LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಐತಿಹಾಸಿಕ ಕೋಟೆ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಹೆಚ್ಚಿದ ಸೌಲಭ್ಯ ರೂ.2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ



ಚಿತ್ರದುರ್ಗಜುಲೈ30:

ಐತಿಹಾಸಿಕ ಕೋಟೆ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ರೂ.2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬುಧವಾರ ಲೋಕಾರ್ಪಣೆಗೊಳಿಸಿದರು.

ಕೋಟೆ ಮುಂಭಾಗದ ಮಯೂರ ಹೋಟೆಲ್ ಪಕ್ಕದಲ್ಲಿ 2018-19ನೇ ಸಾಲಿನ ಬಂಡವಾಳ ವೆಚ್ಚ ಯೋಜನೆಯಡಿ ಪ್ರವಾಸಿ ಮಾಹಿತಿ ಕೇಂದ್ರ, ಪಾರ್ಕಿಂಗ್ ಸೌಲಭ್ಯ, ಲಗೇಜ್ ಕೊಠಡಿ, ಕುಡಿಯುವ ನೀರಿನ ಸೌಲಭ್ಯ, ಪ್ರವಾಸಿಗರಿಗೆ ವಿಶ್ರಾಂತಿ ಕೊಠಡಿ, ಮಹಿಳಾ ಮತ್ತು ಪುರುಷ ಸ್ನಾನಗೃಹ ಹಾಗೂ ಶೌಚಾಲಯಗಳನ್ನು ನಿರ್ಮಿಸಲಾಗಿದೆ.

ಈ ವೇಳೆ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಪ್ರವಾಸೋದ್ಯಮ ಇಲಾಖೆಯಿಂದ ಕಾಮಗಾರಿಗಳು ಪೂರ್ಣಗೊಂಡು ಬಹಳ ದಿನಗಳು ಆಗಿದ್ದವು. ಕೆಲ ದಿನಗಳ ಹಿಂದೆ ಇಲ್ಲಿ ವೀಕ್ಷಣೆಗೆ ಆಗಮಿಸಿದ ವೇಳೆ, ಕಟ್ಟಡಗಳು ಪೂರ್ಣಗೊಂಡಿದ್ದು ಕಂಡು ಬಂದಿತು. ಶೀಘ್ರವೇ ಉದ್ಘಾಟನೆ ನೆರವೇರಿಸಿ ಬರುವ ಪ್ರವಾಸಗರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೆ, ಅದರಂತೆ ಇಂದು ಪ್ರವಾಸಿ ಮಾಹಿತಿ ಕೇಂದ್ರ, ಪಾರ್ಕಿಂಗ್ ಸೌಲಭ್ಯ, ಲಗೇಜ್ ಕೊಠಡಿ, ಕುಡಿಯುವ ನೀರಿನ ಸೌಲಭ್ಯ, ಪ್ರವಾಸಿಗರಿಗೆ ವಿಶ್ರಾಂತಿ ಕೊಠಡಿ, ಶೌಚಾಲಯ ಹಾಗೂ ಸ್ನಾನ ಗೃಹಗಳನ್ನು ಲೋಕಾರ್ಪಣೆಗೊಳಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗಿದೆ. ಈ ಎಲ್ಲಾ ಸೌಲಭ್ಯಗಳು ಒಂದೇ ಆವರಣದ ಒಳಗಡೆ ಇದ್ದು, ರಕ್ಷಣೆಗಾಗಿ ಸುತ್ತಲೂ ಕಾಂಪೌಂಡ್ ನಿರ್ಮಿಸಲಾಗಿದೆ. ಐತಿಹಾಸಿಕ ಕೋಟೆ ವೀಕ್ಷಣೆಗೆ ಸಂಜೆಯವರೆಗೆ ಮಾತ್ರ ಅವಕಾಶವಿದ್ದು ಪ್ರವಾಸಿಗರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಪೌರಾಯುಕ್ತೆ ಎಂ.ರೇಣುಕಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಡಾ.ನಾಗವೇಣಿ, ಕೆಆರ್ಐಡಿಎಲ್ ಕಾರ್ಯಪಾಲಕ ಅಭಿಯಂತರ ಟಿ.ಎನ್.ವಿನಾಯಕ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು