LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸಾಧ್ಯವಿಲ್ಲದಿದ್ದರೆ ಭಾರತ ತೊರೆಯಿರಿ' - ವಾಟ್ಸಾಪ್‌ಗೆ ಸುಪ್ರೀಂ ತರಾಟೆ

ನವದೆಹಲಿ : ವಾಟ್ಸಾಪ್‌ನ 2021ರ ಗೌಪ್ಯತಾ ನೀತಿ ವಿಚಾರವಾಗಿ ಮೆಟಾ ಸಂಸ್ಥೆಯನ್ನು ಭಾರತದ ಸುಪ್ರೀಂ ಕೋರ್ಟ್ ಗಂಭೀರವಾಗಿ ತರಾಟೆಗೆ ತೆಗೆದುಕೊಂಡಿದೆ. ಭಾರತೀಯ ಬಳಕೆದಾರರ ಗೌಪ್ಯತೆಯೊಂದಿಗೆ ಯಾವುದೇ ರೀತಿಯ ಸಂಧಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟ ಎಚ್ಚರಿಕೆ ನೀಡಿದೆ.

ಮಂಗಳವಾರ (ಫೆ.3) ಈ ಸಂಬಂಧ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠ, “ನೀವು ನಮ್ಮ ಸಂವಿಧಾನವನ್ನು ಪಾಲಿಸಲು ಸಾಧ್ಯವಿಲ್ಲ ಎಂದರೆ ಭಾರತದಿಂದ ನಿರ್ಗಮಿಸಿ. ಭಾರತೀಯ ಪ್ರಜೆಯ ಒಂದು ಡಿಜಿಟ್ ದತ್ತಾಂಶವನ್ನೂ ಪಡೆಯಲು ನಾವು ಅವಕಾಶ ನೀಡುವುದಿಲ್ಲ” ಎಂದು ಮೆಟಾಗೆ ಖಡಕ್ ಸಂದೇಶ ನೀಡಿತು. ವಾಟ್ಸಾಪ್ ತನ್ನ ಗೌಪ್ಯತಾ ನೀತಿಯ ಹೆಸರಿನಲ್ಲಿ ಬಳಕೆದಾರರ ದತ್ತಾಂಶವನ್ನು ವಾಣಿಜ್ಯ ಉದ್ದೇಶಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆರೋಪವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಮೆಟಾಗೆ ಎಚ್ಚರಿಕೆ ನೀಡಿದ ಸಿಜೆಐ, ಗೌಪ್ಯತೆ ಭಾರತದ ನಾಗರಿಕರ ಮೂಲಭೂತ ಹಕ್ಕು ಎಂದು ಪುನರುಚ್ಚರಿಸಿದರು.

ಗೌಪ್ಯತಾ ನೀತಿಯ ಭಾಷೆ ಮತ್ತು ಅರ್ಥಗರ್ಭಿತತೆ ಕುರಿತೂ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. “ದೇಶದಲ್ಲಿರುವ ಕೋಟ್ಯಂತರ ಅನಕ್ಷರಸ್ಥರು, ಬಡವರು, ಗ್ರಾಮೀಣ ಪ್ರದೇಶದ ಜನರು ಅಥವಾ ಸ್ಥಳೀಯ ಭಾಷೆ ಮಾತ್ರ ಮಾತನಾಡುವವರು ನಿಮ್ಮ ಗೌಪ್ಯತಾ ನೀತಿಯನ್ನು ಹೇಗೆ ಅರ್ಥಮಾಡಿಕೊಳ್ಳಬೇಕು?” ಎಂದು ಸಿಜೆಐ ಪ್ರಶ್ನಿಸಿದರು. “ರಸ್ತೆಬದಿ ಅಂಗಡಿ ನಡೆಸುವವರು, ಬಡ ಮಹಿಳೆಯರು, ಬಿಹಾರದ ಕುಗ್ರಾಮದ ನಿವಾಸಿಗಳು ಅಥವಾ ತಮಿಳುನಾಡಿನಲ್ಲಿ ತಮಿಳಷ್ಟೇ ಮಾತನಾಡುವವರು- ಇವರಲ್ಲಿ ಎಷ್ಟು ಜನರಿಗೆ ಈ ನೀತಿಯ ಅರ್ಥವಾಗುತ್ತದೆ? ಕೆಲವೊಮ್ಮೆ ನಮಗೇ ನಿಮ್ಮ ನೀತಿಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತದೆ” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ವಾಟ್ಸಾಪ್‌ನಲ್ಲಿ ದತ್ತಾಂಶ ದುರ್ಬಳಕೆಯ ಉದಾಹರಣೆ ನೀಡಿದ ಮುಖ್ಯ ನ್ಯಾಯಮೂರ್ತಿ, “ವಾಟ್ಸಾಪ್‌ನಲ್ಲಿ ಒಬ್ಬ ವೈದ್ಯರು ಮೂರು ಔಷಧಗಳ ಹೆಸರು ಕಳುಹಿಸಿದರೆ, ಕೆಲವೇ ನಿಮಿಷಗಳಲ್ಲಿ ಅದಕ್ಕೆ ಸಂಬಂಧಿಸಿದ ಜಾಹೀರಾತುಗಳ ಮಳೆ ಆರಂಭವಾಗುತ್ತದೆ. ಇದು ದತ್ತಾಂಶದ ದುರ್ಬಳಕೆಯಲ್ಲವೇ?” ಎಂದು ಪ್ರಶ್ನಿಸಿದರು. ಈ ಮೂಲಕ, ವಾಟ್ಸಾಪ್ ಗೌಪ್ಯತಾ ನೀತಿ ಭಾರತೀಯ ಬಳಕೆದಾರರ ಹಿತಾಸಕ್ತಿಗೆ ವಿರುದ್ಧವಾಗಿದ್ದರೆ ಅದನ್ನು ಸಹಿಸಲಾಗುವುದಿಲ್ಲ ಎಂಬುದನ್ನು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026