LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾದಿಸಲು ಸರ್ಕಾರಕ್ಕೆ ನೆರವಾಗಿರುವ ಗ್ಯಾರಂಟಿ ಯೋಜನೆಗಳು

ಬೆಂಗಳೂರು: ವಿಶ್ವ ಸಂಸ್ಥೆಯು ಗೊತ್ತು ಮಾಡಿರುವ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ನೆರವಾಗಿವೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ತಿಳಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಿತ್ತೀಯ ಕಾರ್ಯನೀತಿ ಸಂಸ್ಥೆಯು ಐದು ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಖಾತರಿ (ಗ್ಯಾರಂಟಿ) ಯೋಜನೆಗಳ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಾತ್ಮಕ ಕುರಿತು ಕೈಗೊಂಡಿರುವ ಅಧ್ಯಯನಗಳ ಫಲಿತಾಂಶಗಳನ್ನು ಮತ್ತು ಕಾರ್ಯನೀತಿ ಸಲಹೆಗಳನ್ನು ಭಾಗೀದಾರ (Stakeholders) ಸರ್ಕಾರಿ ಇಲಾಖೆಗಳೊಂದಿಗೆ ಹಾಗೂ ಶೈಕ್ಷಣಿಕ ಸಂಸ್ಥೆಗಳ ತಜ್ಞರೊಂದಿಗೆ ಹಂಚಿಕೊಳ್ಳಲು ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದರೂ ನಾವು ಕೈಗೊಳ್ಳುವ ಜನಗಣತಿ ಹಾಗೂ ಇತರೆ ಅಧ್ಯಯನಗಳನ್ನು ಪರಿಶೀಲಿಸಿದಾಗ ಸಂವಿಧಾನದಲ್ಲಿ ಹೇಳಲಾಗಿರುವ ಹಕ್ಕು ಹಾಗೂ ಗುರಿಗಳನ್ನು ನಾವು ಇನ್ನೂ ಸಾಧಿಸಬೇಕಾಗಿದೆ. ಬಡತನ ನಿರ್ಮೂಲನೆ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ಮೊದಲನೆಯದಾಗಿದ್ದು, ಕರ್ನಾಟಕ ದೇಶದಲ್ಲಿಯೇ ಅತ್ಯಂತ ಹೆಚ್ಚಿನ ತಲಾ ಆದಾಯ ಹೊಂದಿರುವ ರಾಜ್ಯವಾಗಿದೆ. ಇದು ಸಾಧ್ಯವಾಗಿರುವುದು ಗ್ಯಾರಂಟಿ ಯೋಜನೆಗಳಿಂದ ಎಂದರು.

ಹಸಿವು ಮುಕ್ತ, ಪೌಷ್ಟಿಕ ಆಹಾರ ಕೂಡ ಸುಸ್ಥಿರ ಅಭಿವೃದ್ಧಿಯ ಗುರಿಗಳಾಗಿದ್ದು, ಗ್ಯಾರಂಟಿ ಯೋಜನೆಗಳು ಹಾಗೂ ಇತರೆ ಯೋಜನೆಗಳ ಸಂಯೋಜನೆಯಿಂದ ರಾಜ್ಯದ ಅಪೌಷ್ಟಿಕತೆ ಮಟ್ಟ ಸುಧಾರಿಸಿದೆ. ಯುವನಿಧಿ ಮೂಲಕ ಗುಣಮಟ್ಟದ ಶಿಕ್ಷಣವನ್ನು ಅರ್ಥಪೂರ್ಣವಾಗಿದೆ. ಕೌಶಲ್ಯ ತರಬೇತಿ ಹಾಗೂ ಹಣಕಾಸಿನ ನೆರವು ಒದಗಿಸುವ ಮೂಲಕ ಶೇಕಡ ನೂರರಷ್ಟು ಉದ್ಯೋಗವನ್ನು ಖಾತ್ರಿ ಪಡಿಸಲಾಗುತ್ತಿದೆ ಎಂದರು.

ಸುಸ್ಥಿರ ಅಭಿವೃದ್ಧಿ ಗುರಿಯಲ್ಲಿ ಲಿಂಗ ಸಮಾನತೆಯೂ ಒಂದಾಗಿದೆ. ಸರ್ಕಾರ ಮಹಿಳಾ ಆಧಾರಿತ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಿರುವ ಕಾರಣ ಎರಡು ವರ್ಷಗಳಲ್ಲಿ ಮಹಿಳಾ ಸಹಭಾಗಿತ್ವ 37% ಗೆ ಏರಿಕೆಯಾಗಿದೆ. ಮಹಿಳೆಯರಿಗೆ ಹೊಣೆಗಾರಿಕೆ ಹಾಗೂ ಸಂಪನ್ಮೂಲಗಳನ್ನು ಒದಗಿಸಿದರೆ ಇಡೀ ಕುಟುಂಬ ಹಾಗೂ ಸಮಾಜವನ್ನು ನಿಭಾಯಿಸುತ್ತಾರೆ ಎನ್ನುವುದನ್ನು ಇದು ರುಜುವಾತು ಮಾಡಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಎಷ್ಟರ ಮಟ್ಟಿಗೆ ಅನುಷ್ಟಾನಗೊಂಡಿವೆ ಎಂಬುದನ್ನು ಪ್ರತಿಷ್ಠಿತ ಸಂಸ್ಥೆಗಳು ನಡೆಸಿದ ಸಂಶೋಧನೆಗಳ ವರದಿಯು ತಿಳಿಸಿದೆ ಎಂದರು.

ಕಾರ್ಯಕ್ರಮದ ಪ್ರಧಾನ ಭಾಷಣ ಮಾಡಿದ ಚೆನ್ನೈನ ಎಂ.ಎಸ್ ಸ್ವಾಮಿನಾಥನ್ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾದ ಡಾ. ಸೌಮ್ಯ ಸ್ವಾಮಿನಾಥನ್ ಅವರು ಗ್ಯಾರಂಟಿ ಯೋಜನೆಗಳು ಜನರನ್ನು ಸೋಮಾರಿಗಳಾಗಿ ಮಾಡುತ್ತದೆ ಎಂಬುದು ಸುಳ್ಳು. ಈ ಯೋಜನೆಗಳಿಂದ ಬರುತ್ತಿರುವ ಹಣವನ್ನು ಜನರು ಮಕ್ಕಳ ವಿದ್ಯಾಭ್ಯಾಸಕ್ಕೆ, ಆರೋಗ್ಯ ಕಾಪಾಡಿಕೊಳ್ಳಲು, ಮನೆಯ ಅಗತ್ಯ ವಸ್ತುಗಳನ್ನು ಖರೀದಿಸಲು ಬಳಸುತ್ತಿರುವುದು ಸಮೀಕ್ಷೆಯಿಂದ ಸಾಭೀತಾಗಿದೆ. ಶಕ್ತಿ ಯೋಜನೆಯು ಸರ್ಕಾರವು ಮಹಿಳೆಯರಿಗೆ ಸ್ವಾತಂತ್ರ್ಯ ನೀಡಿರುವುದನ್ನು ತೋರಿಸುತ್ತದೆ. ಅನ್ನ ಭಾಗ್ಯವು ಬಡಜನರ ಹಸಿವನ್ನು ನಿವಾರಿಸಿದೆ. ಯುವನಿಧಿ ಯೋಜನೆಯು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಜೊತೆಗೆ ಉದ್ಯೋಗವನ್ನು ಅರಸಲು ನೆರವಾಗುತ್ತಿದೆ.

ಸಾರ್ವಜನಿಕರ ಮುಂದೆ ಸಂಶೋಧನೆಗಳನ್ನು ಹಂಚಿಕೊಳ್ಳುತ್ತಿರುವ ಕರ್ನಾಟಕ ಸರ್ಕಾರದ ನಡೆ ಪಾರದರ್ಶಕತೆ, ಕಲಿಕೆ ಹಾಗೂ ಉತ್ತರದಾಯಿತ್ವದೆಡೆಗೆ ಸರ್ಕಾರದ ಬದ್ಧತೆಯನ್ನು ಬಿಂಬಿಸುತ್ತದೆ. ಸಂಶೋಧನೆಗಳು ವರದಿಗಳಾಗಿ ಉಳಿಯದೇ ಜನರನ್ನು ತಲುಪುದು ಮುಖ್ಯ ಎಂದರು.

ಒಟ್ಟಿನಲ್ಲಿ ಮಹಿಳೆಯರ ಸವಾರ್ಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿರುವ ಸರ್ಕಾರವು ಗ್ರಾಮೀಣ ಭಾಗದ ರೈತ ಮಹಿಳೆಯರು ಕೃಷಿಯಲ್ಲಿ ಬಳಸಲು ಅನುಕೂಲವಾಗುವಂತಹ ಯಂತ್ರೋಪಕರಣಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಮುಂದಾಗಬೇಕು. ಈಗಿರುವ ಬಹುಪಾಲು ಕೃಷಿ ಯಂತ್ರೋಪಕರಣಗಳು ಪುರುಷ ರೈತರು ಬಳಸುವಂತಿವೆ. ರೈತರು ತಮ್ಮ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳುವ ಉದ್ದೇಶದಿಂದ ಅತಿಯಾಗಿ ಔಷಧಗಳನ್ನು ಸಿಂಪಡಣೆ ಮಾಡುತ್ತಿರುವುದರಿಂದ ಆರೋಗ್ಯದ ಮೇಲೆ ಪರಿಣಾಮವಾಗುತ್ತಿರುವುದರಿಂದ ಕೃಷಿ ವಿಶ್ವವಿದ್ಯಾನಿಲಯಗಳು ಅವರಿಗೆ ಸರಿಯಾದ ಮಾರ್ಗದರ್ಶ ನ ನೀಡುವುದು ಸೂಕ್ತ ಎಂದು ಅವರು ಸಲಹೆ ನೀಡಿದರು.

ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ತಲುಪಲು ಇನ್ನೂ ನಾಲ್ಕು ವರ್ಷಗಳು ಬಾಕಿ ಇದ್ದರೂ ಬಹುತೇಕ ದೇಶಗಳು ಇವುಗಳನ್ನು ತಲುಪುವಲ್ಲಿ ಹಿಂದುಳಿದಿವೆ. ಶೇ 30 ರಷ್ಟು ಸೂಚಕಗಳನ್ನು ಮಾತ್ರ ತಲುಪಿವೆ ಎಂದರು.
ಕೋವಿಡ್ ನಂತರದಲ್ಲಿ ಹವಾಮಾನ ಬದಲಾವಣೆ, ಆಹಾರ ಮತ್ತು ಪೌಷ್ಟಿಕತೆ, ಮುಂತಾದವುಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಸಾಧನೆಯಾಗಿಲ್ಲ. ಹವಾಮಾನ ಬದಲಾವಣೆಯಿಂದಾಗಿ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಮಾನವನ ಹಸ್ತಕ್ಷೇಪದಿಂದ ಜಾಗತಿಕ ತಾಪಮಾನ 2.5% ಏರಿಕೆಯಾಗುತ್ತಿರುವುದು ಆತಂಕಕಾರಿ ಸಂಗತಿ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್ ಮತ್ತು ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಿತೇಶ ಕುಮಾರ್ ಸಿಂಗ್ ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಉಪಾಧ್ಯಕ್ಷರುಗಳಾದ ಮೆಹರೂಜ್ ಖಾನ್, ಪುಷ್ಪ ಅಮರನಾಥ್, ದಿನೇಶ್ ಗೂಳಿಗೌಡ ಅವರು ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ