Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಿರಿಯೂರು ಮನೆ-ಮನೆ ಸಮೀಕ್ಷೆ ಚುರುಕು, ಸಾರ್ವಜನಿಕರ ಸಹಕಾರಕ್ಕೆ ತಹಶೀಲ್ದಾರ್ ಮನವಿ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಹಿರಿಯೂರು ತಾಲ್ಲೂಕಿನಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ
-2026ರ ಅಂಗವಾಗಿ ಮನೆ-ಮನೆ ಭೇಟಿ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಪ್ರಗತಿಯಲ್ಲಿದೆ. ಜೂನ್ 30ರಿಂದ ಆರಂಭವಾಗಿರುವ ಈ ಪ್ರಕ್ರಿಯೆಯು ಜುಲೈ 29ರವರೆಗೆ ನಡೆಯಲಿದ್ದು, ತಾಲ್ಲೂಕಿನ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ತೆರಳಿ ಗಣತಿ ಕಾರ್ಯದಲ್ಲಿ ನಿರತರಾಗಿದ್ದಾರೆ.

ವಿಧಾನಸಭಾ ಕ್ಷೇತ್ರ ಸಂಖ್ಯೆ-100 (ಹಿರಿಯೂರು) ವ್ಯಾಪ್ತಿಯ ಒಟ್ಟು 287 ಮತಗಟ್ಟೆ ಭಾಗಗಳ ಜುಲೈ 15ರವರೆಗಿನ ಗಣತಿ ಮತ್ತು ಪ್ರಗತಿ ವಿವರಗಳು ಈ ಕೆಳಗಿನಂತಿವೆ.
ಒಟ್ಟು ಮತದಾರರು (16.06.2020 ರಲ್ಲಿದ್ದಂತೆ): 2,51,482
ವಿತರಿಸಲಾದ ಗಣತಿ ನಮೂನೆಗಳು: 2,51,163

ಗಣಕೀಕರಣಗೊಂಡ (ಆನ್‌ಲೈನ್ ಅಪ್‌ಲೋಡ್ ಆದ) ನಮೂನೆಗಳು: 1,49,698 ಪರಿಷ್ಕರಣೆ ವೇಳೆ ಪತ್ತೆಯಾದ ವಿವರಗಳು:
ಮರಣ ಹೊಂದಿದವರು: 1,026
ಶಾಶ್ವತವಾಗಿ ವಲಸೆ ಹೋದವರು: 989
ದ್ವಿಪ್ರತಿ (ಡಬಲ್ ಎಂಟ್ರಿ) ಹೊಂದಿರುವವರು: 387
ಗೈರು ಹಾಜರಿ: 18

ತಹಶೀಲ್ದಾರ್ ಮನವಿ:
ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯವಾಗಿದೆ. ಮತಗಟ್ಟೆ ಅಧಿಕಾರಿಗಳು ನಿಮ್ಮ ಮನೆಗೆ ಭೇಟಿ ನೀಡಿದಾಗ ನಿಖರ ಮಾಹಿತಿ ನೀಡಿ ಸಹಕರಿಸಬೇಕು
," ಎಂದು ಹಿರಿಯೂರು ತಾಲ್ಲೂಕು ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ತಹಶೀಲ್ದಾರ್ ಆದ ಎಂ. ಸಿದ್ದೇಶ್ ಸಾರ್ವಜನಿಕರಲ್ಲಿ ಕೋರಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ