
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಮಾತನಾಡಿ " ಇಂದು ನಾವುಗಳೆಲ್ಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ಅವರ ಸಂಬಂಧಿಕರೊಂದಿಗೆ ಹಬ್ಬವನ್ನು ಆಚರಿಸುತ್ತಿರುವುದು ನಿಜಕ್ಕೂ ಸಂತಸ ತಂದಿದೆ " ಎಂದು ತಿಳಿಸಿದರು.
ಯುವ ಘಟಕದ ಅಧ್ಯಕ್ಷ ಲೋಹಿತ್ ಹನುಮಾಪುರ ಮಾತನಾಡಿ " ಪ್ರತಿ ವರ್ಷವೂ ನಾವು ಇದೇ ರೀತಿಯ ಅನೇಕ ಸಾರ್ಥಕ ಕಾರ್ಯಗಳನ್ನು ಯುವ ಘಟಕದಿಂದ ನಡೆಸಿಕೊಂಡು ಬರುತ್ತಿದ್ದೇವೆ. ಮುಂಬರುವ ದಿವಸಗಳಲ್ಲಿ ರಾಜ್ಯದ ಯುವಜನತೆಗೆ ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತೇವೆ .ಎಲ್ಲರಿಗೂ ಉತ್ತಮ ಆರೋಗ್ಯ ಸಿಗಲೆಂದು ಈ ಮೂಲಕ ಆಶಿಸುತ್ತಿದ್ದೇನೆ " ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಡಾ. ಸತೀಶ್ ಕುಮಾರ್, ಅನಿಲ್ ನಾಚಪ್ಪ ವಿಶ್ವನಾಥ್ , ಯುವ ಘಟಕದ ಪದಾಧಿಕಾರಿಗಳಾದತೇಜಸ್ವಿನಿ , ನಾಗರತ್ನ, , ವಿಜಯ್ , ಮಂಜುನಾಥ್,ಕೀರ್ತಿ, ದೃವ, ಸೋಮು , ಹರೀಶ್, ರಾಕೇಶ್ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.