ಇಂತಹ ಹಕ್ಕುಗಳನ್ನು ಚಲಾಯಿಸಲು ಸಾಧ್ಯವಾಗಿರುವುದು.

ಗೋಲ್ವಾಲ್ಕರ್, ಹೆಡಗೆ, ಸಾವರ್ಕರ್ ಯವರು ಸೇರಿದಂತೆ ಬಿಜೆಪಿಯವರು ಸಂವಿಧಾನ ವಿರೋಧಿಗಳು. ಭಾರತೀಯತೆಯಲ್ಲಿ ನಂಬಿಕೆಯಿರಿಸದಿರುವ ಇವರು ಮನುಸ್ಮೃತಿಗೆ ಒತ್ತು ನೀಡುವವರಾಗಿದ್ದಾರೆ. ನಮ್ಮ ಮಹಾತ್ಮಾಗಾಂಧಿ ಆಧರಿಸಿದ ಎಐಸಿಸಿ ಅಧಿವೇಶನವನ್ನು ಅಡ್ಡಿಪಡಿಸಿದರೆ ಕಾನೂನಿನ ರೀತಿ ಕ್ರಮಕೈಗೊಳ್ಳಲಾಗುವುದು ಎಂದರು.

*ರಾಜಕಾರಣಕ್ಕಾಗಿ ಅಧಿವೇಶನವನ್ನು ಬಳಸಿಕೊಳ್ಳುತ್ತಿರುವ ಬಿಜೆಪಿ*

ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿಯವರು ಪದೇ ಪದೇ ಹೋರಾಟ ಮಾಡಿ ಅಡ್ಡಿಪಡಿಸುತ್ತಿರುವ ಬಗ್ಗೆ ಉತ್ತರಿಸಿ, ವಿರೋಧಪಕ್ಷವಾಗಿ ಬಿಜೆಪಿಯವರು ರಾಜ್ಯದ ಅಭಿವೃದ್ಧಿ ಬಗ್ಗೆ , ಸರ್ಕಾರದ ತಪ್ಪು ಒಪ್ಪುಗಳ ಬಗ್ಗೆ ಮಾತನಾಡಬೇಕು. ಆದರೆ ಅದನ್ನು ಹೊರತುಪಡಿಸಿ , ರಾಜಕೀಯ ಕಾರಣಗಳಿಗಾಗಿ ಅಧಿವೇಶನವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದರು.

*ಸಿಬಿಐಗೆ ವಹಿಸಿ ಎಂದು ಹೇಳಲು ಬಿಜೆಪಿಗೆ ನೈತಿಕತೆ ಇಲ್ಲ*

150 ಕೋಟಿ ಆಫರ್ ಹಾಗೂ ವಕ್ಫ್ ಪ್ರಕರಣಗಳನ್ನು ಸಿಬಿಐಗೆ ನೀಡಲಿ ಎಂದು ಬಿಜೆಪಿಯ ವಿಜಯೇಂದ್ರ ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2008 ರಿಂದ 2013ರವರೆಗೆ ಹಾಗೂ 2018 ರಿಂದ 2023ರವರೆಗೆ ಬಿಜೆಪಿಯವರು ಯಾವುದಾದರೂ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆಯೇ? ಅವರಿಗೆ ಈ ರೀತಿ ಹೇಳಲು ಯಾವುದೇ ನೈತಿಕತೆ ಇಲ್ಲ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳುಅಂಕಿ-ಅಂಶಗಳ ಬಜೆಟ್‌, ದಿಕ್ಕು ದಿಸೆಯಿಲ್ಲದ ಆಯವ್ಯಯ’: ಅರವಿಂದ ಬೆಲ್ಲದಮಾ.21ರಂದು ರಾಮಾನಂದಾಚಾರ್ಯರ ಆಧ್ಯಾತ್ಮಿಕ ಪ್ರವಚನಗ್ರಾಮ ಸಹಾಯಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯಜನ್ಮಧಾತೆ ಕನ್ನಡ ಸಿನೆಮಾ ಮಾ.20 ರಂದು ಪ್ರದರ್ಶನಕನ್ನಡಿಗರ ಉದ್ಯೋಗಿಗಳನ್ನು ಕೇಂದ್ರ ಸರ್ಕಾರ ಅತಂತ್ರ ಸ್ಥಿತಿಗೆ ತಳ್ಳಿದೆ: ಸಿಎಂಹಲಸೂರು ಕೆರೆ ಹೂಳೆತ್ತುವುದರಿಂದ ನೀರು ಸಂಗ್ರಹ ಅಂತರ್ಜಲ ವೃದ್ಧಿ :ಚೋಳನ್ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಒಟ್ಟು 78 ಲಕ್ಷ ರೂ ದಂಡಎಲ್ ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-CM ಸಿದ್ದರಾಮಯ್ಯ