LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳೆ ವಿಮೆ ಯೋಜನೆ: ನೋಂದಣಿಗೆ ಆಹ್ವಾನ


ಬಳ್ಳಾರಿ,ಜು.01



ಸಿರುಗುಪ್ಪ ವ್ಯಾಪ್ತಿಯಲ್ಲಿ ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಬೆಳೆ ವಿಮೆ ಯೋಜನೆ (ಕೆಆರ್ಎಸ್-ಪಿಎಂಎಫ್ಬಿವೈ) ಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ತಮ್ಮ ಬೆಳೆಗಳನ್ನು ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಆಲಿಕಲ್ಲು ಮಳೆ, ಪ್ರವಾಹ ಮತ್ತು ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕವಾರು ನಿರ್ಧರಿಸಿ ಬೆಳೆ ನಷ್ಟದ ಪರಿಹಾರ ನೀಡಲಾಗುವುದು.

ವಿಮಾ ಯೋಜನೆಯಡಿ ಒಳಪಡುವ ನೀರಾವರಿ ಬೆಳೆ: ಕೆಂಪು ಮೆಣಸಿನಕಾಯಿ ಆಗಿದ್ದು, ಪ್ರತಿ ಹೆಕ್ಟರ್ಗೆ ವಿಮಾ ಮೊತ್ತ ರೂ.43,505, ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.2,175 ಆಗಿರುತ್ತದೆ.

ಪಿಎಂಎಫ್ಬಿವೈ (ಪರಿಷ್ಕøತ) ಮಾರ್ಗಸೂಚಿಯನ್ವಯ ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿ ಒಳಪಡಿಸಲಾಗುತ್ತದೆ. ಬೆಳೆ ಸಾಲ ಪಡೆದ ರೈತರು ಈ ಯೋಜನೆಯಡಿ ಭಾಗವಹಿಸಲು ಇಚ್ಛಿಸದಿದ್ದಲ್ಲಿ ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರ ನೀಡಬೇಕು. ಅಂತಹ ರೈತರನ್ನು ಬೆಳೆ ವಿಮೆ ನೋಂದಣಿ ಯೋಜನೆಯಿಂದ ಕೈಬಿಡಲಾಗುವುದು.

ರೈತರು ಅಗತ್ಯ ದಾಖಲೆಗಳೊಂದಿಗೆ ವಿಮೆಗೆ ನೋಂದಾಯಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ದೂ.08396-222066 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು