Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟ

 

ಬೆಂಗಳೂರು:
ಕನ್ನಡ ಸಾಹಿತ್ಯ ಪರಿಷತ್ತು ಕೊಡ ಮಾಡುವ ೨೦೨೨ ನೇ ಸಾಲಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟಿಸಲಾಗಿದೆ.
ರಾಜ್ಯದ ಗಡಿಜಿಲ್ಲೆ ಬೆಳಗಾವಿಯ ಅಥಣಿಯ ಶ್ರೀ ಪ್ರಭು ಚೆನ್ನಬಸವ ಸ್ವಾಮೀಜಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶಿವಾನಂದ ಕಳವೆ ಹಾಗೂ ಹೆಲನ್ ಮೈಸೂರು ಕೊಪ್ಪಳದ ಕೆ. ಇಮಾಮಸಾಬ ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ಆವರು ಪರಿಷತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಿಗೆ ನೀಡುವ ಮಾಸಿಕ ಗೌರವ ಸಂಭಾವನೆಯನ್ನು ಪರಿಷತ್ತಿನಲ್ಲಿಯೇ ದತ್ತಿ ರೂಪದಲ್ಲಿ ಇಡಲಾಗಿದೆ.

ದತ್ತಿ ದಾನಿಗಳ ಆಶಯದಂತೆ ಕನ್ನಡ ಪರ ಹೋರಾಟ ಮಾಡುತ್ತ ನಾಡು ನುಡಿಗೆ ಸೇವೆ ಸಲ್ಲಿಸಿದವರು, ನೆಲ, ಜಲ ಕುರಿತು ಕೃತಿ ರಚಿಸಿದವರು ಹಾಗೂ ಕನ್ನಡ ರಂಗಭೂಮಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಈ ಮೂವರು ಗಣ್ಯರಿಗೆ ಕನ್ನಡ ಕಾಯಕ ದತ್ತಿ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

ಪ್ರಶಸ್ತಿಯು ತಲಾ ೧೦,೦೦೦ (ಹತ್ತು ಸಾವಿರ) ರೂ. ನಗದು, ಫಲ ತಾಂಬೂಲ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠದ ಶ್ರೀಗಳಾದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಅವರು ಗಡಿನಾಡಿನಲ್ಲಿ ಕನ್ನಡ ಉಳಿಸಿ ಬೆಳೆಸುವುದಕ್ಕಾಗಿ ಸಮಾಜಸೇವಾ ದೀಕ್ಷೆಯೊಂದಿಗೆ ಸಾಹಿತ್ಯ ರಚನೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದು. 'ಅಥಣೀಶ' ಎಂಬ ಕಾವ್ಯನಾಮದಲ್ಲಿ ಕೃತಿಗಳನ್ನು ರಚಿಸಿ ಪರಿಚಿತರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶಿವಾನಂದ ಕಳವೆ ಅವರು ಪರಿಸರ ಸಂರಕ್ಷಣೆ ಕುರಿತು , ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಕೇಂದ್ರದಲ್ಲಿ ವಿವಿಧ ಶಿಬಿರಗಳನ್ನು ಏರ್ಪಡಿಸುವುದರ ಜೊತೆ ಸಾಹಿತ್ಯ ಕೃಷಿಯಲ್ಲಿಯೂ ಗುರುತಿಸಿಕೊಂಡಿದ್ದಾರೆ. ಕನ್ನಡ ರಂಗಭೂಮಿಯಲ್ಲಿ ಕಳೆದ ೫ ದಶಕಗಳಿಂದ ನಿರಂತರ ತೊಡಗಿಸಿಕೊಂಡ ಹೆಲನ್ ಮೈಸೂರು ಅವರು ಆಧುನಿಕ ರಂಗಭೂಮಿಯಲ್ಲಿ ಕನ್ನಡವನ್ನು ಸಮರ್ಪಕವಾಗಿ ಬಳಸಿ ಕನ್ನಡದ ಕೈಂಕರ್ಯದಲ್ಲಿ ತೊಡಗಿಕೊಂಡಿದ್ದಾರೆ. ೨೦೨೨ನೇ ಸಾಲಿನ ʻಕನ್ನಡ ಕಾಯಕ ದತ್ತಿʼ ಪ್ರಶಸ್ತಿಗಾಗಿ ಅರ್ಹರನ್ನು ಆಯ್ಕೆ ಮಾಡಲಾಗಿದೆ ಎಂದು ನಾಡೋಜ ಡಾ. ಮಹೇಶ ಜೋಶಿ ಹೇಳಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನೇ. ಭ ರಾಮಲಿಂಗಶೆಟ್ಟಿ, ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷ ಡಾ. ಬಿ. ಎಂ. ಪಟೇಲ್‌ಪಾಂಡು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ