LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಷಡಾಕ್ಷರಿ ಬಿಜೆಪಿ ಸದಸ್ಯರಾಗುವುದು ಒಳ್ಳೆಯದು : ಎಚ್ ಸಿ ಯೋಗೇಶ್

ಶಿವಮೊಗ್ಗ, ಆ.12 : ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಬಿಜೆಪಿ ಸದಸ್ಯರಾಗುವುದು ಒಳ್ಳೆಯದು ಎಂದು ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಸರಕಾರಿ ನೌಕರರ ಸಂಘದ ಅಧ್ಯಕ್ಷನಾಗಿ ಸಂಸದ ಬಿ ವೈ ರಾಘವೇಂದ್ರ ಅವರ ಹುಟ್ಟುಹಬ್ಬ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಸಲಹೆ-ಸೂಚನೆ ನೀಡಿರುವುದನ್ನು ಆಕ್ಷೇಪಿಸಿದ್ದಾರೆ.

ಆ. 5 ರಂದು ನಡೆದ ಈ ಸಭೆಯಲ್ಲಿ ಸಂಸದರ ಅಭಿಮಾನಿಗಳ ಬಳಗದ ಜೊತೆ ಷಡಾಕ್ಷರಿ ಹಾಜರಿರುವುದರ ಚಿತ್ರ ಬಿಡುಗಡೆ ಮಾಡಿದ ಯೋಗೇಶ್, ಷಡಾಕ್ಷರಿ ಸರಕಾರಿ ನೌಕರರ ಹಿತ ಕಾಯುತ್ತಾರೋ ಅಥವಾ ಬಿಜೆಪಿ ಹಿತ ಕಾಯುತ್ತಾರೆಯೋ ಎಂದು ಪ್ರಶ್ನಿಸಿದರು. ಷಡಕ್ಷರಿ ಬಹಿರಂಗವಾಗಿ ಬಿಜೆಪಿ ಸದಸ್ಯರಾಗಿ ಆ ಪಕ್ಷದ ಕೆಲಸ ಮಾಡಲಿ ಅದನ್ನು ಬಿಟ್ಟು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಕೆಲಸ ಮಾಡುವುದು ಎಂದು ಹೇಳಿದರು. ರಾಘವೇಂದ್ರ ಅವರ ಜನ್ಮದಿನದ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಷಡಕ್ಷರಿ ಮಾಡುತ್ತಿದ್ದಾರೆ ಅವರು ರಾಜಕೀಯೇತರವಾಗಿ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜೀನಾಮೆ ಕೊಟ್ಟು ರಾಜಕೀಯ ಸೇರಲಿ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST