Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ರಾಜಕೀಯ ರೂಪ ಪಡೆದ ಕೋಗಿಲು ಬಡಾವಣೆ ಅಕ್ರಮ ಶೆಡ್​ ತೆರವು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಶೆಡ್​ಗಳ ತೆರವು ಮಾಡಿರುವ ರಾಜ್ಯ ಸರ್ಕಾರದ ಕ್ರಮವು ರಾಜಕೀಯ ಆಯಾಮ ಪಡೆದುಕೊಂಡಿದೆ.


ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರ ಒಂದು ಎಕ್ಸ್ ಸಂದೇಶಕ್ಕೆ ಕೇರಳದವರಿಗೆ 180 ರಿಂದ 200 ಮನೆಗಳನ್ನು ಕಟ್ಟಿಕೊಡಲು ಕಾಂಗ್ರೆಸ್ ಸರ್ಕಾರ ಸಿದ್ಧವಾಗಿದೆಯೇ? ಹಾಗಾದರೆ, ಉತ್ತರ ಕರ್ನಾಟಕ ಸೇರಿದಂತೆ ನಮ್ಮ ರಾಜ್ಯದ ನಿರಾಶ್ರಿತರಿಗೆ ಯಾರು ಮನೆ ಕಟ್ಟಿಕೊಡುತ್ತಾರೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಎನ್.ರವಿಕುಮಾರ್, ರಾಜ್ಯ ಸರ್ಕಾರದ ಧೋರಣೆಯನ್ನು ತೀವ್ರವಾಗಿ ಖಂಡಿಸಿದ ಅವರು ಕೆಸಿ ವೇಣುಗೋಪಾಲ್ ಅವರ ಒಂದು ಟ್ವೀಟ್‌ಗೆ ಅಕ್ರಮ ಮನೆಗಳನ್ನು ಸಕ್ರಮಗೊಳಿಸುವ ಸರ್ಕಾರದ ಉದ್ದೇಶವನ್ನು ರವಿಕುಮಾರ್ ಪ್ರಶ್ನಿಸಿದ್ದಾರೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿಗೂ ಮನೆ ಇಲ್ಲದ ಸಾವಿರಾರು ಕನ್ನಡಿಗರಿಗೆ ನೆರವಾಗದಿರುವುದು ಸರ್ಕಾರದ ದ್ವಂದ್ವ ನೀತಿ ತೋರಿಸುತ್ತದೆ ಎಂದು ಅವರು ಟೀಕಾಪ್ರಹಾರ ಮಾಡಿದ್ದಾರೆ.

ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳನ್ನು ತೆರವು ಮಾಡಲಾಗಿತ್ತು. ಈ ಕುರಿತು ಆರಂಭದಲ್ಲಿ, ತೆರವುಗೊಳಿಸಿದ ಕಟ್ಟಡಗಳು ಕೇರಳದವರು ಅಕ್ರಮವಾಗಿ ನಿರ್ಮಿಸಿದವು ಎಂದು ಸರ್ಕಾರ ಸಮರ್ಥಿಸಿಕೊಂಡಿತ್ತು. ಆದರೆ, ಕೇರಳ ಸಿಎಂ ಎಕ್ಸ್​ ಸಂದೇಶದೊಂದಿಗೆ ಈ ಘಟನೆ ರಾಜಕೀಯ ತಿರುವು ಪಡೆದುಕೊಂಡಿತು. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕರ್ನಾಟಕ ಸರ್ಕಾರವನ್ನು ಪ್ರಜಾಪ್ರಭುತ್ವ ವಿರೋಧಿ ಮತ್ತು ಜೆಸಿಬಿ ಸರ್ಕಾರ ಎಂದು ತೀವ್ರವಾಗಿ ಟೀಕಿಸಿದ್ದರು. ಇದಕ್ಕೆ ಕರ್ನಾಟಕದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ಕೇರಳ ಮುಖ್ಯಮಂತ್ರಿ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಖಂಡಿಸಿದ್ದರು.


ವಿಪ ಸದಸ್ಯ ರವಿ ಕುಮಾರ್ ಈ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಎಐಸಿಸಿ ಜನರಲ್ ಸೆಕ್ರೆಟರಿ ಒಂದು ಎಕ್ಸ್ ಪೋಸ್ಟ್ ಮಾಡಿದ್ದಕ್ಕೆ ಕೇರಳದವರಿಗೆ ಮನೆ ಕಟ್ಟಿಕೊಡುತ್ತೇವೆ ಎಂದು ಹೇಳುತ್ತಿದ್ದೀರಾ? ಕನ್ನಡಿಗರು ಕಣ್ಣೀರು ಸುರಿಸುತ್ತಿದ್ದಾರೆ. ಹಗಲು ರಾತ್ರಿ ಹೋರಾಟ ಮಾಡುತ್ತಿದ್ದಾರೆ. ಅವರ ನೋವು ನಿಮ್ಮ ಕಣ್ಣಿಗೆ ಕಾಣುವುದಿಲ್ಲವೇ? ವೇಣುಗೋಪಾಲ್ ಸಂದೇಶಕ್ಕೆ ಅವರಿಗೆ 180, 200 ಮನೆ ಕಟ್ಟಿಕೊಡುತ್ತೀರೆಂದರೆ, ಉತ್ತರ ಕರ್ನಾಟಕದಲ್ಲಿ ಮನೆ ಇಲ್ಲದವರು ಎಷ್ಟು ಜನ ಇದ್ದಾರೆ? ಇಡೀ ಕರ್ನಾಟಕ ರಾಜ್ಯದಲ್ಲಿ ಮನೆ ಇಲ್ಲದವರು ಎಷ್ಟು ಜನ ಇದ್ದಾರೆ, ಅವರಿಗೆ ಕಟ್ಟಿಕೊಟ್ಟಿದ್ದೀರಾ? ಇದಾ ನಿಮ್ಮ ಧೋರಣೆ?’ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.


ಅದೇ ರೀತಿ ಕೆಲ ತಿಂಗಳುಗಳ ಹಿಂದೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ವಯನಾಡ್​​ನಲ್ಲಿ ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದ್ದ ವಿಚಾರ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿತ್ತು ಎನ್ನುವುದನ್ನು ಸ್ಮರಿಸಬಹುದಾಗಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ