( ಮೀನು)ಮತ್ಸ್ಯ ಸಂಪದ ಯೋಜನೆ : ಅರ್ಜಿ ಆಹ್ವಾನ
ಚಿತ್ರದುರ್ಗ: 2024-25ನೇ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 7 ಅರ್ಜಿ ಸಲ್ಲಿಸಲು ಕೊನೆಯ ದಿನ.
ಈ ಯೋಜನೆಯಡಿ ಸಾಮಾನ್ಯ ವರ್ಗದವರಿಗೆ ಶೇ.40 ರಷ್ಟು, ಮಹಿಳೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ.60 ರಷ್ಟು ಘಟಕ ವೆಚ್ಚದ ಸಹಾಯಧನ ನೀಡಲಾಗುವುದು.
ಆಸಕ್ತ ಫಲಾನುಭವಿಗಳು ಸೆಪ್ಟೆಂಬರ್ 7 ರೊಳಗಾಗಿ ಅರ್ಜಿಗಳನ್ನು ಸಂಬಂಧಿಸಿದ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಕೋರಿದೆ.
ಯೋಜನೆಗಳ ಅನುಷ್ಠಾನಕ್ಕೆ ನಿಗದಿ ಪಡಿಸಿದ ಗುರಿ ಹಾಗೂ ಮೀಸಲಾತಿ ಸೇರಿದಂತೆ ಇತರೆ ಮಾಹಿತಿಗಾಗಿ, ಚಿತ್ರದುರ್ಗ ಮತ್ತು ಮೊಳಕಾಲ್ಮೂರು ಮೀನುಗಾರಿಕೆ ಸಹಾಯಕ ನಿರ್ದೇಶಕ ತುಳಸಿದಾಸ್ ಅವರ ದೂರವಾಣಿ ಸಂಖ್ಯೆ 9342187356 ಹಾಗೂ ಹಿರಿಯೂರು ತಾಲ್ಲೂಕು ಸಹಾಯಕ ನಿರ್ದೇಶಕ ಎನ್.ಮಂಜುನಾಥ್ ಅವರ ದೂರವಾಣಿ ಸಂಖ್ಯೆ 7022933310, ಚಳ್ಳಕೆರೆ ತಾಲ್ಲೂಕು ಸಹಾಯಕ ನಿರ್ದೇಶಕರಾದ ದೀಪಾಲಿ ದೂರವಾಣಿ ಸಂಖ್ಯೆ 9740900866 ಹಾಗೂ ಹೊಸದುರ್ಗ ಮತ್ತು ಹೊಳಲ್ಕೆರೆ ಮೀನುಗಾರಿಕೆ ಸಹಾಯಕ ನಿರ್ದೇಶಕ ವೆಂಕಟೇಶ್ವರ ಅವರ ದೂರವಾಣಿ ಸಂಖ್ಯೆ 9945004235 ಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.