LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಸಿ ನೆಡುವ ಮೂಲಕ ಹುಟ್ಟು ಹಬ್ಬ ಆಚರಿಸಿಕೊಂಡ ಕರವೇ ಜಿಲ್ಲಾಧ್ಯಕ್ಷ ಕುರಟ್ಟಿ ರಾಜಣ್ಣ

ಬಳ್ಳಾರಿ : ಜೂ 06 ಹುಟ್ಟು ಹಬ್ಬದ ದಿನದಂದು ದುಂದುವೆಚ್ಚ ಮಾಡಿ ಹಣವನ್ನು ಪೋಲು ಮಾಡಬೇಡಬಾರದು, ವಿಶೇಷ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ (ಶಿವರಾಮೇಗೌಡ ಬಣ) ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾಧ್ಯಕ್ಷ ಕುರಟ್ಟಿ ರಾಜಣ್ಣ ತಿಳಿಸಿದರು. 

 ಸಸಿ ನೆಡುವು ಮೂಲಕ ತಮ್ಮ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡ ರಾಜಣ್ಣ ವಿಶ್ವ ಪರಿಸರ ದಿನಾಚರಣೆಯನ್ನು ಸಹ ಆಚರಿಸಿ, ಮಾತನಾಡಿ, ಪಟಾಕಿ, ಬ್ಯಾನರ್ ಎಂದು ದುಂಧುವೆಚ್ಚ ಮಾಡದೆ ಸಾಮಾಜಕ್ಕೆ ಉಪಯೋಗವಾಗುವಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಇದರಿಂದ ಸಮಾಜದಲ್ಲಿ ಜವಬ್ಧಾರಿಯತ ನಾಗರಿಕರಾಗಿ ಮಾದರಿಯಾಗಬೇಕೆಂದು ವೇದಿಕೆಯ ಕಾರ್ಯಕರ್ತರಿಗೆ ಕರೆ ನೀಡಿದರು. 

 ಈ ಸಂದರ್ಭದಲ್ಲಿ ಕರವೇ ಪದಾಧಿಕಾರಿ ಚಂದ್ರಣ್ಣ ಮಾತನಾಡಿ, ಸದಾ ಕಾಯಕವೇ ಕೈಲಾಸ ಎಂದು ನಂಬಿಕೊಂಡು ತನ್ನ ಸ್ವಂತ ಕಾಲಮೇಲೆ ನಿಂತು ಇನ್ನು ನೂರಾರು ಜನಕ್ಕೆ ಕೆಲಸ ಕೊಡಬೇಕೆಂಬ ದೊಡ್ಡ ಗುರಿಯನ್ನಿಟ್ಟುಕೊಂಡ ಅವರ ಗುರಿ ಈಡೇರಲಿ ಭವಿಷ್ಯದಲ್ಲಿ ಇನ್ನು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಕೆ, ಜೀವನದಲ್ಲಿ ಏಳ್ಗೆಯನ್ನು ಕಂಡು ಬೇರೆಯವರ ದಾರಿಗೆ ಹೂವಾಗಲಿ ಎಂಬುದು ನನ್ನ ಆಸೆ ಎಂದು ರಾಜಣ್ಣಗೆ ದೇವರು ಇನ್ನಷ್ಟು ಆಯುಷ್ಯ, ಐಶ್ಚರ್ಯ ಮತ್ತು ಆರೋಗ್ಯವನ್ನು ಕರುಣಿಸಿ ಇನ್ನಷ್ಟು ಕಾಲ ಸಮಾಜಸೇವೆ ಮಾಡುವ ಅವಕಾಶವನ್ನು ಮಾಡಿಕೊಡಲಿ ಎಂದು ದೇರವಲ್ಲಿ ಪ್ರಾರ್ಥಿಸಿ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿದರು. 

 ವೇದಿಕೆಯ ಮತ್ತೊಬ್ಬ ಪದಾಧಿಕಾರಿ ಕಟ್ಟಿಗೆ ಸೂರಿ ಮಾತನಾಡಿ, ನನ್ನ ಏಳು ಬೀಳುಗಳಲ್ಲಿ ಜೊತೆಯಾದವರು ಹಲವರು ಅವರಲ್ಲಿ ರಾಜಣ್ಣನು ಸಹ ವಿಶೇಷ, ಗೆಲುವಿನಲ್ಲಿ ಸಂತಸಗೊಂಡು ತಪ್ಪಿ ನಡೆದಾಗ ಕಟುವಾಗಿ ಖಂಡಿಸಿ ಹತಾಶನಾದಾಗ ಜೊತೆಗಿದ್ದು ಧೈರ್ಯ ಹೇಳಿ ಸಹಾಯ ಮಾಡಿದ ಗೆಳೆಯ ರಾಜಣ್ಣನಿಗೆ ಹುಟ್ಟು ಹಬ್ಬದ ಶುಭಾಷಯಗಳು ಎಂದರು. 

 ಕುರುಗೋಡು ತಾಲೂಕು ಅಧ್ಯಕ್ಷ ಮೃತ್ಯುಂಜಯ ಮಾತನಾಡಿ, ರವಿಯ ಕಿರಣಗಳು ರಾಜನಂತೆ ಬಂದು ಪ್ರಕಾಶತೆಯನ್ನು ಸೂಚಿಸುವಂತೆ ಮುಂಜಾನೆಯ ಶುಭನುಡಿಗಳಿಗೆ ಸಾಕ್ಷಿಯಾಗಿ ಅದರೊಂದಿಗೆ ಕವಿತೆಗಳ ಸಾಲುಗಳು ಜೊತೆಯಾಗಿ ಶುಭಸಂಜೆಯ ಬರಹಗಳ ಸ್ವಾದಕ್ಕೆ ಆಗೊಮ್ಮೆ ಈಗೊಮ್ಮೆ ಕಚಗುಳಿ ಇಡುವ ನಗೆ ಬರಹಕ್ಕೆ ಶುಭರಾತ್ರಿಯಲ್ಲಿ ಸಾಹಿತ್ಯದ ಗೊಂಚಲು ಮೇಳೈಸುತ್ತಿರಲು ಬದುಕಿನ ವಾಸ್ತವತೆ ಮತ್ತು ಅನುಭವಗಳನ್ನು ಚಿಕ್ಕದಾಗಿ ಚೊಕ್ಕವಾಗಿ ಅರ್ಥಪೂರ್ಣವಾಗಿ ಬರೆಯುತ್ತಿರಲು ಪ್ರೀತಿಯ ರಾಜಣ್ಣನಿಗೆ ಜನ್ಮದಿನದ ಸಂದರ್ಭವು ಇಂದು ಜೊತೆಗೂಡಿದೆ ಎಂದು ಹಾರೈಸಿದರು. 

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಹನುಮಂತಪ್ಪ, ಗುಡಿಗಂಟಿ ಹನುಮಂತ ಮತ್ತು ಜಿಲ್ಲೆಯ ವಿವಿಧ ತಾಲೂಕಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಆಗಮಿಸಿ ಶುಭಕೋರಿದರು. ನೂರಾರು ಕಾರ್ಯಕರ್ತರು ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು