Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಭಾರಿ ಕುತೂಹಲ-ಮಲಪ್ರಭಾ ಶುಗರ್ಸ್ : ಪುನಶ್ಚೇತನ ಪ್ಯಾನೆಲ್ ಗೆ ಭರ್ಜರಿ ಗೆಲುವು, ಯಾರಿಗೆ ಎಷ್ಟು ಮತ..?

ಬೆಳಗಾವಿ : ಭಾರೀ ಕುತೂಹಲ ಮೂಡಿಸಿದ್ದ ಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದ ಪುನಶ್ಚೇತನ ಪ್ಯಾನೆಲ್ ಭರ್ಜರಿ ಗೆಲುವು ಸಾಧಿಸಿದೆ.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ಬಾಬಾಸಾಹೇಬ ಪಾಟೀಲ, ವಿಠ್ಠಲ ಹಲಗೇಕರ್ ನೇತೃತ್ವದ ಪ್ಯಾನೆಲ್ ನಿಂದ ಸ್ಫರ್ಧಿಸಿದ್ದ ಎಲ್ಲ 15 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ವಿರೋಧಿ ಪ್ಯಾನೆಲ್ ಗಳು ಧೂಳಿಪಟವಾಗಿವೆ.

ಭಾನುವಾರ ನಡೆದ ಮತದಾನದಲ್ಲಿ ಶೇ.49.45 ಶಾಂತಿಯುತವಾಗಿ ಮತದಾನವಾಗಿತ್ತು. ಸಂಜೆ 5.30ಕ್ಕೆ ಮತದಾನ ಪೂರ್ಣಗೊಂಡಿತ್ತು. 15 ನಿರ್ದೇಶಕ ಸ್ಥಾನಗಳಿಗೆ ಒಟ್ಟು 44 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದರು. 34 ಮತಗಟ್ಟೆಗಳ 16,903 ಮತದಾರರಲ್ಲಿ 8,359 ರೈತರು ಮತಾಧಿಕಾರ ಚಲಾಯಿಸಿದ್ದಾರೆ. ತಡರಾತ್ರಿವರೆಗೂ ಮತ ಎಣಿಕೆ ನಡೆದಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರು ಫಲಿತಾಂಶಕ್ಕಾಗಿ ಮತಕೇಂದ್ರದ ಎದುರು ಕಾರಿನಲ್ಲಿ ಕಾಯ್ದು ಕುಳಿತಿರುವುದು ಕಂಡುಬಂದಿತು.

ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾರ್ಖಾನೆಯ ಎದುರು ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ರೈತರು ನಮ್ಮ ಮೇಲೆ ವಿಶ್ವಾಸವಿಟ್ಟು ಅಭೂತಪೂರ್ವ ಗೆಲುವು ನೀಡಿದ್ದಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಹಾಗೆಯೇ ಎಲ್ಲ ಕಾರ್ಮಿಕರಿಗೂ ಸಹ ಕೃತಜ್ಞತೆ ಸಲ್ಲಿಸುತ್ತೇವೆ. ಅವರ ವಿಶ್ವಾಸಕ್ಕೆ ತಕ್ಕಂತೆ ಆಡಳಿತ ನಡೆಸುತ್ತೇವೆ ಎಂದರು.

ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವುದು ಖಚಿತ. ಎಲ್ಲರ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಮಾಡಲಾಗುವುದು ಎಂದರು.

ಯಾರಿಗೆ ಎಷ್ಟು ಮತ..?
ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ನೇತೃತ್ವದ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನ ರೈತರ ಪೆನಲ್ ನಡಿ ಸಾಮಾನ್ಯ ಮತಕ್ಷೇತ್ರದಿಂದ ಸ್ಪರ್ಧಿಸಿದ್ದ ಚನ್ನರಾಜ ಬಸವರಾಜ ಹಟ್ಟಿಹೊಳಿ(4731), ಶ್ರೀಕಾಂತ ನಾಗಪ್ಪ ಇಟಗಿ(4424), ಶಿವನಗೌಡ ದೊಡಗೌಡ ಪಾಟೀಲ(4349), ಶಂಕರ ಪರಪ್ಪ ಕಿಲ್ಲೇದಾರ(4245), ಶ್ರೀಶೈಲ ಬಸಪ್ಪ ತುರಮರಿ(4183), ಶಿವಪುತ್ರಪ್ಪ ಬಸವಣ್ಣೆಪ್ಪ ಮರಡಿ(3838), ರಘು ಚಂದ್ರಶೇಖರ ಪಾಟೀಲ(3829), ರಾಮನಗೌಡ ಸಣಗೌಡ ಪಾಟೀಲ(3735), ಸುರೇಶ ಯಲ್ಲಪ್ಪ ಹುಲಿಕಟ್ಟಿ(3668), ಪ್ರವರ್ಗ-ಅ ಮತಕ್ಷೇತ್ರದಿಂದ ಫಕ್ಕೀರಪ್ಪ ಫಕ್ಕೀರಪ್ಪ ಸಕ್ರೆಣ್ಣವರ(4142), ಪ್ರವರ್ಗ-ಬ ಮತಕ್ಷೇತ್ರದಿಂದ ಶಂಕರೆಪ್ಪ ಸದಪ್ಪ ಹೊಳಿ(4507), ಮಹಿಳಾ ಮತಕ್ಷೇತ್ರದಿಂದ ಲಲಿತಾ ಬಾಲಚಂದ್ರ ಪಾಟೀಲ(4041), ಸುನಿತಾ ಮಹಾಂತೇಶ ಲಂಗೋಟಿ(3913), ಪರಿಶಿಷ್ಟ ಜಾತಿ ಮತಕ್ಷೇತ್ರದಿಂದ ಬಾಳಪ್ಪ ದುರಗಪ್ಪ ಪೂಜಾರ(3827) ಹಾಗೂ ಪರಿಶಿಷ್ಟ ಪಂಗಡ ಮತಕ್ಷೇತ್ರದಿಂದ ಭರಮಪ್ಪ ಕಲ್ಲಪ್ಪ ಶಿಗೇಹಳ್ಳಿ (4161) ಮತಗಳನ್ನು ಪಡೆದು ಜಯಶಾಲಿಗಳಾಗಿ ಆಯ್ಕೆಯಾಗಿದ್ದಾರೆ.

ಕಾರ್ಖಾನೆ ಗುರುತಿನ ಚೀಟಿ ಜತೆಗೆ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ವೋಟರ್ ಐಡಿ, ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್ ಗುರುತಿನ ಚೀಟಿಯಾಗಿ ಬಳಸಲು ಅವಕಾಶ ಕಲ್ಪಿಸಿದ್ದರಿಂದ ಈ ಸಲ ಮತದಾನಕ್ಕೆ ಮತ್ತಷ್ಟು ಅನುಕೂಲವಾಯಿತು.

ಕಾರ್ಖಾನೆ ಅಧಿಕಾರಿಗಳು ಸಿಬ್ಬಂದಿ ಮೂಲಕ ಗುರುತಿನ ಚೀಟಿ ಮರೆತು ಬಂದ ಮತದಾರರಿಗೆ ಷೇರು ಸಂಖ್ಯೆ ಹುಡುಕಿಕೊಡಲು ನೆರವಾದರು. ಅಂಗವಿಕಲರು, ವೃದ್ಧರನ್ನು ಮತದಾನಕ್ಕೆ ಕರೆತಂದಿದ್ದು ವಿಶೇಷವಾಗಿತ್ತು. ಶುಕ್ರವಾರ ಮತ್ತು ಶನಿವಾರ ಎಡಬಿಡದೆ ಸುರಿದ ಮಳೆ ಭಾನುವಾರ ವಿರಾಮ ನೀಡಿದ್ದರಿಂದ ಮತದಾನ ಸುಸೂತ್ರವಾಗಿ ನಡೆಯಿತು. ವೈದ್ಯಕೀಯ ಸೇವೆ, ವಾಹನಗಳ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ ಸೇರಿ ಎಲ್ಲ ಸಿದ್ಧತೆ ಮಾಡಲಾಗಿತ್ತು.

ಕಾರ್ಖಾನೆ ಮಾಜಿ ಅಧ್ಯಕ್ಷ ನಾಸಿರ್ ಬಾಗವಾನರ ರೈತರ ಹಾಗೂ ಕಾರ್ಮಿಕರ ಹಿತರಕ್ಷಣಾ ಪೆನಲ್ ಮತ್ತು ರೈತಸಂಘದ ಮುಖಂಡ ಬಸವರಾಜ ಮೊಕಾಶಿ ನೇತೃತ್ವದ ಕಬ್ಬು ಬೆಳೆಗಾರರ ಹಾಗೂ ಕಾರ್ಖಾನೆ ಅಭಿವದ್ಧಿ ಪೆನಲ್ ಸ್ಪರ್ಧೆಗಿಳಿದಿದ್ದರಿಂದ ಚುನಾವಣೆ ಪೈಪೋಟಿಯಿಂದ ಕೂಡಿತ್ತು. ಚುನಾವಣಾಧಿಕಾರಿಯಾಗಿ ಪ್ರಭಾವತಿ ಫಕೀರಪುರ ಕರ್ತವ್ಯ ನಿರ್ವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ