LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿಯ ಗಣರಾಜ್ಯೋತ್ಸವ- 2025: ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು ಹೇಮಂತ್ ನಿಂಬಾಳ್ಕರ್ ಮನವಿ

ನವದೆಹಲಿ: ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್ ಲೈನ್, ಇಮೇಲ್ ಮತ್ತು ಎಸ್ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರ ವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ, Lakkundi Cradle of stone Craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದೂ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

https://www.mygov.in/group-poll/vote-your-favourite-tableau-and-marching-contingent-republic-day-parade-2025/ ಕೊಂಡಿಯನ್ನು ಕ್ಲಿಕ್ ಮಾಡಿ, Login to participate ಮೇಲೆ ಕ್ಲಿಕ್ ಮಾಡಿ, ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವ ಒಟಿಪಿ ನಮೂದಿಸಿ, ನಂತರ Resend. OTP/ Submitted ಇದರಲ್ಲಿ submitt ಕ್ಲಿಕ್ ಮಾಡಿ, ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ.Lakkundi : cradle of stone craft ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು.

ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ MYGOVPOLL 357037,12 ಟೈಫ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಓಟ ಮಾಡಬಹುದಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂ