LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಂದಿನ 15 ದಿನಗಳಲ್ಲಿ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ.! ಹೆಚ್ ಆಂಜನೇಯ

 

ಚಿತ್ರದುರ್ಗ: ಮುಂದಿನ 15 ದಿನಗಳಲ್ಲಿ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾಗಲಿದೆ, ಕಳೆದ 35 ವರ್ಷಗಳ ಹೋರಾಟಕ್ಕೆ ಅಂತ್ಯವನ್ನು ಹಾಡಲಿದೆ. 2024 . ಅ. 1 ರ ನಂತರ ನಡೆದ ವಿವಿಧ ರೀತಿಯ ಹೋರಾಟಕ್ಕೆ ಯಾವುದೆ ಬೆಲೆ ಇಲ್ಲ ಎಂದು ಮಾಜಿ ಸಚಿವ ಹೆಚ್ ಆಂಜನೇಯ ಹೇಳಿದ್ದಾರೆ.

ಚಿತ್ರದುರ್ಗ ನಗರದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ರಾಜ್ಯ ಸರ್ಕಾರಗಳಿಗೆ ಒಳ ಮೀಸಲಾತಿ ಜಾರಿ ಮಾಡುವ ಅಧಿಕಾರ ಇರಲಿಲ್ಲ ಬರೀ ಒಳ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬಹುದಾಗಿತ್ತು ಆದರೆ ಆ 1 2024ರಂದು ಸುಪ್ರಿಂ ಕೋರ್ಟ ಒಳ ಮೀಸಲಾತಿಯನ್ನು ರಾಜ್ಯ ಸರ್ಕಾರ ಜಾರಿ ಮಾಡಬಹುದೆಂದು ತೀರ್ಪು ನೀಡಿದ ನಂತರ ರಾಜ್ಯ ಸರ್ಕಾರ ಚುರುಕಾಗಿ ಜಾರಿ ಮಾಡಲು ಮುಂದಾಯಿತು ಆದರೆ ಸರಿಯಾದ ಜಾತಿಯ ಮಾಹಿತಿ ಇಲ್ಲದಿರುವುದರಿಂದ ಮತ್ತೇ ಹೋಸದಾಗಿ ಮಾದಿಗ ನಾಗ ಮೋಹನ್ ದಾಸ್ ಆಯೋಗ ಜಾತಿ ಗಣತಿಯನ್ನು ಮಾಡುವುದರ ಮೂಲಕ ವರದಿಯನ್ನು ಸಿದ್ದಪಡಿಸಿದೆ ಇದನ್ನು ಆಗಸ್ಟ್ 4 ರಂದು ಸರ್ಕಾರಕ್ಕೆ ತಲುಪಲಿದೆ ಇದಾದ ನಂತರ 20 ದಿನಗಳೊಗಾಗಿ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾಗಲಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಧಿಕಾರಕ್ಕೆ ಬಂದು ಮೊದಲ ಸಚಿವ ಸಂಪುಟದಲ್ಲಿ ಒಳ ಮೀಸಲಾತಿಯನ್ನು ಜಾರಿ ಮಾಡುತ್ತೇವೆ ಎಂದು ಎಲ್ಲೂ ಸಹಾ ಹೇಳಿಲ್ಲ ಒಳ ಮೀಸಲಾತಿ ಜಾರಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ತಿಳಿಸಲಾಗಿತ್ತು ಆದರೆ ಕೆಲವು ಜನ ಮಾದಿಗ ಸಮುದಾಯವನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ.

ಒಳ ಮೀಸಲಾತಿ ಜಾರಿಯಾಗಬೇಕೆಂದು ಕಳೆದ 35 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಲಾಗಿತ್ತು, ಸಮಾಜದಲ್ಲಿ ಇದಕ್ಕೆ ಬೆಲೆ ಇದೆ ಆದರೆ ಸುಪ್ರಿಂ ಕೋರ್ಟ ತೀರ್ಪು ನೀಡದ ನಂತರ ನಡೆದ ಹೋರಾಟಗಳಿಗೆ ಯಾವುದೆ ಬೆಲೆ ಇಲ್ಲ ಒಳ ಮೀಸಲಾತಿಯನ್ನು ಜಾರಿ ಮಾಡಲು ಸರ್ಕಾರಕ್ಕೆ ಕಾಲಾವಕಾಶವನ್ನು ನೀಡಬೇಕಿದೆ ಅದನ್ನು ಮಾಡದೆ ಒಳ ಮಿಸಲಾತಿ ಜಾರಿಯಾಗಿಲ್ಲ ಎಂದು ಬೊಬ್ಬೆ ಹೊಡೆಯುವುದು ಪ್ರತಿಭಟನೆ ಮಾಡುವುದು ಸರಿಯಲ್ಲ ಇದರ ಬದಲಿಗೆ ಸರ್ವೆ ಪ್ರಾರಂಭವಾದಾಗ ನಮ್ಮ ಸಮುದಾಯ ಇರುವ ಜಾಗಕ್ಕೆ ಹೋಗಿ ಮಾದಿಗ ಎಂದು ಬರೆಸುವಂತೆ ಜಾಗೃತಿಯನ್ನು ಮೂಡಿಸುವಂತ ಕಾರ್ಯವನ್ನು ಮಾಡಬೇಕಿತ್ತು ಇದು ಬಿಟ್ಟು ಈಗ ಹೋರಾಟ, ಪ್ರತಿಭಟನೆಯನ್ನು ಮಾಡುವುದು ಸರಿಯಲ್ಲ ಎಂದು ವಿರೋಧಿಗಳಿಗೆ ಟಾಂಗ್ ನೀಡಿದರು.

ಒಳ ಮೀಸಲಾತಿ ಜಾರಿಯಾಗುವವರೆಗೂ ರಾಜ್ಯದಲ್ಲಿ ಯಾವ ಹುದ್ದೆಗಳು ತುಂಬಿಲ್ಲ, ಜಾರಿ ಅಂದ ಮೇಲೆ ಹುದ್ದೆಗಳು ತುಂಬುವಂತ ಕಾರ್ಯವಾಗಲಿದೆ ಅಲ್ಲಿಯವರೆಗೂ  ಮಾದಿಗರನ್ನು ದಾರಿ ತಪ್ಪಿಸುವಂತ ಕೆಲಸ ಮಾಡಬಾರದು.ನಾವು ಬೇಡ ಅಂದ್ರೂ ಕೂಡ ಜಾರಿಗೆ ತರುವೆ ಎಂದು ಸಿಎಂ ಹೇಳಿದ್ದಾರೆ.ಹಳ್ಳಿ ಹಳ್ಳಿಗೆ ಹೋಗಿ ಮಾದಿಗರಿಗೆ ಮಾಹಿತಿಯನ್ನು ಮೂಡಿಸಲಾಗಿದೆ ಯಾವ ಪಾರ್ಟಿಯನ್ನು ನಾನು ಟೀಕೆಯನ್ನು ಮಾಡುವುದಿಲ್ಲ ಒಳ ಮೀಸಲಾತಿ ಜಾರಿ ಮಾಡುತ್ತಾರೆ.ಪಾದಯಾತ್ರೆ ಮಾಡುವವರು ಹಿಂದೆ ನಮ್ಮ ಜನರು ಹೋಗಬಾರದು ಎಂದ ಅವರು, ಹೋರಾಟ ಮಾಡಿ ನ್ಯಾಯ ರೀತಿಯಲ್ಲಿ  ಮಾತಾಡಬೇಕು ಹಿಂದೆ ಹೋರಾಟ ಮಾಡಿದವರಿಗೆ ನಾನು ಗೌರವ ಸೂಚಿಸುತ್ತೇನೆ ಒಳ ಮೀಸಲಾತಿ ವರದಿ ಸರ್ಕಾರದ ಕೈಗೆ ಸೋಮವಾರ ಸೇರಲಿದೆ.15 ದಿನಗಳ  ಕಾಲದಲ್ಲಿ ಜಾರಿಯಾಗಲಿದೆ. ಸರ್ಕಾರದ ಯಾವುದೇ ಮೋಸಮಾಡಿಲ್ಲ. ನೈಜ ಹೋರಾಟಗಾರರು ಶಾಂತಿಯುತವಾಗಿ ಸುಮ್ಮನೆ ಇದ್ದರೆ, ಆದರೆ ಮಧ್ಯೆ ಬಂದ ಕೆಲ ಹೋರಾಟಗಾರರು ಸಮುದಾಯವನ್ನು ದಾರಿ ತಪ್ಪಿಸುವZ ಕಾರ್ಯವನ್ನು ಮಾಡುತ್ತಿದ್ದಾರೆ ನಿರುದ್ಯೋಗಿ ಯುವಜನತೆಗೆ ಉದ್ಯೋಗ ನೇಮಕಾತಿಯಲ್ಲಿ  ಒಂದು ವರ್ಷ ಸಡಿಲಿಕೆ ಮಾಡುವುದಕ್ಕೆ ಸರ್ಕಾರಕ್ಕೆ ಮನವಿ ಮಾಡಲಾ ಗುವುದು ಎಂದು ಅಂಜನೇಯ ತಿಳಿಸಿದರು.

 

ಗೋಷ್ಟಿಯಲ್ಲಿ ಜಿ.ಪಂ.ಮಾಜಿ ಸದಸ್ಯ ನರಸಿಂಹರಾಜು, ನ್ಯಾಯಾವಾದಿಗಳಾದ ಶರಣಪ್ಪ, ರವಿಂದ್ರ, ಕೋಟಿ, ವಿಜಯಕುಮಾರ್ ಹಾಜರಿದ್ದರು.

 

 

 

 

 

 

 

 

 

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026