LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಪನಗರ ರೈಲು: ಜರ್ಮನಿಯ ಬ್ಯಾಂಕ್‌ ಜತೆ ಕೆ-ರೈಡ್‌ ಒಪ್ಪಂದ

ಬೆಂಗಳೂರು: ಮಹತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲು ಯೋಜನೆಯ ಸುಗಮ ಅನುಷ್ಠಾನದ ಉದ್ದೇಶದಿಂದ ಜರ್ಮನಿಯ ಕೆಎಫ್‌ಡಬ್ಲ್ಯು ಡೆವಲಪ್‌ಮೆಂಟ್‌ ಬ್ಯಾಂಕ್‌ ಜೊತೆ ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತವು (ಕೆ-ರೈಡ್)‌ ಒಪ್ಪಂದ ಮಾಡಿಕೊಂಡಿದೆ. ಇದರಿಂದಾಗಿ, ಯೋಜನೆಗೆ ₹4,500 ಕೋಟಿ (500 ಮಿಲಿಯನ್‌ ಯೂರೊ) ಸಾಲ ಮತ್ತು ₹45 ಕೋಟಿ (4.5 ಮಿಲಿಯನ್‌ ಯೂರೋ) ಅನುದಾನ ಸಿಗಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ʻದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎರಡೂ ಕಡೆಯ ಉನ್ನತ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಅಂಕಿತ ಹಾಕಿದ್ದಾರೆ. ಇದರಿಂದಾಗಿ, ಬೆಂಗಳೂರು ಉಪನಗರ ರೈಲು ಯೋಜನೆಯ ತ್ವರಿತ ಅನುಷ್ಠಾನಕ್ಕೆ ಅನುಕೂಲವಾಗಲಿದೆʼ ಎಂದಿದ್ದಾರೆ.

₹4,500 ಕೋಟಿ ಸಾಲ, ₹45 ಕೋಟಿ ಅನುದಾನದ ನೆರವು ಲಭ್ಯ

ಬೆಂಗಳೂರು ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಗುರಿಯನ್ನುಳ್ಳ ಸಬರ್ಬನ್‌ ರೈಲು ಯೋಜನೆಗೆ ಒಟ್ಟು 15,767 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ಈ ಪೈಕಿ ಹಲವು ಹಣಕಾಸು ಸಂಸ್ಥೆಗಳಿಂದ 7,438 ಕೋಟಿ ರೂ.ಗಳನ್ನು ಸಾಲವಾಗಿ ತೆಗೆದುಕೊಳ್ಳಲಾಗುತ್ತಿದೆ. ಯೋಜನೆಯು ಕೆ-ರೈಡ್‌ ಮತ್ತು ಕೇಂದ್ರ ಸರಕಾರದ ರೈಲ್ವೆ ಸಚಿವಾಲಯದ ಮೂಲಕ ಜಾರಿಗೊಳಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಒಪ್ಪಂದಕ್ಕೆ ಅಂಕಿತ ಹಾಕಲಾದ ಕಾರ್ಯಕ್ರಮದಲ್ಲಿ ಕೆಎಫ್‌ಡಬ್ಲ್ಯು ಡೆವಲಪ್‌ಮೆಂಟ್‌ ಬ್ಯಾಂಕ್‌ನ ಅಧಿಕಾರಿಗಳಾದ ಫಿಲಿಫ್‌ ವೈಶ್‌, ಉಪನಿರ್ದೇಶಕಿ ರುಕ್ಮಿಣಿ ಪಾರ್ಥಸಾರಥಿ, ಸ್ವಾತಿ ಖನ್ನಾ, ಕೇಂದ್ರ ಆರ್ಥಿಕ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮಾನಿಶಾ ಸಿನ್ಹಾ ಉಪಸ್ಥಿತರಿದ್ದರು.

ರಾಜ್ಯ ಸರ್ಕಾರದ ಪರವಾಗಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಶ್ರೀಧರಮೂರ್ತಿ ಇದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿ.ಎಂ.ಸಿದ್ದರಾಮಯ್ಯನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಬಿಜೆಪಿಗೆ ಸಿಎಂ ತರುಗೇಟುKSRTC ಗೆ ಪ್ರತಿಷ್ಠಿತ ' world HRd ಕಾಂಗ್ರೆಸ್ ಪ್ರಶಸ್ತಿ-2026' ಗರಿಹಿಂದಿ ಭಾಷೆ ವಿಚಾರದಲ್ಲಿ ಬಿಜೆಪಿಯವರಿಂದ ಕಮೆಂಟಿಗೆ ವಿರೋಧಸುಧರ್ಮ ಸಾಂಸ್ಕೃತಿಕ ಸಂಘ ದಿಂದ ಮಹಿಳಾ ದಿನಾಚರಣೆಜೈನರಲ್ಲಿ ಶಿಕ್ಷಣದ ಕೊರತೆ ಹೆಚ್ಚಾಗಿದೆ : ಹಂಪಾ ನಾಗರಾಜಯ್ಯ ಬೇಸರವಿದ್ಯಾರ್ಥಿಗಳು SPRINTFEST 2026 ನಲ್ಲಿ ₹40 ಲಕ್ಷ ಸಂಗ್ರಹಿಸುವ ಗುರಿಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್ ನಿಂದ 8ನೇ ವರ್ಷದ ವಾರ್ಷಿಕೋತ್ಸವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಜಿ ಪ್ರಧಾನಿ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ-2026ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮ