LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೊಸ Gen-Z ಅಂಚೆ ಕಚೇರಿ ಸ್ಥಾಪಿಸಿದ ಇಂಡಿಯಾ ಪೋಸ್ಟ್

ನವದೆಹಲಿ : ಅಂಚೆ ಕಚೇರಿಗಳನ್ನು ಉಳಿಸಲು ಹಾಗೂ ಮತ್ತೆ ಹೆಚ್ಚು ಹೆಚ್ಚು ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ಯೋಜನೆ  ಒಂದನ್ನು  ಕೈಗೊಂಡಿದೆ.

Gen Z (ಜೆನ್-ಜಿ) 1997 ರಿಂದ 2012 ರ ನಡುವೆ ಜನಿಸಿದ ತಲೆಮಾರಿಗಾಗಿ ಹೊಸ ಯೋಜನೆಯೊಂದನ್ನು ಅಂಚೆ ಕಚೇರಿ ಮೂಲಕ ಪರಿಚಯಿಸಿದೆ. ಡಿಸೆಂಬರ್ 9 ರಂದು ಇಂಡಿಯಾ ಪೋಸ್ಟ್ ಎರಡು ಆಧುನಿಕ ಮತ್ತು ವಿದ್ಯಾರ್ಥಿ ಕೇಂದ್ರಿತ Gen-Z ಅಂಚೆ ಕಚೇರಿಗಳನ್ನು ಸ್ಥಾಪಿಸಿದೆ. ಒಂದನ್ನು ಕೇರಳದ ಕೊಟ್ಟಾಯಂನ ಸಿಎಂಸಿ ಕಾಲೇಜು, ಇನ್ನೊಂದು ವಿಶಾಖಪಟ್ಟಣಂನ ಆಂಧ್ರ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಲಾಯಿತು.

ಈ ಹೊಸ ಅಂಚೆ ಕಚೇರಿಗಳ ವಿನ್ಯಾಸಗಳು ಸೃಜನಶೀಲತೆ ಮತ್ತು ತಂತ್ರಜ್ಞಾನದಿಂದ ಕೂಡಿದೆ. Gen-Z ಆಧಾರಿತ ಅಂಚೆ ಕಚೇರಿಗಳು ಇಂದಿನ ಮಕ್ಕಳಿಗೆ ತುಂಬಾ ಅಗತ್ಯವಾಗಿದೆ. ಇದು ವಿದ್ಯಾರ್ಥಿಗಳಿಗೆ ಹೆಚ್ಚು ಸಂಶೋಧನೆ ಮಾಡಲು ಸಹಾಯ ಮಾಡುತ್ತದೆ.

ಕೇರಳದ ಕೊಟ್ಟಾಯಂನಲ್ಲಿರುವ ಸಿಎಮ್ಎಸ್ ಕಾಲೇಜಿನಲ್ಲಿ ಎರಡು ಆಧುನಿಕ ಶೈಲಿಯ ಜೆನ್-ಝಡ್-ವಿಷಯದ ಅಂಚೆ ಕಚೇರಿಗಳನ್ನು ತೆರೆಯಲಾಗಿದೆ. ಇನ್ನೊಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಆಂಧ್ರ ವಿಶ್ವವಿದ್ಯಾಲಯದಲ್ಲಿ. ಮೊದಲ Gen-Z ಅಂಚೆ ಕಚೇರಿಯನ್ನು ಐಐಟಿ ದೆಹಲಿಯಲ್ಲಿ ತೆರೆಯಲಾಗಿದೆ. ಇದು ಅಂಚೆ ಸೇವೆಗಳಿಗೆ ಆಧುನಿಕ ಸ್ಪರ್ಶವನ್ನು ತರುವ ಪ್ರಯತ್ನದ ಭಾಗವಾಗಿದೆ.

ಕೇರಳ ಹಾಗೂ ಆಂಧ್ರದಲ್ಲಿರುವ ಎರಡು Gen-Z ಅಂಚೆ ವಿಶಿಷ್ಟವಾದ ಆಧುನಿಕ ಒಳಾಂಗಣಗಳನ್ನು ಹೊಂದಿವೆ. ಉತ್ತಮ ತಂತ್ರಜ್ಞಾನಗಳನ್ನು ಬಳಸಲಾಗಿದೆ. ಜತೆಗೆ ಯುವಕರಿಗೆ ವಿಶ್ರಾಂತಿ ವಾತಾವರಣವನ್ನು ನೀಡುತ್ತವೆ. ಇನ್ನು ಕೇರಳದಲ್ಲಿ ಅಂಚೆ ಕಚೇರಿ ಸ್ಥಳವನ್ನು ವಿದ್ಯಾರ್ಥಿಗಳು ಸ್ವತಃ ಇಂಡಿಯಾ ಪೋಸ್ಟ್ ಸಹಯೋಗದೊಂದಿಗೆ ವಿನ್ಯಾಸಗೊಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026