LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಪ್ರಸ್ತಾವನೆಗಳ ಆಹ್ವಾನ

ಚಿತ್ರದುರ್ಗ

2025ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಿಗೆ ಸಂಬಂಧಿಸಿದ ಶಿಫಾರಸ್ಸಿನ ಪ್ರಸ್ತಾವನೆ ಆಹ್ವಾನಿಸಲಾಗಿದೆ. 2024ರ ಆಗಸ್ಟ್ 31 ಪ್ರಸ್ತಾವನೆ ಸಲ್ಲಿಸಲು ಕೊನೆಯ ದಿನವಾಗಿದೆ.

ಕೇಂದ್ರ ಗೃಹ ಮಂತ್ರಾಲಯ ಅಧಿಸೂಚನೆಯಂತೆ ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಅಂದರೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳನ್ನು, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಇತ್ಯಾದಿ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2025ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೊತ್ಸವ ದಿನದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ.

2025ನೇ ಸಾಲಿನ ಪದ್ಮ ಶ್ರೇಣಿಯ ಪ್ರಶಸ್ತಿಗಳಿಗೆ ಅನ್ವಯಿಸುವ ನಿಯಮಾವಳಿಗಳು https://padmaawards.gov.in ವೆಬ್ಸೈಟ್ನಲ್ಲಿ ಲಭ್ಯವಿರುತ್ತವೆ.

ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಸಂಬಂಧಿಸಿದ ಶಿಫಾರಸ್ಸಿನ ಪ್ರಸ್ತಾವನೆಯನ್ನು ಸಲ್ಲಿಸುವ ಪ್ರಕ್ರಿಯೆಯು 2024ರ ಸೆಪ್ಟೆಂಬರ್ 15ರಂದು ಮುಕ್ತಾಯಗೊಳ್ಳಲಿದೆ ಎಂದು ಕೇಂದ್ರ ಸರ್ಕಾರವು ತಿಳಿಸಿದ್ದು, ರಾಜ್ಯ ಸರ್ಕಾರವು ಪ್ರಸ್ತಾವನೆಗಳನ್ನು ಪರಿಶೀಲಿಸಿ ಸೆಪ್ಟೆಂಬರ್ 15ರೊಳಗಾಗಿ ಕೇಂದ್ರ ಸರ್ಕಾರಕ್ಕೆ ಆನ್ಲೈನ್ ಮೂಲಕ ಕಳುಹಿಸಬೇಕಾಗಿರುವುದರಿಂದ, ತಮ್ಮ ಪ್ರಸ್ತಾವನೆಗಳನ್ನು ಆಗಸ್ಟ್ 31 ರೊಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯಲ್ಲಿ ಅರ್ಜಿ ಪಡೆದು ನಮೂನೆಯಲ್ಲಿ ಸಲ್ಲಿಸುವುದು ಹಾಗೂ ಸಾಫ್ಟ್ ಪ್ರತಿಗಳನ್ನು ಇ-ಮೇಲ್ ವಿಳಾಸ [email protected]ಗೆ ಕಳುಹಿಸಬೇಕು. ಆಗಸ್ಟ್ 31ರ ನಂತರ ಬರುವ ಯಾವುದೇ ಪ್ರಸ್ತಾವನೆಗಳನ್ನು, ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.

“ಕ್ರೀಡೆಗೆ” ಸಂಬಂಧಿಸಿದಂತೆ, ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಅರ್ಜಿಗಳನ್ನು ಸಲ್ಲಿಸುವವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯಿಂದ ನಿಗಧಿತ ನಮೂನೆಗಳನ್ನು ಪಡೆದು ಪ್ರಸ್ತಾವನೆಗಳನ್ನು ಆಗಸ್ಟ್ 20 ರೊಳಗಾಗಿ ಈ ಕಚೇರಿಗೆ ಕಳುಹಿಸಿಕೊಡಲು ಹಾಗೂ ಸಾಫ್ಟ್ ಪ್ರತಿಗಳನ್ನು ಇ-ಮೇಲ್ [email protected] ಗೆ ಕಳುಹಿಸಲು ಚಿತ್ರದುರ್ಗ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

=========
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು