LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯ ಮತ್ತು ಕ್ಷೇಮ ಕೇಂದ್ರಕ್ಕೆ ರಾಷ್ಟ್ರೀಯ ಮೌಲ್ಯಮಾಪನ ತಂಡ ಭೇಟಿ ಪರಿಶೀಲನೆ

ಕವಿತಾಳ : ಸಮೀಪದ ಬಾಗಲವಾಡ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರಕ್ಕೆ ರಾಷ್ಟ್ರೀಯ ಗುಣಮಟ್ಟದ ಭರವಸೆ ತಂಡ ಗುರುವಾರ ಭೇಟಿ ನೀಡಿ, ಸಮುದಾಯ ಆರೋಗ್ಯದ ಕುರಿತಾದ ಮೌಲ್ಯಮಾಪನ ಕಾರ್ಯವನ್ನು ಕೈಗೊಂಡಿತು.

ತಾಲೂಕು ಆರೋಗ್ಯಾಧಿಕಾರಿ

ಡಾ. ಶರಣಬ‌ಸವರಾಜ ಪಾಟೀಲ ಮಾತನಾಡಿ, ಆಸ್ಪತ್ರೆ ಮತ್ತು ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಉತ್ತಮ ಕಾರ್ಯಕ್ಷಮತೆ, ಸೌಲಭ್ಯಗಳನ್ನು ಗುರುತಿಸುವ ಜೊತೆಗೆ ಸಮುದಾಯದಲ್ಲಿ ಸಾರ್ವಜನಿಕ ಆಸ್ಪತ್ರೆಗಳ ವಿಶ್ವಾಸಾರ್ಹತೆಯನ್ನು ಸುಧಾರಣೆ ಮಾಡುವ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಾಷ್ಟ್ರೀಯ ಗುಣಮಟ್ಟದ ಭರವಸೆಯ ಕಾರ್ಯಕ್ರಮವನ್ನು ಪ್ರಾರಂಭಿಸಿದೆ ಎಂದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಶಿವುಕುಮಾರ ಮಾತನಾಡಿ, ಉಪ ಕೇಂದ್ರದ ಬಾಹ್ಯ ಮತ್ತು ಆಂತರಿಕ ಮೌಲ್ಯಮಾಪನವನ್ನು ಕೈಗೊಳ್ಳಲಾಗುತ್ತದೆ. ಮೌಲ್ಯಮಾಪನ ತಂಡವು ವಿವಿಧ ವಿಭಾಗಗಳನ್ನು ಪರೀಕ್ಷಿಸುತ್ತದೆ.ಸೋಂಕು ನಿಯಂತ್ರಣ ಅಭ್ಯಾಸಗಳು, ರೋಗಿಗಳ ಹಾರೈಕೆ, ರೋಗಿಗಳ ಪ್ರತಿಕ್ರಿಯೆ, ಕ್ಲಿನಿಕಲ್ ಸೇವೆಗಳು, ಗುಣಮಟ್ಟ ನಿರ್ವಹಣೆ ಸೇರಿದಂತೆ ಇನ್ನೂ ಅನೇಕ ಅಂಶಗಳ ಕುರಿತು ಮೌಲ್ಯಮಾಪನವನ್ನು ಮಾಡುತ್ತದೆ ಎಂದರು.

ಮೌಲ್ಯಮಾಪನ ತಂಡದ ಹಿರಿಯ ಮೌಲ್ಯಮಾಪಕರಾದ ಡಾ. ಸುಬ್ರಮಣಿಯನ್ ಅವರು ಆರೋಗ್ಯ ಸೇವೆಗಳನ್ನು ಸಮುದಾಯಕ್ಕೆ ಮುಟ್ಟಿಸಿರುವ ಬಗ್ಗೆ ಸಮುದಾಯ ಆರೋಗ್ಯಾಧಿಕಾರಿ ಡಾ. ಮಹೇಶ ಅವರಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಸಮುದಾಯಕ್ಕೆ ಮುಟ್ಟಿಸುತ್ತಿರುವ ರೀತಿ ಮತ್ತು ಸಾರ್ವಜನಿಕರ ಅಭಿಪ್ರಾಯ ಬಗ್ಗೆ ಮಾಹಿತಿ ಪಡೆದರು. ಕ್ಷಯರೋಗ, ಕುಷ್ಠರೋಗದ ಬಗ್ಗೆ ಅರಿವು, ಜಾಗೃತಿ ಮೂಡಿಸಿ ಚಿಕಿತ್ಸೆ ನೀಡುವುದು ಮುಖ್ಯವಾಗಿದೆ ಎಂದರು.

ತಂಡದ ಇನ್ನೋರ್ವ ಮುಖ್ಯಸ್ಥರಾದ ಡಾ.ಮಹ್ಮಮದ್ ರಿಜ್ವಾನ್ ಅಲಿ ಅವರು ತಾಯಿಯ ಮತ್ತು ಮಕ್ಕಳ ಆರೋಗ್ಯ ಸೇವೆಗಳ ಕುರಿತು, ಮಕ್ಕಳಿಗೆ ನೀಡುವ ಲಸಿಕೆ, ಗರ್ಭಿಣಿ ಮಹಿಳೆಯರಿಗೆ ನೀಡುವ ಲಸಿಕೆ ಹಾಗೂ ಆರೋಗ್ಯದ ಮಾಹಿತಿಯನ್ನು ಪಡೆದರು.

ಈ ಸಂದರ್ಭದಲ್ಲಿ ಮೌಲ್ಯಮಾಪನ ತಂಡದ ವ್ಯವಸ್ಥಾಪಕರಾದ ಹರೀಶ ಪಾಟ್ನೆ,ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ, ಸಮುದಾಯ ಆರೋಗ್ಯ ಅಧಿಕಾರಿ ಶರಣಯ್ಯ ಹಿರೇಮಠ, ಶಿವುಕುಮಾರ, ಪ್ರಯೋಗ ಶಾಲಾ ತಂತ್ರಜ್ಞಾನಾಧಿಕಾರಿ ಮನ್ವರ್ ಅಲಿ, ಫಾರ್ಮಸಿಸ್ಟ್ ಅಧಿಕಾರಿ ಉಪೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು