LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಿರಿಯೂರು: ಹೊಸಯಳನಾಡು ಗ್ರಾ.ಪಂ. ಪಿಡಿಒ ಟಿ.ಶ್ರೀನಿವಾಸ್ ಸೇವೆಯಿಂದ ಅಮಾನತು.!

 

ಹಿರಿಯೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಜೆ.ಸೋಮಶೇಖ‌ರ್ ಅವರು  ಹೊಸಯಳನಾಡು ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಟಿ.ಶ್ರೀನಿವಾಸ್ ಅವರನ್ನು  ಅವರು ಇಲಾಖಾ ವಿಚಾರಣೆ ಕಾಯ್ದಿರಿಸಿ ಜೂನ್ 17ರಂದು ಅಮಾನತುಮಾಡಿದ್ದಾರೆ.!

ಹಿಂದೂ ಧರ್ಮೀಯರಸ್ಮಶಾನಕ್ಕೆ ಮೀಸಲಿಟ್ಟಿದ್ದ ಭೂಮಿಯಲ್ಲಿ 7,200 ಅಡಿ ಜಾಗವನ್ನು ಕೆ.ರವಿಕುಮಾರ್ ಎನ್ನುವವರಿಗೆ ಅಕ್ರಮವಾಗಿ ಇ-ಸ್ವತ್ತು ಮಾಡಲಾಗಿದೆ ಎಂಬ ವಿಚಾರ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿ, ಅವರನ್ನು ವಜಾ ಮಾಡುವ ಸಂಬಂಧ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಗಿತ್ತು. ಈ ನಿವೇಶನವನ್ನು ರವಿಕುಮಾ‌ರ್ ಅವರು ಚಿನ್ನಸ್ವಾಮಿ ಎಂಬುವವರಿಗೆ ಇ-ಸ್ವತ್ತು ಮಾಡಿಕೊಟ್ಟಿದ್ದರು.

'ಶ್ರೀನಿವಾಸ್‌ ಅವರು ಪಂಚಾಯಿತಿಯ ನಡಾವಳಿ ಪುಸ್ತಕ ಪರಿಶೀಲಿಸದೇ, ಕಂದಾಯ ಇಲಾಖೆಗೆ ಸಂಬಂಧಪಟ್ಟ ಸರ್ಕಾರಿ ಜಾಗವನ್ನು ನೇರವಾಗಿ, ಮ್ಯುಟೇಷನ್ ಬದಲಾಯಿಸಿಕೊಟ್ಟು ಚಿನ್ನಸ್ವಾಮಿ ಅವರಿಗೆ ಇ-ಸ್ವತ್ತು ಮಾಡಿಕೊಟ್ಟಿದ್ದರು. ಕರ್ತವ್ಯಲೋಪ ಎಸಗಿರುವ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಕೋರಿ ಬಂದಿದ್ದ ಲಿಖಿತ ದೂರು ಆಧರಿಸಿ ಕ್ರಮ ಕೈಗೊಳ್ಳಲಾಗಿದೆ' ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026