LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯ

ಪತಿ ಮಹಾಶಯನೊಬ್ಬ ತನ್ನ ಹೆಂಡತಿಯ ಕಣ್ಣುಗುಡ್ದೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ.

ಮಧ್ಯಪ್ರದೇಶದ ಶಿವಪುರಿಯ ಪೊಹ್ರಿ ಪ್ರದೇಶದಲ್ಲಿ ಚೋಟು ಖಾನ್ ಎಂಬಾತ ತನ್ನ ಪತ್ನಿ ಮೇಲೆ ಅನುಮಾನಗೊಂಡು ಈ ಕೃತ್ಯವೆಸಗಿದ್ದಾನೆ.

ಚೋಟು ಖಾನ್ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ, ಸದಾ ಕಾಲ ಪತ್ನಿ ಜೊತೆ ಅನಗತ್ಯವಾಗಿ ಅನುಮಾನಗೊಂಡು ಜಗಳವಾಡುತ್ತಿದ್ದ. ಇದೇ ಕಾರಣಕ್ಕೆ ಪತ್ನಿಗೆ ನಿನ್ನ ಮೊಬೈಲ್ ಕೊಡು ಎಂದು ಕೇಳಿದ್ದಾನೆ. ಇದಕ್ಕೆ ಪತ್ನಿ ನಿರಾಕರಿಸಿದ್ದಾಳೆ. ಇಷ್ಟಕ್ಕೇ ಕೋಪಗೊಂಡು ಮನ ಬಂದಂತೆ ಹಲ್ಲೆ ನಡೆಸಿದ್ದಾನೆ. ಅಷ್ಟಕ್ಕೇ ಆತನ ಕೋಪ ತಣ್ಣಗಾಗಿಲ್ಲ.ಚಾಕುವಿನಿಂದ ಪತ್ನಿಯ ಎರಡೂ ಕಣ್ಣುಗುಡ್ಡೆಗಳನ್ನು ಕಿತ್ತಿದ್ದಾನೆ. ಪತ್ನಿಯ ಖಾಸಗಿ ಅಂಗಗಳನ್ನು ಗಾಯಗೊಳಿಸಿದ್ದಾನೆ. ರಕ್ತದ ಮಡುವಲ್ಲಿ ಬಿದ್ದ ಪತ್ನಿಯ ಚೀರಾಟ, ಕೂಗಾಟ ಕೇಳಿ ಅಕ್ಕಪಕ್ಕದ ಮನೆಯವರು ಬರುತ್ತಿದ್ದಂತೆ ಆರೋಪಿ ಪತಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿ ಪತಿಗಾಗಿ ಹುಡುಕಾಟ ನಡೆಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ14-10-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..!ವಚನ.: -ಉರಿಲಿಂಗದೇವ  .!'ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ' - ಪರಿಶೀಲಿಸಲು ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆಕರೂರು ಕಾಲ್ತುಳಿತ ದುರಂತ: ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಆದೇಶ'ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ'-ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ'ಸಿಎಂ ಕರೆದ ಭೋಜನ ಮೀಟಿಂಗ್‌ಗೂ, ಅಧಿಕಾರ ಬದಲಾವಣೆಗೂ ಸಂಬಂಧವಿಲ್ಲ' -ಪರಮೇಶ್ವರ್‌ಗಾಜಾ ಯುದ್ಧ ಅಂತ್ಯ: ಇಸ್ರೇಲ್‌ನ 7 ಒತ್ತೆಯಾಳುಗಳನ್ನ ಬಿಡುಗಡೆಗೊಳಿಸಿದ ಹಮಾಸ್ಎಲ್‌ಒಸಿಯಲ್ಲಿ ಭಯೋತ್ಪಾದಕರ ಲಾಂಚ್ ಪ್ಯಾಡ್‌ಗಳು ಸಕ್ರಿಯ; ಬಿಎಸ್‌ಎಫ್ ಕಟ್ಟೆಚ್ಚರಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಕೇಸ್: ಚೆನ್ನೈನ 7 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ