LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಖಾಸಗಿ ಅನುದಾನಿತ ಪ್ರೌಢಶಾಲೆಗಳಿಗೆ ಖುಷಿ ಸುದ್ದಿ.!

 

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದಂತ ಕ್ರಮಗಳನ್ನು ಸರ್ಕಾರ ಬಿಡುಗಡೆ ಮಾಡಿದೆ.

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ರಾಜ್ಯ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ: 01-01-2016 ರಿಂದ 31-12-2020 ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಉಲ್ಲೇಖ(2)ರ ಸರ್ಕಾರದ ಆದೇಶದಲ್ಲಿ ಅನುಮತಿ ನೀಡಲಾಗಿದೆ. ಸದರಿ ಆದೇಶದಲ್ಲಿ ಅನುದಾನಿತ ಪ್ರೌಢಶಾಲೆಗಳ ಖಾಲಿ ಹುದ್ದೆ ಭರ್ತಿ ಪ್ರಕ್ರಿಯೆಯನ್ನು ಆನ್‌ಲೈನ್ ತಂತ್ರಾಂಶದ ಮೂಲಕ ನಿರ್ವಹಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಪುಸ್ತಾವನೆಗಳನ್ನು ವ್ಯವಹರಿಸಲು ನಿರ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ ನೇಮಕಾತಿ ಪ್ರಕ್ರಿಯೆಯನ್ನು ಆನ್ ಲೈನ್ ಮುಖಾಂತರ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ ಎಂದಿದ್ದಾರೆ.

ಉಲ್ಲೇಖ-5ರ ಸುತ್ತೋಲೆಯಲ್ಲಿ ದಿನಾಂಕ:28-10-2024ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತಗೆದುಕೊಂಡ ನಿರ್ಣಯದಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿರುತ್ತದೆ. ಅದರಂತೆ ತಂತ್ರಾಂಶದ ಬಿಡುಗಡೆಯನ್ನು ತಡೆಹಿಡಿಯಲಾಗಿತ್ತು.

ಮುಂದುವರೆದು ತಂತ್ರಾಂಶದ ಮೊದಲ ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್ ನಲ್ಲಿ ಅನುದಾನಿತ ಶಾಲೆಗಳ ಮಂಜೂರಾದ, ಕಾರ್ಯನಿರತ ಮತ್ತು ಅರ್ಹ ಖಾಲಿ ಹುದ್ದೆಗಳ ಮಾಹಿತಿ ಇಂದೀಕರಿಸುವ ಪ್ರಕ್ರಿಯೆ ಒಳಗೊಂಡಿದ್ದು, ಈ ಹಂತದಲ್ಲಿ ಯಾವುದೇ ರೋಸ್ಟರ್ ಬಿಂದು ನಿಗದಿಪಡಿಸುವ ಪ್ರಕ್ರಿಯೆ ಇಲ್ಲದೇ ಇರುವುದರಿಂದ ಮೊದಲ ಹಂತದ ತಂತ್ರಾಂಶ ಬಿಡುಗಡೆಗೆ ಅನುಮತಿ ಕೋರಿ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರನ್ನು ಕೋರಲಾಗಿತ್ತು ಎಂದಿದ್ದಾರೆ.

ಸರ್ಕಾರದ ಜಂಟಿ ಕಾರ್ಯದರ್ಶಿಗಳು, ಸಮಾಜ ಕಲ್ಯಾಣ ಇಲಾಖೆ ಇವರು ಪೂರ್ವ ಸಿದ್ಧತಾ ಕಾರ್ಯಗಳನ್ನು ಕೈಗೊಳ್ಳಲು ಅನುಮತಿ ನೀಡಿರುತ್ತಾರೆ. ಈ ಹಿನ್ನಲೆಯಲ್ಲಿ ತಂತ್ರಾಂಶದ ಮೊದಲ ಹಂತವನ್ನು ಬಿಡುಗಡೆ ಮಾಡಲಾಗಿರುತ್ತದೆ ಎಂದು ಹೇಳಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಾವುದೇ ಕಾರಣಕ್ಕೂ ಸ್ವ ಸಹಾಯ ಗುಂಪುಗಳಿಗೆ ಬ್ಯಾಂಕ್ ಸಾಲ ನಿರಾಕರಣೆ ಮಾಡಬಾರದು ಸಿಇಓ ಡಾ.ಆಕಾಶ್.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ- 21-11-2025.!--ಶರಣೆ ಅಕ್ಕಮ್ಮಅವರ  ವಚನ.! ಮತ್ತೊಮ್ಮೆ ಟ್ರಾಫಿಕ್‌ ದಂಡದಲ್ಲಿ ಶೇಕಡ 50ರಷ್ಟು ಡಿಸ್ಕೌಂಟ್‌..!!10ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌ಭಾರತಕ್ಕೆ 93 ಮಿಲಿಯನ್ ಮೌಲ್ಯದ ಜಾವೆಲಿನ್ , ಎಕ್ಸಾಲಿಬರ್ ಕ್ಷಿಪಣಿಗಳ ಮಾರಾಟಕ್ಕೆ ಅಮೆರಿಕ ಅನುಮೋದನೆಮನೆಯಲ್ಲಿ ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ; ಕೊಲೆ ಶಂಕೆಬೆಂಗಳೂರಲ್ಲಿ 7 ಕೋಟಿ ದರೋಡೆ ಪ್ರಕರಣ – ವೆಬ್ ಸೀರೀಸ್ ನೋಡಿ ದರೋಡೆ ಮಾಡಿದ್ರ ರಾಬರ್ಸ್?ವೇಷ ಕಳಚುವ ಮುನ್ನವೇ ಮಹಿಷಾಸುರ ಕಲಾವಿದ ಹೃದಯಾಘಾತದಿಂದ ಮೃತ್ಯು!!ಧರ್ಮಸ್ಥಳ ಪ್ರಕರಣ : ಬರೋಬ್ಬರಿ 4 ಸಾವಿರ ಪುಟಗಳ ಚಾರ್ಜ್‌ಶೀಟ್‌ ರೆಡಿ