LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದುಶ್ಚಟದಿಂದ ದೂರವಿದ್ದರೆ ಬದುಕು ಸುಖ.! ಶಿವಲಿಂಗಾನಂದ ಶ್ರೀಗಳು.!

 

ಚಿತ್ರದುರ್ಗ : ದುಶ್ಚಟದಿಂದ ದೂರವಿದ್ದರೆ ಬದುಕು ಸುಖಮಯವಾಗಿರುತ್ತದೆ ಎಂದು ಕಬೀರಾನಂದಾಶ್ರಮದ ಶಿವಲಿಂಗಾನಂದ ಮಹಾಸ್ವಾಮಿಗಳು ತಿಳಿಸಿದರು.

ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತ, ಸಂಶೋಧನಾ ಕೇಂದ್ರ ಲಾಯಿಲ ಉಜುರೆ ಇವರುಗಳ ಸಂಯುಕ್ತಾಶ್ರಯದಲ್ಲಿ

ಅಂಬೇಡ್ಕರ್ ಕಲ್ಯಾಣ ಮಂಟಪದಲ್ಲಿ ಎಂಟು ದಿನಗಳ ಕಾಲ ನಡೆದ 1895 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.

ಮದ್ಯಪಾನಕ್ಕೆ ದಾಸರಾಗಿದ್ದ ನೀವುಗಳು ಎಂಟು ದಿನಗಳ ಶಿಬಿರದಲ್ಲಿ ಭಾಗವಹಿಸಿ ಸಂಕಲ್ಪ ಮಾಡಿದಂತೆ ಇನ್ನು ಮುಂದೆ ಮದ್ಯಪಾನ ನಿಮ್ಮ ಹತ್ತಿರ ಸುಳಿಯಬಾರದು. ಎಲ್ಲದಕ್ಕು ಮನಸ್ಸು ಕಾರಣ. ಹಾಗಾಗಿ ಮನಸ್ಸನ್ನು ಸ್ವಚ್ಚವಾಗಿಟ್ಟುಕೊಳ್ಳಿ. ಮನಸ್ಸಿಗೆ ವಿರುದ್ದವಾಗಿ ನಡೆದುಕೊಳ್ಳಬೇಡಿ. ದುಶ್ಚಟದಿಂದ ದೂರವಿದ್ದು, ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬದುಕಿ ಕಟ್ಟಿಕೊಳ್ಳಿ ಎಂದು ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನಿರ್ದೇಶಕಿ ಗೀತ ಮಾತನಾಡಿ ಒಮ್ಮೆ ಜೀವನದಲ್ಲಿ ಎಡವಿದರೆ ಮೇಲೇಳುವುದು ತುಂಬಾ ಕಷ್ಟ. ಮದ್ಯವರ್ಜನ ಶಿಬಿರದಲ್ಲಿ ಪಾಲ್ಗೊಂಡ ನೀವುಗಳು ಉಸಿರಿರುವತನಕ ಮತ್ತೆ ಮದ್ಯ ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡಿದ್ದೀರ. ಅದರಂತೆ ನಡೆದುಕೊಳ್ಳಿ. ಪುರುಷನನ್ನು ಸರಿದಾರಿಗೆ ತರುವ ಶಕ್ತಿ ಹೆಣ್ಣಿನಲ್ಲಿದೆ. ಅದಕ್ಕಾಗಿ ನೀವುಗಳು ಫ್ಯಾಶನ್ ಜೀವನಕ್ಕೆ ಮರುಳಾಗಬೇಡಿ. ಪಬ್, ಕ್ಲಬ್ಗಳಲ್ಲಿ ಹೆಣ್ಣಿನ ಹಾವಳಿ ಜಾಸ್ತಿಯಾಗಿದೆ. ದುಶ್ಚಟ ಜೀವನವನ್ನು ಸರ್ವನಾಶಗೊಳಿಸುತ್ತದೆ. ಪ್ರತಿಯೊಬ್ಬರ ಜೀವನದಲ್ಲಿಯೂ ಕಷ್ಟ-ಸುಖ ಬರುತ್ತದೆ. ಎಲ್ಲವನ್ನು ಧೈರ್ಯದಿಂದ ಸ್ವೀಕರಿಸಬೇಕು. ಎಂತಹ ಕಠಿಣ ಪರಿಸ್ಥಿತಿ ಎದುರಾದರೂ ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.

ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಕೆ.ಆರ್.ಮಂಜುನಾಥ್ ಮಾತನಾಡಿ ಮದ್ಯವರ್ಜನ ಶಿಬಿರದಲ್ಲಿ ಎಂಟು ದಿನಗಳ ಕಾಲ ಮದ್ಯದಿಂದಾಗುವ ದುಷ್ಪರಿಣಾಮದ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಇನ್ನು ಮುಂದೆಯಾದರೂ ಕುಡಿತ ಬಿಟ್ಟು ಹೆಂಡತಿ, ಮಕ್ಕಳು ಸಂಸಾರದೊಂದಿಗೆ ಸಂತೋಷವಾಗಿರಿ. ಹೊಸ ಜೀವನ ಕಂಡುಕೊಳ್ಳುವ ಶಕ್ತಿ ನಿಮ್ಮಲ್ಲಿದೆ ಎಂದು ಹೇಳಿದರು.

ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹೆಚ್.ಮಂಜಪ್ಪ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಕುಡಿತದಿಂದ ಒಬ್ಬರ ಆರೋಗ್ಯ ಹಾಳಾಗುವುದಲ್ಲದೆ ಇಡಿ ಸಂಸಾರದಲ್ಲಿ ನೆಮ್ಮದಿಯಿಲ್ಲದಂತಾಗುತ್ತದೆ. ಕುಟುಂಬ ಹಾಳಾಗಲು ಮಹಿಳೆಯರು ಬಿಡಬೇಡಿ. ನಿಮ್ಮ ನಿಮ್ಮ ಪುರುಷರನ್ನು ಸರಿದಾರಿಗೆ ತರುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.

ಕಣಿವೆ ಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯೆ ರೂಪ ಜನಾರ್ಧನ್, ಮಾಳಪ್ಪನಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಇವರುಗಳು ಮಾತನಾಡಿದರು. ಗ್ರಾಮ ಪಂಚಾಯಿತಿ ಸದಸ್ಯ ಉಮೇಶ್, ರೀನ ವೀರಭದ್ರಪ್ಪ, ಕೆ.ಇ.ಬಿ.ಷಣ್ಮುಖಪ್ಪ ಇವರುಗಳು ವೇದಿಕೆಯಲ್ಲಿದ್ದರು.

ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿದ್ದ ಎಪ್ಪತ್ತು ಪುರುಷರು ಇನ್ನು ಮುಂದೆ ಮದ್ಯ ಸೇವಿಸುವುದಿಲ್ಲವೆಂದು ಸಂಕಲ್ಪ ತೊಟ್ಟರು.

ಜಿಲ್ಲಾ ಜನಜಾಗೃತಿ ವೇದಿಕೆ ನಿರ್ದೇಶಕ ನಾಗರಾಜ್ ಕುಲಾಲ್, ದಿವಾಕರ್ ಪೂಜಾರಿ, ತಾಲ್ಲೂಕು ಯೋಜನಾಧಿಕಾರಿ ಬಿ.ಅಶೋಕ್, ಮೇಲ್ವಿಚಾರಕ ಬಾಲಕೃಷ್ಣ ಎಂ.

ಸೌಮ್ಯ ಮಂಜುನಾಥ್ ಇವರುಗಳು ಸಮಾರೋಪ ಸಮಾರಂಭದಲ್ಲಿ ಹಾಜರಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST