LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾವು ಬೆಳೆಗಾರರಿಗೆ ಗುಡ್ ನ್ಯೂಸ್.! ಇಲ್ಲಿದೆ ಮಾಹಿತಿ.!

 

 

ಬೆಂಗಳೂರು: ಆವರ್ತನಿಧಿಯಿಂದ ತೋಟಗಾರಿಕೆ ಇಲಾಖೆಯ ಮಾವು ಅಭಿವೃದ್ಧಿ ಮಂಡಳಿಗೆ 101 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ.

ಪಿಡಿಪಿಎಸ್ ಯೋಜನೆ ಮಾರ್ಗಸೂಚಿಗಳ ಅನ್ವಯ ಅನುದಾನ ಬಿಡುಗಡೆ ಮಾಡಲಾಗಿದೆ. ಬೆಲೆ ವ್ಯತ್ಯಾಸದ ಮೊತ್ತವನ್ನು ರೈತರಿಗೆ ಪಾವತಿಸಲು ಹಣ ಬಿಡುಗಡೆ ಮಾಡಲಾಗಿದೆ. ಶೇಕಡ 50ರಷ್ಟು ಮೊತ್ತವನ್ನು ಕೇಂದ್ರದಿಂದ ಮರುಪಾವತಿ ಪಡೆಯಲು ಕ್ರಮ ವಹಿಸಲಾಗಿದೆ. ಕೇಂದ್ರದಿಂದ ಮರುಪಾವತಿ ಪಡೆಯಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.

ಬೆಲೆ ಕುಸಿತದಿಂದ ಸಮಸ್ಯೆಗೆ ಸಿಲುಕಿದ ಮಾವು ಬೆಳೆಗಾರರಿಗೆ ನೆರವಾಗಲು ಕೇಂದ್ರ ಸರ್ಕಾರದ ಸಹಕಾರದೊಂದಿಗೆ ರಾಜ್ಯ ಸರ್ಕಾರವು ಮಾರುಕಟ್ಟೆ ಮಧ್ಯ ಪ್ರವೇಶ ದರದಂತೆ ಪ್ರತಿ ಕ್ವಿಂಟಾಲ್ ಮಾವಿಗೆ 1616 ರೂಪಾಯಿ ನಿಗದಿಪಡಿಸಲಾಗಿದ್ದು, ಮುಂದಿನ ಒಂದು ತಿಂಗಳವರೆಗೆ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಸಲಾಗುವುದು. ಅದರಂತೆ ಬೆಲೆ ವ್ಯತ್ಯಾಸ ಪಾವತಿ ವ್ಯವಸ್ಥೆಯಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿ ಕೆಜಿ ಮಾವಿಗೆ ತಲಾ ಎರಡು ರೂಪಾಯಿಯಂತೆ ಒಟ್ಟು ನಾಲ್ಕು ರೂಪಾಯಿಗಳನ್ನು ನೀಡುವ ಮೂಲಕ ಮಾರುಕಟ್ಟೆ ಚೈತನ್ಯಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮೇ ತಿಂಗಳಿಂದ ಜುಲೈವರೆಗೆ ಮಾವು ಕಟಾವು ಮಾಡಲಾಗುತ್ತದೆ. ಈ ಅವಧಿಯಲ್ಲಿ ಮಾರುಕಟ್ಟೆಯಲ್ಲಿ ದರ ವ್ಯತ್ಯಾಸ ಗಮನಿಸಿ ವ್ಯತ್ಯಾಸ ದರವನ್ನು ಪಾವತಿಸಲಾಗುವುದು. ಕೇಂದ್ರದ ಮಾರ್ಗಸೂಚಿಯಂತೆ ಕ್ವಿಂಟಾಲ್ ಮಾವಿಗೆ ಗರಿಷ್ಠ 1616 ರೂಪಾಯಿ ನಿಗದಿಪಡಿಸಲಾಗಿದೆ. ಅದರ ಜೊತೆಗೆ 2.50 ಲಕ್ಷ ಮೆಟ್ರಿಕ್ ಟನ್ ಗಳಷ್ಟು ಮಾರುಕಟ್ಟೆ ಮಧ್ಯ ಪ್ರವೇಶದಲ್ಲಿ ಖರೀದಿಸಲು ನಿರ್ಧರಿಸಲಾಗಿದೆ. ಇದಕ್ಕೆ 101 ಕೋಟಿ ರೂ. ವೆಚ್ಚವಾಗದಲ್ಲಿದ್ದು, ಅದರಲ್ಲಿ ಕೇಂದ್ರ ಸರ್ಕಾರ 50.50 ಕೋಟಿ ರೂಪಾಯಿ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026