Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಕಾರ್ಮಿಕರ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  
ಉದ್ಯೋಗದಾತರು ತಮ್ಮಲ್ಲಿ ಕಾರ್ಯನಿರ್ವಹಿಸುವ ಗುತ್ತಿಗೆ ಉದ್ಯೋಗಿಗಳನ್ನು ಒಳಗೊಂಡಂತೆ ಎಲ್ಲಾ ಉದ್ಯೋಗಿಗಳನ್ನು ಸ್ಪ್ರೀ 2025 ಯೋಜನೆಯಡಿಯಲ್ಲಿ ನೋಂದಾಯಿಸಿದ್ದಲ್ಲಿ ನೋಂದಾವಣೆ ದಿನದಿಂದಲೇ ಕಾರ್ಮಿಕರ ವಿಮಾ ಕಾಯ್ದೆಯಡಿ ದೊರೆಯುವ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಹರಾಗುತ್ತಾರೆ.


ಸ್ಪ್ರೀ 2025 (ಉದ್ಯೋಗದಾತರು ಮತ್ತು ಉದ್ಯೋಗಿಗಳನ್ನು ನೋಂದಾವಣೆ ಉತ್ತೇಜಿಸುವ ಯೋಜನೆ 2025) ಯೋಜನೆಯನ್ನು ಕಾರ್ಮಿಕರ ವಿಮಾ ನಿಗಮವು ಜಾರಿಗೆ ತಂದಿದ್ದು, ಈ ಯೋಜನೆಯು 1ನೇ ಜುಲೈನಿಂದ 31ನೇ ಡಿಸೆಂಬರ್ ವರೆಗೆ ಜಾರಿಯಲ್ಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಒಂದು ಬಾರಿಯ ಅವಕಾಶವನ್ನು ನೀಡಿದ್ದು, ಈ ಅವಧಿಯಲ್ಲಿ ಉದ್ಯೋಗದಾತರು ನೋಂದಾವಣೆಯಾದಲ್ಲಿ ಹಿಂದಿನ ಅವಧಿಗೆ ಯಾವುದೇ ದಂಡ ಅಥವಾ ಬಾಕಿ ಪಾವತಿಯ ಅವಶ್ಯಕತೆ ಇರುವುದಿಲ್ಲ. ಮತ್ತು ಯಾವುದೇ ತಪಾಸಣೆ ಇರುವುದಿಲ್ಲ.


ಈ ಯೋಜನೆಯ ಅನುಷ್ಠಾನದಂತೆ ಮತ್ತು ಮುಖ್ಯ ಕಛೇರಿಯ ಸೂಚನೆಯಂತೆ ಉಪಪ್ರಾದೇಶಿಕ ಕಛೇರಿ, ಬೊಮ್ಮಸಂದ್ರ ಕಛೇರಿಯು ಫಲಾನುಭವಿಗಳ ಸಹಕಾರದಲ್ಲಿ ಮತ್ತು ರಾಜ್ಯ ಸರ್ಕಾರದ ವಿವಿಧ ಕಛೇರಿಗಳ ಸಹಯೋಗದೊಡನೆ ಹಲವಾರು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಈ ಅವಧಿಯಲ್ಲಿ ಉದ್ಯೋಗದಾತರು ಮತ್ತು ಉದ್ಯೋಗಿಗಳು ನೋಂದಾವಣೆಯಾದಲ್ಲಿ ಅವರಿಗೆ ದೊರಕುವ ಅನುಕೂಲತೆಗಳ ಬಗ್ಗೆ ಅರಿವನ್ನು ಮೂಡಿಸಲಾಗುತ್ತಿದೆ. ಈ ಅವಧಿಯಲ್ಲಿ ಸಾವಿರಾರು ಉದ್ಯೋಗಿಗಳನ್ನು ಈ ಯೋಜನೆಯಡಿಯಲ್ಲಿ ನೋಂದಾಯಿಸಲಾಗಿದೆ ಮತ್ತು ಅವರ ಅಗತ್ಯತೆಗಳಿಗೆ ಅನುಸಾರ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.

ಇದುವರೆವಗೂ ಈ ಕಛೇರಿಯು ವಿವಿಧ ಸ್ಥಳಗಳಲ್ಲಿ 23 ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಕೈಗಾರಿಕಾ ಸಂಘಗಳಲ್ಲಿ ಕಾರ್ಯಕ್ರಮವನ್ನು ನಡೆಸಲಾಗಿದೆ ಮತ್ತು ಉದ್ಯೋಗಿಗಳನ್ನು ಸಾಮಾಜಿಕ ಸುರಕ್ಷತೆಯ ವ್ಯಾಪ್ತಿಗೆ ತರಲಾಗಿದೆ.

ಈ ಯೋಜನೆಯು ಒಂದು ಮೈಲಿಗಲ್ಲಾಗಿದ್ದು ಅರ್ಧ ಅವಧಿಯನ್ನು ಕ್ರಮಿಸಿ ಸಫಲತೆಯ ಸಾಗುತ್ತಿದ್ದು ಎಲ್ಲಾ ಉದ್ಯೋಗದಾತರು ಈ ಅವಧಿಯಲ್ಲಿ ತಮ್ಮ ಸಂಸ್ಥೆಗಳು, ಘಟಕಗಳನ್ನು ಹಾಗೂ ಉದ್ಯೋಗಿಗಳನ್ನು ನೋಂದಾವಣೆ ಮಾಡುವುದರ ಮೂಲಕ ಕಾರ್ಮಿಕರ ರಾಜ್ಯ ವಿಮಾ ನಿಗಮದಿಂದ ದೊರೆಯುವ ಹಲವಾರು ರೀತಿಯ ಸೌಲಭ್ಯಗಳನ್ನು ಅನುಕೂಲ ಮಾಡಿಕೊಡಲು ಇಎಸ್‍ಐಸಿಯು ಈ ಮೂಲಕ ಕೋರುತ್ತಿದೆ.

ಪಡೆಯಲು ಇಎಸ್‍ಐಸಿಯ ಈ ಉಪಕ್ರಮವು ಸರಳ ಹಾಗೂ ತಡಹರಿತ ವ್ಯವಹಾರವನ್ನು ಪ್ರೋತ್ಸಾಹಿಸುತ್ತಾ ಉದ್ಯೋಗದಾತರು ಯಾವುದೇ ದಂಡ ಶುಲ್ಕವಿಲ್ಲದೆ ತಮ್ಮ ಸಂಸ್ಥೆಯನ್ನು ನೋಂದಾವಣೆ ಮಾಡಿಕೊಂಡು ಮತ್ತು ಉದ್ಯೋಗಿಗಳನ್ನು ನೋಂದಾವಣೆ ಮಾಡಿ ಆರೋಗ್ಯ ಸೌಲಭ್ಯ ಹಾಗು ಸಾಮಾಜಿಕ ಸುರಕ್ಷೆಯ ವ್ಯಾಪ್ತಿಯನ್ನು ವಿಸ್ತರಿಸುವುದರ ಜೊತೆಗೆ ಈ ಯೋಜನೆಯಡಿ ದೊರೆಯುವ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವುದಾಗಿದೆ.

ಸ್ಪ್ರೀ / ಅಮ್ನೆಸ್ಟಿ/ ಇಎಲ್‍ಐ ಯೋಜನೆ ಕುರಿತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-26786391 ಅಥವಾ ಇ-ಮೇಲ್  [email protected]  ಗೆ ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ