Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಅಪರೂಪದಲ್ಲೇ ಅಪರೂಪ : ಇವರೇ ನೋಡಿ ಆದರ್ಶ ಶಿಕ್ಷಕಿ !

ಗೀತೆಯ ಸಾರದಂತೆ ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ |...ನಿನ್ನ ಕರ್ತವ್ಯವನ್ನು ನೀನು ಮಾಡು ಪ್ರತಿಫಲ ನನಗೆ ಬಿಡು... ಎನ್ನುವ ಮಾತಿನಂತೆ ಶಿಕ್ಷಕ ವೃತ್ತಿಗೆ ನೆಚ್ಚಿಕೊಂಡ ಶಿಕ್ಷಕಿಯ ಕತೆ ಇದು.

ಬೆಳಗಾವಿ :ಪ್ರಶಸ್ತಿಗೆ ಬೆನ್ನು ಹತ್ತಿ ಹೋಗುತ್ತಿರುವ ಇಂದಿನ ದಿನಮಾನಗಳಲ್ಲಿ ಇಲ್ಲೊಬ್ಬರು ಅಪರೂಪದಲ್ಲೇ ಅಪರೂಪದ ಶಿಕ್ಷಕಿ ಮಾದರಿಯಾಗಿ ನಿಂತಿದ್ದಾರೆ. ತಮಗೆ ತಾಲೂಕು ಮಟ್ಟದ ಆದರ್ಶ ಶಿಕ್ಷಕಿ ಪ್ರಶಸ್ತಿ ಘೋಷಣೆಯಾಗಿದ್ದರೂ ಅದನ್ನು ಸ್ವೀಕರಿಸಲು ಹೋಗದೇ ಜತೆಗೆ ಪ್ರಶಸ್ತಿ ಬಂದಿರುವುದನ್ನು ಮನೆಯಲ್ಲೂ ಹೇಳದೇ ಎಲೆಮರೆಯ ಕಾಯಿಯಂತೆ ಇದ್ದು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡುವಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಶ್ರೇಷ್ಠ ಶಿಕ್ಷಕರಾಗಿ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿರುವ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಸವಿ ನೆನಪಿಗೆ ಆದರ್ಶ ಶಿಕ್ಷಕರನ್ನು ಗೌರವಿಸಲಾಗುತ್ತಿದೆ. ರಾಧಾಕೃಷ್ಣನ್ ಅವರ ಜನ್ಮದಿನವಾದ ಸೆಪ್ಟೆಂಬರ್ 5ರಂದು ಪ್ರತಿ ವರ್ಷ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದ ಶಿಕ್ಷಕ ಪ್ರಶಸ್ತಿಯನ್ನು ನೀಡುವ ಸಂಪ್ರದಾಯ ಬೆಳೆದು ಬಂದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಶಿಕ್ಷಕರು ನಾನಾ ಲಾಬಿಗಳ ಮೂಲಕ ವಿವಿಧ ಶಿಕ್ಷಕ ಪ್ರಶಸ್ತಿ ಪಡೆಯುವ ಮಾರ್ಗ ಅನುಸರಿಸುತ್ತಿರುವುದನ್ನು ಪ್ರಮುಖವಾಗಿ ಗಮನಿಸಬಹುದು. ಜೊತೆಗೆ ಪ್ರಶಸ್ತಿ ಪಡೆಯಲು ಬೇಕಾದ ವಾಮ ಮಾರ್ಗಗಳನ್ನು ಹಿಡಿಯಲು ಶಿಕ್ಷಕರು ಹಾಗೂ ಶಿಕ್ಷಕರನ್ನು ಪ್ರತಿನಿಧಿಸುವ ಸಂಘಟನೆಗಳು ಇರುವುದನ್ನು ಸಹಾ ಗಮನಿಸಬಹುದು. ಪ್ರಶಸ್ತಿ ಪಡೆದು ಗೌರವಿಸಿದ ಫೋಟೋವನ್ನು ಪತ್ರಿಕೆಗಳಲ್ಲಿ ಪ್ರಕಟವಾಗುವಂತೆ ನೋಡಿಕೊಳ್ಳುವ ಶಿಕ್ಷಕರಿಗೂ ಕೊರತೆ ಇಲ್ಲ. ಜೊತೆಗೆ ತಾವೇ ಹಣ ಕೊಟ್ಟು ತಮಗೆ ಸಿಕ್ಕ ಪ್ರಶಸ್ತಿಯ ಫೋಟೋವನ್ನೊಳಗೊಂಡ ಜಾಹೀರಾತನ್ನು ಹಾಕಿಕೊಳ್ಳುವ ಶಿಕ್ಷಕರಿಗೂ ಬರವಿಲ್ಲ.

ಅಂತಹ ಪರಿಪಾಠ ಇಂದು ಶಿಕ್ಷಕರಲ್ಲಿ ಬೆಳೆದು ಬಂದಿದೆ. ಆದರೆ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ನಾರಾಯಣಕೇರಿ ಶಾಲೆಯ ಈ ಶಿಕ್ಷಕಿ ಕಳೆದ ೧೩ ವರುಷಗಳಿಂದ ವಿಜ್ಞಾನ, ಇಂಗ್ಲೀಷ್ ಶಿಕ್ಷಕಿಯಾಗಿ ಮಾಡಿರುವ ಕಾರ್ಯ ಮಾತ್ರ ಇಡೀ ಶಿಕ್ಷಕ ಸಮುದಾಯಕ್ಕೆ ಅನುಕರಣೀಯವಾಗಿದೆ. ವಿದ್ಯಾರ್ಥಿಗಳಿಗೆ ಕಲಿಸುವುದನ್ನೇ ಕಾಯಕವನ್ನಾಗಿಸಿಕೊಂಡಿರುವ ಇಂತಹ ಶಿಕ್ಷಕ ಸಂಪತ್ತು ನೂರ್ಮಡಿಸಲಿ ಎನ್ನುವುದು 'ಜನಜೀವಾಳ"ದ ಶುಭಹಾರೈಕೆಯಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ