LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯ ಶಿಕ್ಷಕ ಯು. ಶ್ರೀನಿವಾಸ್ ರವರ ವಯೋನಿವೃತ್ತಿ ಬೀಳ್ಕೊಡುಗೆ ಸಮಾರಂಭ




ಕಂಪ್ಲಿ ಸಮೀಪದ ಎಂ ಸೂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಗುರುಗಳಾದ ಯು. ಶ್ರೀನಿವಾಸ್ ಅವರ ವಯೋನಿವೃತ್ತಿ ಹಿನ್ನೆಲೆ ಬೀಳ್ಕೊಡುಗೆ ಸಮಾರಂಭ ಸೋಮವಾರ ಅದ್ಧೂರಿಯಾಗಿ ಜರಗಿತು.


ಈ ಸಂದರ್ಭದಲ್ಲಿ ನಿವೃತ್ತ ಪ್ರಾಚಾರ್ಯ ಮಹಾಬಲೇಶಪ್ಪ ಮಾತನಾಡಿ ಶ್ರೀನಿವಾಸ್ ಅವರು ಬಹಳ ಸರಳ ಸಜ್ಜನಿಕೆ ವ್ಯಕ್ತಿ, ಪರಿಣಾಮಕಾರಿಯಾದ ಪಾಠ ಬೋಧನೆ ಮೂಲಕ ಎಲ್ಲಾ ವಿದ್ಯಾರ್ಥಿಗಳ ಮನಸ್ಸು ಗೆದ್ದ ಉತ್ತಮ ಶಿಕ್ಷಕ ಎಂದರು.


ಈ ಸಂದರ್ಭದಲ್ಲಿ ಶಿಕ್ಷಕರಾದ ಎಸ್. ರಾಮಪ್ಪ ಮಾತಾಡಿ ಶ್ರೀಯುತ ಶ್ರೀನಿವಾಸ ಸಾರ್ ರವರು ಬೀದರ್ ನ ಹುಮ್ನಾಬಾದಿನ ಹಳ್ಳಿಕೇಡು ಗ್ರಾಮದಲ್ಲಿ 1992 ರಲ್ಲಿ ವೃತ್ತಿ ಜೀವನ ಆರಂಭಿಸಿ ಇವರು ಸತತ 3 ವರ್ಷಗಳ ಕಾಲ ಸೇವೆ ಸಲ್ಲಿಸಿದರು. ನಂತರ ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕು ಎಮ್ಮಿಗನೂರು ಗ್ರಾಮಕ್ಕೆ 1995 ರಲ್ಲಿ ವರ್ಗಾವಣೆಯಾಗಿ ಬಂದು ಸರಿ ಸುಮಾರು 18 ವರ್ಷಗಳ ಕಾಲ ಸೇವೆ ಸಲ್ಲಿಸಿ, 2012ರಲ್ಲಿ ಮುಖ್ಯಗುರುಗಳಾಗಿ ಸಿರುಗುಪ್ಪ ತಾಲೂಕಿನ ಸಿರುಗುಪ್ಪ ಗ್ರಾಮದ ಎಂ ಸೂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ನಿಯೋಜನೆಯಾದರು ತಮ್ಮ ಅವಧಿಯಲ್ಲಿ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರರಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವ ಸಾಮರ್ಥ್ಯವನ್ನು ಸಹ ಮಕ್ಕಳಲ್ಲಿ ಬೆಳೆಸುವ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸಾಧನೆಗಳನ್ನು ಮಾಡಿದ್ದಾರೆ ಎಂದು ತಿಳಿಸಿದರು.


ಇದೇ ವೇಳೆ ಯು. ಶ್ರೀನಿವಾಸ್ ರವರ ದಂಪತಿಗಳನ್ನು 1997-98ನೇ ಸಾಲಿನಲ್ಲಿ ಶಿಕ್ಷಣ ಕಲಿತ ವಿದ್ಯಾರ್ಥಿ ತಂಡದಿಂದ ಹಾಗೂ ಶಾಲೆಯ ವತಿಯಿಂದ‌ ಹಳೇ ವಿದ್ಯಾರ್ಥಿಗಳು ಸೇರಿ ಸನ್ಮಾನಿಸಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳು ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಳೆ ವಿದ್ಯಾರ್ಥಿಗಳು ಸೇರಿದಂತೆ ಉಪನ್ಯಾಸಕರಾದ ಕುಮಾರ ಸ್ವಾಮಿ, ರಾಜಕುಮಾರ, ಜಡಪ್ಪ, ಬಸವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು