LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಬರಿಮಲೆ ಯಾತ್ರಿಕರಿಗೆ ಮುಖ್ಯ ಮಾಹಿತಿ.!

 

ಕಾಸರಗೋಡು: ಕೇರಳದಲ್ಲಿ ಮೆದುಳು ಜ್ವರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಬರಿಮಲೆ ಯಾತ್ರಿಕರು ನದಿಯಲ್ಲಿ ಸ್ನಾನ ಮಾಡುವಾಗ ಮೂಗಿಗೆ ನೀರು ಹೋಗದಂತೆ ಎಚ್ಚರ ವಹಿಸುವಂತೆ ಸರ್ಕಾರ ಸೂಚನೆ ನೀಡಿದೆ.

ಕಾರಣ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 17 ರಿಂದ ಆರಂಭವಾಗುವ ಶಬರಿಮಲೆ ಯಾತ್ರಿಕರಿಗಾಗಿ ಕೇರಳ ಸರ್ಕಾರದಿಂದ ಆರೋಗ್ಯ ಮಾರ್ಗದರ್ಶಿ ಬಿಡುಗಡೆ ಮಾಡಲಾಗಿದೆ.ಯಾತ್ರಿಕರು ನದಿಯಲ್ಲಿ ಸ್ನಾನ ಮಾಡುವಾಗ ಮೂಗಿಗೆ ನೀರು ತಾಗದಂತೆ ಎಚ್ಚರಿಕೆ ವಹಿಸಬೇಕು. ಅಗತ್ಯ ಔಷಧಗಳನ್ನು ತರಬೇಕು. ಯಾತ್ರೆ ಆರಂಭಿಸುವ ಕೆಲವು ದಿನಗಳ ಮೊದಲೇ ವಾಕಿಂಗ್ ಅಭ್ಯಾಸ ರೂಢಿಸಿಕೊಳ್ಳಬೇಕು. ಬೆಟ್ಟ ಹತ್ತುವಾಗ ಅವಸರ ಮಾಡದೆ ನಿಧಾನವಾಗಿ ಹತ್ತಿ, ಆರೋಗ್ಯ ಸಹಾಯ ಬೇಕಿದ್ದಲ್ಲಿ ಕೂಡಲೇ ಸಿಬ್ಬಂದಿಯನ್ನು ಸಂಪರ್ಕಿಸಿ, ಹಾವು ಕಡಿದಲ್ಲಿ ತಕ್ಷಣವೇ ಗಮನಕ್ಕೆ ತಂದು ಚಿಕಿತ್ಸೆ ಪಡೆದುಕೊಳ್ಳಿ ಎಂದು ತಿಳಿಸಲಾಗಿದೆ.

ಯಾತ್ರಿಕರಿಗೆ ಬಯಲು ಬಹಿರ್ದೆಸೆ ನಿಷೇಧಿಸಲಾಗಿದ್ದು, ನಿಗದಿತ ಸ್ಥಳಗಳಲ್ಲಿ ಶೌಚ ಕರ್ಮ ಮುಗಿಸಿ ಸಾಬೂನಿನಿಂದ ಕೈ ತೊಳೆದುಕೊಳ್ಳಬೇಕು. ಕೇವಲ ಬಿಸಿ ನೀರನ್ನು ಕುಡಿಯಬೇಕು. ತುರ್ತು ಪರಿಸ್ಥಿತಿಗೆ 04735 203232 ಸಂಖ್ಯೆಗೆ ಕರೆ ಮಾಡುವಂತೆ ತಿಳಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026