LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಪುನರ್ವವಸತಿ ಕೇಂದ್ರದ ಮೂಲಕ ವಿಕಲಚೇತನರ ಮನೆ ಬಾಗಿಲಿಗೆ ವಿವಿಧ ಸೌಲಭ್ಯ ಒದಗಿಸಲು ಕ್ರಮ : ಜಗದೀಶ್.ಜಿ











ಬೆಂಗಳೂರು ನಗರ ಜಿಲ್ಲೆ, ಮಾರ್ಚ್ 18 : ವಿಕಲಚೇತನರನ್ನು ಗುರುತಿಸಿ ಅವರಿಗೆ ಶೈಕ್ಷಣಿಕ, ಉದ್ಯೋಗ ಮತ್ತು ತರಬೇತಿ, ಸಾಮಾಜಿಕ ಭದ್ರತೆ ಹಾಗೂ ಪುನರ್ವಸತಿ ಸೇವೆಗಳನ್ನು ಅವರ ಮನೆ ಬಾಗಿಲಿನಲ್ಲೇಯೇ ಕಲ್ಲಿಸಿ ಅವರ ಸರ್ವಾಂಗೀಣ ಅಭಿವೃದ್ಧಿಗಾಗಿ ಜಿಲ್ಲಾ ಪುನರ್ವವಸತಿ ಕೇಂದ್ರಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಜಿಲ್ಲಾ ಪುನರ್ವವಸತಿ ಕೇಂದ್ರದ ಮೂಲಕ ವಿಕಲಚೇತನರು ಸರ್ಕಾರದ ಸೌಲಭ್ಯಗಳನ್ನು ಪಡೆದು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್.ಜಿ ಅವರು ತಿಳಿಸಿದರು.



ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ, ಜಿಲ್ಲಾ ಪುನರ್ವವಸತಿ ಕೇಂದ್ರದ, ಜಿಲ್ಲಾ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.



ಬೆಂಗಳೂರು ನಗರ ಜಿಲ್ಲಾ ಪುನರ್ವವಸತಿ ಯೋಜನೆಯನ್ನು ಕುಮಾರ ಪಾರ್ಕ್ ಟ್ರಸ್ಟ್(ರಿ), ಈ ಸ್ವಯಂ ಸೇವಾ ಸಂಸ್ಥೆಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕೇಂದ್ರದಲ್ಲಿ ತಪಾಸಣಾ ಶಿಬಿರಗಳ ಮೂಲಕ ವಿಕಲಚೇತನರ ಸಮೀಕ್ಷೆ ಹಾಗೂ ಗುರುತಿಸುವಿಕೆ, ವಿಕಲತೆಯನ್ನು ತಡೆಗಟ್ಟುವುದು. ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ ಕಾರ್ಡ್) ಮಾಡಿಸುವುದು. ಅಗತ್ಯ ಸಾಧನ ಸಲಕರಣೆಗಳನ್ನು ನೀಡುವುದು. ರಿಯಾಯಿತಿ ದರದ ಬಸ್ ಪಾಸ್, ಅಂಗವಿಕಲತೆಯ ನಿವಾರಣಾ ಶಸ್ತ್ರಚಿಕಿತ್ಸೆಗೆ ಮಾಹಿತಿ ನೀಡುವುದು ಹಾಗೂ ಇಲಾಖೆಯ ಎಲ್ಲಾ ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಅಗತ್ಯ ಸೌಲಭ್ಯಗಳನ್ನು ಹಾಗೂ ಪುನರ್ವಸತಿಯನ್ನು ಸರ್ಕಾರದಿಂದ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.



ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸೌಲಭ್ಯಗಳನ್ನು ಪಡೆಯಲು, ಜಿಲ್ಲಾ ಪುನರ್ವವಸತಿ ಕೇಂದ್ರ, ಕುಮಾರ ಪಾರ್ಕ್ ಟ್ರಸ್ಟ್(ರಿ), ದೂರವಾಣಿ ಸಂಖ್ಯೆ-080-41179472 ಅನ್ನು ಸಂಪರ್ಕಿಸಿ, ವಿಕಲಚೇತನರು ಸರ್ಕಾರದ ಸೌಲಭ್ಯಗಳನ್ನು ಪಡೆದು ಸದುಪಯೋಗ ಪಡಿಸಿಕೊಳ್ಳಬೇಕಾಗಿ ತಿಳಿಸಿದರು.



ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲೆ ಅಪರ ಜಿಲ್ಲಾಧೀಕಾರಿಗಳಾದ ಡಾ.ಜಗದೀಶ್.ಕೆ, ಜಿಲ್ಲಾ ಅಂಗವಿಕಲಕರ ಕಲ್ಯಾಣಾಧಿಕಾರಿ ಕೃಷ್ಣಮೂರ್ತಿ ಕೆ, ಕುಮಾರ ಪಾರ್ಕ್ ಟ್ರಸ್ಟ್(ರಿ)ನ ಸದಸ್ಯ ಕಾರ್ಯದರ್ಶಿ ರಾಜು ಚಂದ್ರಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.




























Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು