LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗರುಡ ಗ್ಯಾಂಗ್‌ನ ಸದಸ್ಯ ಕಬೀರ್ ಹುಸೇನ್ ಗೂಂಡಾ ಕಾಯ್ದೆಯಡಿ ಬಂಧನ


ಉಡುಪಿ: ಹಲವಾರು ಕ್ರಿಮಿನಲ್‌ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪದ ಮೇಲೆ ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್ ಯಾನೆ ಕಬೀರ್ ಹುಸೇನ್(46) ಎಂಬಾತನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರು ಆದೇಶ ಹೊರಡಿಸಿದ್ದು, ಅದರಂತೆ ಆತನನ್ನು ಬಂಧಿಸಿ ಮೈಸೂರು ಸೆಂಟ್ರಲ್‌ ಜೈಲಿಗೆ ಕಳುಹಿಸಲಾಗಿದೆ.


ಈತನ ಮೇಲೆ ಉಡುಪಿ ಜಿಲ್ಲೆಯ ಕಾರ್ಕಳ ನಗರ, ಹಿರಿಯಡ್ಕ, ಪಡುಬಿದ್ರಿ, ಮಣಿಪಾಲ, ಶಿರ್ವ, ಕಾಪು ಠಾಣೆಗಳ ವ್ಯಾಪ್ತಿಯಲ್ಲಿ 2005 ರಿಂದೀಚೆಗೆ ನಡೆದ ಹಲವಾರು ಕೊಲೆ, ಕೊಲೆ ಯತ್ನ, ದರೋಡೆ, ಸುಲಿಗೆ, ಕಳ್ಳತನ, ಜಾನುವಾರು ಕಳವು, ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮತ್ತಿತರ 17 ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಪ್ರಕರಣಗಳಿವೆ. ಉಡುಪಿ ಜಿಲ್ಲೆಯಲ್ಲಿ ಮಾತ್ರವಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮತ್ತು ಕೊಪ್ಪ, ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು, ಮಂಗಳೂರು ನಗರ ವ್ಯಾಪ್ತಿಯ ಸುರತ್ಕಲ್ ಠಾಣೆಯ ಪ್ರಕರಣಗಳಲ್ಲೂ ಭಾಗಿಯಾಗಿರುತ್ತಾನೆ. ಈತನು ಗರುಡ ಗ್ಯಾಂಗನ ಸಕ್ರಿಯ ಸದಸ್ಯನಾಗಿರುತ್ತಾನೆ. ಈತನ ಮೇಲಿರುವ ಕೇಸುಗಳ ಪೈಕಿ ಈಗಾಗಲೇ ಎರಡು ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು, ಸಜೆ ಹೊಂದಿದ್ದು, 8 ಪ್ರಕರಣಗಳಲ್ಲಿ ಖುಲಾಸೆ ಹೊಂದಿರುತ್ತಾನೆ. ಮೂರು ಪ್ರಕರಣಗಳಲ್ಲಿ ರಾಜಿ ಮಾಡಿಕೊಂಡಿದ್ದು, ಎರಡು ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿವೆ. ಉಳಿದ ಎರಡು ಪ್ರಕರಣಗಳು ಪೊಲೀಸ್ ತನಿಖೆಯಲ್ಲಿವೆ ಎಂದು ಪೊಲೀಸ್‌ ಪ್ರಕಟನೆ ತಿಳಿಸಿದೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026