Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ತರಾತುರಿಯಲ್ಲಿ ರಾಜ್ಯೋತ್ಸವದ ರಸಮಂಜರಿ : ಕಿಡಿ ಕಾರಿದ ಕನ್ನಡ ಸಂಘಟನೆಗಳು

ಬೆಳಗಾವಿ :

ರಾಜ್ಯ ಪ್ರವಾಸೋದ್ಯಮ ಇಲಾಖೆಯು ಕಳೆದ ವರ್ಷದ ರಾಜ್ಯೋತ್ಸವ ಸಂದರ್ಭದಲ್ಲಿ ಬಿಡುಗಡೆ ಮಾಡಿದ 50 ಲಕ್ಷ ರೂ. ಅನುದಾನದಲ್ಲಿ ಮಂಗಳವಾರ ತರಾತುರಿಯಲ್ಲಿ ರಾಜ್ಯೋತ್ಸವದ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಿರುವ ಬೆಳಗಾವಿ ಜಿಲ್ಲಾಧಿಕಾರಿಗಳ ಸರ್ವಾಧಿಕಾರಿ ಧೋರಣೆಯ ವಿರುದ್ಧ ಬೆಳಗಾವಿ ಅನೇಕ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ, ಅಸಮಾಧಾನ ವ್ಯಕ್ತಪಡಿಸಿವೆ.

ಸೋಮವಾರ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ಸೇರಿದ್ದ ಸಂಘಟನೆಗಳು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದವು.

ಬೆಳಗಾವಿ ಜನತೆಗಾಗಲಿ, ಮಾಧ್ಯಮಕ್ಕಾಗಲಿ
ರಸಮಂಜರಿ ಕಾರ್ಯಕ್ರಮದ ಬಗ್ಗೆ ಕಿಂಚಿತ್ತೂ
ಮಾಹಿತಿಯಿಲ್ಲ. ಕಳೆದ ಅಕ್ಟೊಬರ್ ನಲ್ಲಿ ಬೆಳಗಾವಿ ಕನ್ನಡ ಸಂಘಟನೆಗಳು ಬೆಂಗಳೂರಿನಲ್ಲಿ ಗಡಿ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಅವರೊಂದಿಗೆ ಸಭೆ ನಡೆಸಿದ ಪರಿಣಾಮವಾಗಿ 50 ಲ. ರೂ. ಅನುದಾನ ಬಿಡುಗಡೆಯಾಗಿತ್ತು. ಈ ಅನುದಾನದಲ್ಲಿ ಬೆಳಗಾವಿ ಹಬ್ಬ ಕಾರ್ಯಕ್ರಮ ನಡೆಸಿ ಸಚಿವರಾದ ಎಚ್. ಕೆ. ಪಾಟೀಲ, ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ, ಹಿರಿಯ ಸಾಹಿತಿಗಳು ಮತ್ತು ಬೆಳಗಾವಿಯಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ ನಿವೃತ್ತ ಅಧಿಕಾರಿಗಳನ್ನು ಸನ್ಮಾನಿಸಲು ಕನ್ನಡ ಸಂಘಟನೆಗಳು ತೀರ್ಮಾನಿಸಿದ್ದವು. ಆದರೆ ಜಿಲ್ಲಾಧಿಕಾರಿಗಳು ಕನ್ನಡ
ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ
ತರಾತುರಿಯಿಂದ ರಸಮಂಜರಿ ಕಾರ್ಯಕ್ರಮವನ್ನು
ಆಯೋಜಿಸಿರುವದು ಖಂಡನೀಯವೆಂದು ಸಭೆಯಲ್ಲಿ ಮಾತನಾಡಿದ ಮುಖಂಡರು, ಸೋಮವಾರ ಮುಂಜಾನೆಯವರೆಗೂ
ಮಾಧ್ಯಮಗಳಿಗೂ ಈ ಕಾರ್ಯಕ್ರಮದ ಬಗ್ಗೆ
ಗೊತ್ತಿರಲಿಲ್ಲ ಎಂದು ಅಚ್ಚರಿ ವ್ಯಕ್ತಪಡಿಸಿದರು.

50 ಲ. ರೂ. ಆನುದಾನದ ದುಂದುವೆಚ್ಚ ಮಾಡುವ ಉದ್ದೇಶದಿಂದಲೇ ಜಿಲ್ಲಾಧಿಕಾರಿಗಳು ಕನ್ನಡ ಸಂಘಟನೆಗಳನ್ನು ದೂರವಿಟ್ಟು ಕಾರ್ಯಕ್ರಮ ನಡೆಸುತ್ತಿರುವದು ಸ್ಪಷ್ಟವಾಗಿದೆ ಎಂದು ಕನ್ನಡ
ಮುಖಂಡರು ಆರೋಪಿಸಿದರು.

ಕಾರ್ಯಕ್ರಮಕ್ಕೆ ಬೆಳಗಾವಿಗೆ ಬರಲು ತಮಗೆ ಸಾಧ್ಯವಾಗುವದಿಲ್ಲ ಎಂದು ಗಡಿ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಅವರು ತಮಗೆ ತಿಳಿಸಿದ್ದಾಗಿ
ಅಶೋಕ ಚಂದರಗಿ ಸಭೆಗೆ ತಿಳಿಸಿದರು.

ಜಿಲ್ಲಾಧಿಕಾರಿಗಳ ನಡೆಯ ವಿರುದ್ಧ ಪ್ರತಿಭಟಿಸಿ ಕಾರ್ಯಕ್ರಮವನ್ನು ಬಹಿಷ್ಕರಿಸಲು ಸಭೆಯು
ನಿರ್ಧರಿಸಿತು.

ಕನ್ನಡ ಹೋರಾಟಗಾರರಾದ ಮಹಾದೇವ ತಳವಾರ, ಅಶೋಕ ಚಂದರಗಿ, ನಗರ ಸೇವಕ ರಮೇಶ ಸೊಂಟಕ್ಕಿ, ಶ್ರೀನಿವಾಸ ತಾಳೂಕರ, ವಾಜೀದ ಹಿರೇಕೋಡಿ,
ಬಲರಾಮ ಮಾಸೇನಟ್ಟಿ, ಮೈನೋದ್ದೀನ್ ಮಕಾನದಾರ, ದೇವೇಂದ್ರ ತಳವಾರ, ಮಹೇಶ ಶೀಗಿಹಳ್ಳಿ, ಶಿವು ದೇವುರ,
ಗೌಸ್ ಸನದಿ, ಸಂತೋಷ ತಳ್ಳಿಮನಿ, ನಾಗೇಶ ಕೊಪ್ಪದ, ಬಾಳೇಶ ಗುಡಗನಟ್ಟಿ ಹಾಗೂ ಪ್ರಕಾಶ ಮೂಕನವರ
ಮುಂತಾದವರು ಮಾತನಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ