LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾನು ಕಿಂಗ್ ಆಗಲ್ಲ ಆದರೆ ಕಿಂಗ್ ಮೇಕರ್.! ಬಸವಜಯ ಮೃತ್ಯುಂಜಯ ಸ್ವಾಮೀಜಿ.!

 

ಬಾಗಲಕೋಟೆ : ಪಂಚಮಸಾಲಿ ಶ್ರೀಗಳು ಸಿಎಂ ಆಗಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹರಿಬಿಟ್ಟಿದ್ದು, ಈ ಕುರಿತಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು ನಾನು ರಾಜಕೀಯಕ್ಕೆ ಬರುವುದಿಲ್ಲ. ನಾನು ಕಿಂಗ್ ಆಗಲ್ಲ ಆದರೆ ಕಿಂಗ್ ಮೇಕರ್ ಆಗುತ್ತೇನೆ ಎಂದು ತಿಳಿಸಿದರು.

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್ ಕುರಿತಾಗಿ ನಾನು ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರಲ್ಲ. ರಾಜಕೀಯ ಮಾಡೋದಕ್ಕೆ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ನಮ್ಮ ಸಮಾಜದ ನಾಯಕರಿದ್ದಾರೆ. ನಮ್ಮ ಮೇಲೆ ಅಭಿಮಾನದಿಂದ ಅಭಿಮಾನಿಗಳು ಭಕ್ತರು ಈ ರೀತಿ ಪೋಸ್ಟ್ ಹಾಕಿದ್ದಾರೆ. ನಾನು ಕಿಂಗ್ ಆಗಲ್ಲ ಕಿಂಗ್ ಮೇಕರ್ ಆಗುತ್ತೇನೆ ಎಂದು ತಿಳಿಸಿದರು.

ಇನ್ನು 2A ಮೀಸಲಾತಿ ಹೋರಾಟದ ಕುರಿತು ಮಾತನಾಡಿದ ಅವರು, ಸಮಾಜದ ಜನರ ಭಾವನೆ ಜೊತೆಗೆ ಆಟ ಆಡುವುದನ್ನು ಬಿಡಬೇಕು. ಬಿಜೆಪಿ ಸರ್ಕಾರದಲ್ಲಿ ಶಾಸಕರು ಮತ್ತು ಸಿಎಂ ನಮ್ಮ ಬಳಿ ಬರುತ್ತಿದ್ದರು. ಆದರೆ ಈಗ ನಾವು ಶಾಸಕರು ಮತ್ತು ಸಿಎಂ ಬಳಿ ಹೋಗುವಂತಾಗಿದೆ. ನಾವು ಯಾವುದೇ ಶಾಸಕರು ಬಳಿ ಹೋಗುವ ಅಗತ್ಯವಿಲ್ಲ.

ಕಳೆದ ನಾಲ್ಕು ದಿನಗಳಿಂದ ಪಂಚಮಸಾಲಿ ತಾಲೂಕು ಘಟಕದ ಅಧ್ಯಕ್ಷರು ಜಿಲ್ಲಾ ಘಟಕದ ಅಧ್ಯಕ್ಷರಿಗೆ ಕರೆ ಮಾಡಿ ಕೆಲವರು ಬೆದರಿಕೆ ಹಾಕುತ್ತಿದ್ದಾರೆ. ಈ ಹಿಂದೆ ಬಸವರಾಜ ಬೊಮ್ಮಾಯಿ ಸರ್ಕಾರ ಒಂದು ಕೇಸ್ ಕೂಡ ಮಾಡಿಲ್ಲ. ಬೊಮ್ಮಾಯಿ ಮನೆಯ ಮುಂದೆ ಹೋರಾಟ ಮಾಡಿದರು ಯಾವುದೇ ಕೇಸ್ ಹಾಕಿಲ್ಲ.

ಆದರೆ ಈಗ ಸಿದ್ದರಾಮಯ್ಯ ಸರ್ಕಾರದಲ್ಲಿ ಬೆದರಿಕೆ ಹಾಕಲಾಗುತ್ತಿದೆ. ಬೆದರಿಕೆ ಕರಿಗಳಿಂದ ಏನಾದರೂ ಆದರೆ ರಕ್ತ ಕ್ರಾಂತಿ ಆಗುತ್ತದೆ. ರಕ್ತ ಕ್ರಾಂತಿ ಆಗುತ್ತೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು. ಬೆದರಿಕೆ ಕರೆಗಳ ಹಿಂದೆ ಶಾಸಕರು ಸಂಸದರು ಇದ್ದರೂ ಕೂಡ ಸುಮ್ಮನೆ ಬಿಡುವುದಿಲ್ಲ ಎಂದು ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉತ್ತರಾಖಂಡ ಮೇಘಸ್ಫೋಟ - ನಾಪತ್ತೆಯಾಗಿದ್ದ ಕೇರಳ ಮೂಲದ 28 ಪ್ರವಾಸಿಗರ ತಂಡ ಸುರಕ್ಷಿತಮೃತಪಟ್ಟ ತಾಯಿ ಖಾತೆಯಲ್ಲಿದ್ದ ಹಣ ಕಂಡು ಮೂರ್ಛೆ ಹೋದ ಮಗ!! ಶಾರುಖ್ ಖಾನ್ ಆಸ್ತಿಗೂ ಮೀರಿದ ಮೊತ್ತಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವುಧರ್ಮಸ್ಥಳ: ಯುವತಿ ನೇಣು ಬಿಗಿದು ಆತ್ಮಹತ್ಯೆ..!!'ಭಾರತ ಎಂದಿಗೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ'- ಟ್ರಂಪ್‌ಗೆ ಮೋದಿ ತಿರುಗೇಟುಸ್ಟೇಟ್‌ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 5180 ಹುದ್ದೆ- ಈಗಲೇ ಅರ್ಜಿ ಸಲ್ಲಿಸಿಭಯೋತ್ಪಾದಕ ದಾಳಿಯಿಂದ ಸಾವು, ಹಸಿವು ಹೆಚ್ಚುತ್ತಿದ್ದಂತೆ ಗಾಜಾದಲ್ಲಿ ತೀವ್ರ ರಕ್ತದ ಕೊರತೆಚಾಟ್‌ ಮಾಡೋಕೆ 15 ಸಾವಿರ, ವಿಡಿಯೋ ಕಾಲ್‌ಗೆ 30, 3 ಲಕ್ಷ ಕೊಟ್ರೆ..! ಈ ಸ್ಟಾರ್‌ ನಟಿ ತುಂಬಾ ದುಬಾರಿಹೊಸ ಅವತಾರದಲ್ಲಿ ಮಿಂಚಿದ ರಮ್ಯಾ: ಸಖತ್ ಗ್ಲಾಮರಸ್ ಫೋಟೋಗಳು ವೈರಲ್ನಾಳೆ ವರಮಹಾಲಕ್ಷ್ಮಿ ಹಬ್ಬ ಯಾವ ಗಳಿಗೆಯಲ್ಲಿ ಪೂಜೆ ನೆರವೇರಿಸಿಬೇಕು.? ಪ್ರಸಾದ ತಯಾರಿ ಹೀಗಿರಲಿ.!