LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಮೌನವಾಗಿ ಅಹಂಕಾರ ಅಡಗಿ ಶಾಂತವಾಗುತ್ತದೆ ಮನಸ್ಸು'- ಕುಂಭಮೇಳದ ಕುರಿತು ಜಗ್ಗೇಶ್‌ ಮಾತು

ಬೆಂಗಳೂರು : ಮಹಾಕುಂಭಮೇಳದಲ್ಲಿ ನಟ ಜಗ್ಗೇಶ್ ಕೂಡ ಇದರಲ್ಲಿ ಪಾಲ್ಗೊಂಡಿದ್ದಾರೆ. ತಮ್ಮ ಅನುಭವದ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.

‘ಕಳೆದ ಬಾರಿ 1880ರಲ್ಲಿ ನಡೆದದ್ದು ಈ ಮಹಾಕುಂಭಮೇಳ. ನನ್ನ ತಾತನ ಜನನ ಆದದ್ದು 1896ರಲ್ಲಿ. ಅಂದರೆ ನಮ್ಮ ತಾತ ಹುಟ್ಟುವ 16ವರ್ಷದ ಹಿಂದೆ. ನಮ್ಮ ತಾತನಿಂದ ನನ್ನ ಮೊಮ್ಮಗ ಅರ್ಜುನ 5ನೇ ತಲೆಮಾರಿಗೆ ಬಂದಿದೆ. ಮುಂದಿನ ಬಾರಿ ಈ ಮಹಾಕುಂಭ ಬರೋದು 2170 ಇಸವಿಯಲ್ಲಿ. ಅಂದರೆ ನಮ್ಮ ಮುಂದಿನ 5 ತಲೆಮಾರಿನ ಬದುಕು ಇಲ್ಲವಾಗಿರುತ್ತದೆ.’

‘ನಾನು ನನ್ನದು ನನ್ನಹಣ ನನ್ನ ಮನೆ ನನ್ನ ಹೆಂಡತಿ ನನ್ನ ಮಕ್ಕಳು ನನ್ನ ಪರಿವಾರ ಎನ್ನುವ ಕಥೆ ಏನಾಗಿರುತ್ತದೆಯೋ ದೇವರೆ ಬಲ್ಲ. ಕಡೆಯಪಕ್ಷ ನಮ್ಮ ಚಿತ್ರಪಟವು ಗೋಡೆಯಿಂದ ಮರೆಯಾಗಿ ಅಟ್ಟ ಸೇರುತ್ತೆ, ಇಲ್ಲ ಕಸದ ಜೊತೆ ಲೀನ. ನಾವು ದುಡಿದದ್ದು ಮುಂದಿನವರು ಉಳಿಸಿಕೊಂಡಿದ್ದರೆ ಅಲ್ಪಸ್ವಲ್ಪ ಹರಟೆಯಲ್ಲಿ ನಮ್ಮ ಹೆಸರು ಬಂದುಹೋಗಬಹುದು.’

‘ಆದರೆ ಯಾರು ಹೋದರೂ ಒಬ್ಬರು ನೆನಪಲ್ಲಿ ಉಳಿದೇ ಇರುತ್ತಾರೆ ಅವರೇ ಶಾರದಾಸುತರು ಅಂದರೆ ಗಾಯಕರು ನಟರು ನಟಿಯರು ಸಂಗೀತ ವಿದ್ವಾಂಸರು ಹಾಗು ಲೇಖಕರು. ಅಲ್ಲಿಗೆ ಯಾವ ಪುರುಷಾರ್ಥಕ್ಕೆ ಮನುಷ್ಯರು ನಾವು ನಾವೇ ,ನಮ್ಮದೇ, ನಂದೇ, ನಾನಿಲ್ಲದೇ, ಎಂಬ ಅಜ್ಞಾನ ಬೇರೂರಿದೆ ಒಳಗೆ. ಈ ಮಹಾಕುಂಭಕ್ಕೆ ಆಧ್ಯಾತ್ಮಿಕ ಸಾಧನೆಗೆ ಹೋದವರಿಗೆ ನಾನು ಮೇಲೆ ಹೇಳಿದ್ದ ಎಲ್ಲಾ ಮಾತುಗಳು ಮಾನಸದಲ್ಲಿ ಮಜ್ಜನವಾಗಿ, ನಾನು ದೇಹವಲ್ಲ ಮುಂದೆ ಮಣ್ಣು ಎಂಬ ಅರಿವು ಮನದ ಆಳಕ್ಕೆ ಹೋಗಿ, ಮನನವಾಗಿ ಮೌನವಾಗಿ ಅಹಂಕಾರ ಅಡಗಿ ಶಾಂತವಾಗುತ್ತದೆ ಮನಸ್ಸು.’

‘ನಾನು ಹೋದೆ ನೋಡಿದೆ ಬಂದೆ ಎನ್ನುವವರಿಗೆ ಅವರ ಬದುಕಿನ ಮತ್ತೊಂದು ಪ್ರವಾಸ ಅನ್ನಿಸುತ್ತದೆ. ನಾನು ಭಾವುಕನಾದೆ ನನ್ನ ವಂಶದ ಎಲ್ಲಾ ಹಿರಿಯರ ನೆನೆದೆ ಮುಂದಿನ ಪೀಳಿಗೆಯ ಮಕ್ಕಳಿಗೆ ಶುಭಕೋರಿದೆ. ನನಗನ್ನಿಸಿದ್ದು ದೇವರ ಕೃಪೆಯಿಲ್ಲದೆ ನಮ್ಮ ಬದುಕಿನ ಆಟ ಯಾವುದೂ ನಡೆಯದು. ಇನ್ನೂ ಸಮಯವಿದೆ. ಹೋಗುವವರು ಹೋಗಿ ಬನ್ನಿ. ಮತ್ತೆ ನೋಡಲಾಗದು ಈ ಮಹಾಕುಂಭ. ಸರ್ವೇಜನಾಃಸುಖಿನೋಭವಂತು’
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು'ವಂದೇ ಭಾರತ್ ಮೇಲ್ದರ್ಜೆಗೆ ಕ್ರಮ; 1,300 ರೈಲು ನಿಲ್ದಾಣಗಳ ಪುನರ್ನಿರ್ಮಾಣ'- ಸಚಿವ ಅಶ್ವಿನಿ ವೈಷ್ಣವ್ಆರೋಗ್ಯ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಜ್ಯೂಸ್ಇಷ್ಟು ಕಡಿಮೆ ಬಟ್ಟೆ ಹಾಕಿದ್ರೆ ಅತ್ಯಾಚಾರ ಮಾಡ್ತೀನಿ: ಮಹಿಳೆಗೆ ಆಟೋ ಚಾಲಕನ ಬೆದರಿಕೆ!ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ವಿಧಿವಶಶಾಂತಿ ಮಾತುಕತೆ ವಿಫಲ: 'ನಾವು ಯುದ್ಧಕ್ಕೆ ಸಿದ್ಧ'- ಪಾಕ್‌ಗೆ ಅಫ್ಘಾನ್ ಖಡಕ್ ವಾರ್ನಿಂಗ್ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: 'ಉಸ್ತುವಾರಿ ವಿರುದ್ಧ ಕ್ರಮ'- ಪರಮೇಶ್ವರ್ ಕಿಡಿಹೆಲ್ಮೆಟ್ ಧರಿಸದೆ ಹೋದ ಸ್ಕೂಟರ್ ಸವಾರ: 20 ಲಕ್ಷ ದಂಡ – ರಶೀದಿ ನೋಡಿ ಸವಾರ ಶಾಕ್4ನೇ ಬಾರಿಗೆ ಯುಪಿಎಸ್‌ಸಿ ಬರೆದು 18ನೇ ರ‍್ಯಾಂಕ್ ಪಡೆದ ಐಎಎಸ್ ರವಿ ಕುಮಾರ್ ಸಿಹಾಗ್ಕಾಲ ಕಾಲಕ್ಕೆ ರಾಸುಗಳಿಗೆ ಲಸಿಕೆಯನ್ನು ಹಾಕಿಸಿ: ಜಿ.ಬಿ.ಶೇಖರ್