Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕಮರದಿರಲಿ..ಜಯರಾಮ್ ಕಂಡ ಕನಸು..!

ಜನ ಜೀವಾಳ ವಿಶೇಷ ಬೆಳಗಾವಿ :

ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿಯಾಗಿ ಹೆಸರುಗಳಿಸಿದ್ದ ಎನ್. ಜಯರಾಮ್ ತಮ್ಮ ಅವಧಿಯಲ್ಲಿ ಮಾಡಿದ್ದ ಹತ್ತು ಹಲವು ಕಾರ್ಯಗಳು ಜನಮಾನಸದಲ್ಲಿ ನೆಲೆಯೂರಿವೆ. ಆದರೆ, ಅವರು ಬೆಂಗಳೂರಿಗೆ ವರ್ಗಾವಣೆಗೊಂಡ ನಂತರ ಜಾರಿಗೊಳಿಸಿದ್ದ ಹಲವು ಯೋಜನೆಗಳು ನಿಂತೇ ಹೋಗಿರುವುದು ಮಾತ್ರ ದುರದೃಷ್ಟಕರ. ಅಂತಹ ಯೋಜನೆಗಳಲ್ಲಿ ಪ್ರತಿಭಾ ಪುರಸ್ಕಾರವೂ ಒಂದು.

ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಗಣನೀಯ ಅಂಕ ಪಡೆದು ಸಾಧನೆಗೈದ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಗೌರವಿಸಲು ಆಗ ಜಿಲ್ಲಾಧಿಕಾರಿಯಾಗಿದ್ದ ಎನ್. ಜಯರಾಮ್ ನಿರ್ಧರಿಸಿದ್ದರು. ಅವರಿಗಾಗಿ ಪ್ರತಿಭಾ ಪುರಸ್ಕಾರ ಹೆಸರಿನಲ್ಲಿ ಕಾರ್ಯಕ್ರಮ ಏರ್ಪಡಿಸಿ ಸತ್ಕರಿಸಿ ಪ್ರತಿಭೆಗಳಿಗೆ ಪುರಸ್ಕಾರ ನೀಡುವ ಪರಂಪರೆ ಬೆಳೆಸಿದ್ದರು. ಆದರೆ, ಇದೀಗ ಅವರು ಜಾರಿಗೊಳಿಸಿದ್ದ ಮಹತ್ವದ ಯೋಜನೆ ಬೆಳಗಾವಿ ಜಿಲ್ಲೆಯಲ್ಲಿ ನಿಂತೇ ಹೋಗಿದೆ.

ಜಯರಾಮ್ ಅವರು ನಾಲ್ಕು ವರ್ಷಗಳ ಕಾಲ ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿಯಾಗಿ ಜನಮಾನಸದಲ್ಲಿ ಇನ್ನಿಲ್ಲದ ಪ್ರೀತಿಗೆ ಪಾತ್ರರಾಗಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಕನ್ನಡ ಕಟ್ಟುವಲ್ಲಿ ತಮ್ಮದೇ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದ ಅವರು ಪ್ರತಿಭಾ ಪುರಸ್ಕಾರ, ಕರ್ನಾಟಕ ರಾಜ್ಯೋತ್ಸವ ಸೇರಿದಂತೆ ಗಡಿ ಜಿಲ್ಲೆಯ ಬೆಳವಣಿಗೆಗೆ ಪೂರಕವಾಗುವ ವಿವಿಧ ಕಾರ್ಯಕ್ರಮಗಳಿಗೆ ಬೆನ್ನೆಲುಬಾಗಿ ನಿಂತಿದ್ದರು. ಆದರೆ ಅವರು ಬೆಳಗಾವಿ ಜಿಲ್ಲೆಯಿಂದ ವರ್ಗಾವಣೆಗೊಂಡ ನಂತರ ಪುರದ ಪುಣ್ಯಂ ಪುರುಷರೂಪಿಯಿಂದ ಪೋಗುತಿದೆ ಎನ್ನುವಂತೆ ಕೆಲ ಯೋಜನೆಗಳು ಅವರ ಹಿಂದೆಯೇ ತೆರೆಮರೆಗೆ ಸರಿದಿರುವುದು ಕಳವಳಕಾರಿ ಎಂದು ಬೆಳಗಾವಿ ಬಗ್ಗೆ ಕಾಳಜಿ ಹೊಂದಿರುವ ಕೆಲ ಚಿಂತಕರು ಬೇಸರ ವ್ಯಕ್ತಪಡಿಸಿದ್ದಾರೆ.

ಏನಿದು ಕಾರ್ಯಕ್ರಮ ?: ಜಯರಾಮ್ ಬೆಳಗಾವಿ ಜಿಲ್ಲಾಧಿಕಾರಿಯಾಗಿದ್ದಾಗ ಪ್ರತಿಭೆಗಳನ್ನು ಉತ್ತೇಜಿಸಲು ಸಂಕಲ್ಪಿಸಿದ್ದರು. ಐಎಎಸ್, ಐಪಿಎಸ್, ಕೆಎಎಸ್ ಪಾಸಾದವರು ತಮ್ಮ ಪ್ರವೇಟ್ ಫಂಡ್ ಮೂಲಕ ಶೇಕಡಾ 90 ರಷ್ಟು ಅಂಕ ಪಡೆದ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುತ್ತಿದ್ದರು. ಜೊತೆಗೆ ಆಗ ತಾನೆ ಐಎಎಸ್, ಐಪಿಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರನ್ನು ಕರೆತಂದು ವಿದ್ಯಾರ್ಥಿಗಳಿಗೆ ಅವರ ಜೀವನ ಸಾಹಸಗಾಥೆಯನ್ನು ಪರಿಚಯಿಸಿ ವಿದ್ಯಾರ್ಥಿಗಳ ಭವಿಷ್ಯದ ಜೀವನಕ್ಕೆ ದಾರಿದೀಪವಾಗುತ್ತಿದ್ದರು. ಸರಕಾರದ ಯಾವುದೇ ನೆರವಿಲ್ಲದೆ ಈ ಪ್ರತಿಭಾ ಪ್ರೋತ್ಸಾಹ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿತ್ತು.

ಪ್ರತಿಭಾವಂತ ಮಕ್ಕಳನ್ನು ಪ್ರೋತ್ಸಾಹಿಸಬೇಕು ಮತ್ತು ಪ್ರೇರಣೆ ನೀಡಬೇಕು. ವಿಶೇಷವಾಗಿ ಹಿಂದುಳಿದ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳ ಸಲುವಾಗಿ ಆ ಅಧಿಕಾರಿ ವಿಶೇಷ ಯೋಜನೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯಗತಗೊಳಿಸಿದ್ದರು. ಆ ಯೋಜನೆ ಇಡೀ ರಾಜ್ಯಕ್ಕೆ ಮಾದರಿಯಂತಿದೆ.

ಜಯರಾಮ್ ಅವರು ತಮ್ಮ ಅವಧಿಯಲ್ಲಿ ಜಾರಿಗೊಳಿಸಿದ್ದ ಯೋಜನೆಗಳನ್ನು ಮತ್ತೆ ಕಾರ್ಯರೂಪಕ್ಕೆ ತರುವಲ್ಲಿ ಈಗಿನ ಅಧಿಕಾರಿ ವರ್ಗ ಮುಂದಾಗಲಿ ಎಂದು ಹಲವರು ಸಲಹೆ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ