LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೃದಯಾಘಾತ ಹಾಗೂ ಪಾರ್ಶ್ವವಾಯು ನಿಂದ ಪಾರಾಗಲು ಎಷ್ಟು ನಿಮಿಷ ವ್ಯಾಯಾಮ

 

ಬೆಂಗಳೂರು: ಇಂದಿನ ವೇಗದ ಬದುಕಿನಲ್ಲಿ ಹೃದಯಾಘಾತ (Heart Attack) ಮತ್ತು ಪಾರ್ಶ್ವವಾಯು (Stroke) ಸಂಭವಿಸುವುದು ಸಾಮಾನ್ಯವಾಗಿದೆ. ಆದರೆ, ಇವುಗಳಿಂದ ಪಾರಾಗಲು ನೀವು ಕಠಿಣ ವ್ಯಾಯಾಮ ಅಥವಾ ಕಟ್ಟುನಿಟ್ಟಿನ ಆಹಾರ ಕ್ರಮವನ್ನೇ ಪಾಲಿಸಬೇಕಿಲ್ಲ ನಿಮ್ಮ ದಿನನಿತ್ಯದ ಜೀವನದಲ್ಲಿ ಮಾಡುವ ಅತ್ಯಂತ ಸಣ್ಣ ಬದಲಾವಣೆಗಳು ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡಬಲ್ಲವು ಎಂದು ಸಿಡ್ನಿ ವಿಶ್ವವಿದ್ಯಾಲಯದ ಇತ್ತೀಚಿನ ಸಂಶೋಧನೆ ತಿಳಿಸಿದೆ.

ಸಂಶೋಧನೆ ಹೇಳುವುದೇನು?

ಸುಮಾರು 53,242 ಜನರ ಮೇಲೆ 8 ವರ್ಷಗಳ ಕಾಲ ನಡೆಸಿದ ಈ ಅಧ್ಯಯನದಲ್ಲಿ ಆಶ್ಚರ್ಯಕರ ವಿಷಯಗಳು ಹೊರಬಂದಿವೆ. ದಿನಕ್ಕೆ ಕೇವಲ ಕೆಲವು ನಿಮಿಷಗಳ ಬದಲಾವಣೆಯು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಶೇ. 10 ರಷ್ಟು ಕಡಿಮೆ ಮಾಡುತ್ತದೆ.

ಹೃದಯವನ್ನು ಸುಸ್ಥಿತಿಯಲ್ಲಿಡಲು ನೀವು ಮಾಡಬೇಕಾದ್ದು ಇಷ್ಟೇ:

ಕೇವಲ 11 ನಿಮಿಷಗಳ ಹೆಚ್ಚುವರಿ ನಿದ್ರೆ:

ದಿನನಿತ್ಯದ ನಿದ್ರೆಯ ಜೊತೆಗೆ ಕೇವಲ 11 ನಿಮಿಷಗಳ ಕಾಲ ಹೆಚ್ಚಿನ ನಿದ್ರೆ ಮಾಡುವುದು ನಿಮ್ಮ ಹೃದಯದ ಒತ್ತಡವನ್ನು ಕಡಿಮೆ ಮಾಡುತ್ತದೆ. ಸರಿಯಾದ ನಿದ್ರೆ ಹೃದಯದ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.

5 ನಿಮಿಷಗಳ ಚಟುವಟಿಕೆ:

ನೀವು ಜಿಮ್ಗೆ ಹೋಗಲು ಸಮಯವಿಲ್ಲದಿದ್ದರೆ ಚಿಂತಿಸಬೇಡಿ. ದಿನಕ್ಕೆ ಕೇವಲ 4.5 ರಿಂದ 5 ನಿಮಿಷಗಳ ಕಾಲ ವೇಗವಾಗಿ ನಡೆಯುವುದು (Brisk Walk), ಮೆಟ್ಟಿಲು ಹತ್ತುವುದು ಅಥವಾ ಮನೆಯ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದು ಹೃದಯಕ್ಕೆ ಉತ್ತಮ ವ್ಯಾಯಾಮ ನೀಡುತ್ತದೆ.

ಕಾಲು ಕಪ್ ತರಕಾರಿ ಹೆಚ್ಚಿಸಿ:

ನಿಮ್ಮ ಊಟದಲ್ಲಿ ಪ್ರತಿದಿನ ಕೇವಲ ಒಂದು ಸಣ್ಣ ಕಪ್ನಷ್ಟು ಹೆಚ್ಚುವರಿ ತರಕಾರಿಗಳನ್ನು ಸೇರಿಸಿಕೊಳ್ಳಿ. ಹಸಿರು ತರಕಾರಿಗಳಲ್ಲಿರುವ ನಾರಿನಂಶ ಮತ್ತು ಜೀವಸತ್ವಗಳು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ.

ಸಿಡ್ನಿ ವಿಶ್ವವಿದ್ಯಾಲಯದ ಸಂಶೋಧಕರು ತಿಳಿಸುವಂತೆ, ಈ ಮೇಲಿನ ಮೂರು ಸಣ್ಣ ಬದಲಾವಣೆಗಳನ್ನು ಒಟ್ಟಾಗಿ ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಶೇಕಡಾ 10 ರಷ್ಟು ಕಡಿಮೆ ಮಾಡಬಹುದು. ಒಂದು ವೇಳೆ ನೀವು ಉತ್ತಮ ಆಹಾರ, 8 ಗಂಟೆ ನಿದ್ರೆ ಮತ್ತು 40 ನಿಮಿಷಗಳ ವ್ಯಾಯಾಮ ಮಾಡಿದರೆ ಈ ಅಪಾಯವನ್ನು ಶೇ. 57 ರಷ್ಟು ಕಡಿಮೆ ಮಾಡಬಹುದು

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026