LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಡಿ.ಕೆ ಶಿವಕುಮಾರ್





ಮಂಡ್ಯ.ಜು.22 ರೈತರ ಜೀವನಾಡಿಯಾಗಿರುವ ಕಾವೇರಿ ತಾಯಿಗೆ ಪುಣ್ಯ ಕ್ಷೇತ್ರ ವಾರಣಾಸಿಯಲ್ಲಿ ಮಾಡುವ ಗಂಗಾರತಿ ಮಾದರಿಯ ರೀತಿ ಕಾವೇರಿ ಆರತಿ ಮಾಡಲು ಚಿಂತಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕೆ.ಆರ್.ಎಸ್ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಡಿಸಿಎಂ, ಗಂಗಾರತಿ ಮಾದರಿಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಹಾಗೂ ಕಾವೇರಿ ನಿಗಮದಿಂದ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.

ಉತ್ತರ ಭಾರತದಲ್ಲಿ ಗಂಗಾರತಿ ಬಗ್ಗೆ ಅಧ್ಯಯನ ಮಾಡಲು 25 ಜನರ ಸಮಿತಿ ರಚನೆ ಮಾಡ್ತೇವೆ. ಮಂಡ್ಯ, ಮೈಸೂರು, ಕೊಡಗು ಶಾಸಕರನ್ನು ಒಳಗೊಂಡ ಸಮಿತಿ ಮಾಡಲಾಗುತ್ತದೆ. ಈ ಸಮಿತಿ ವರದಿ ನೀಡಿದ ನಂತರ ಕಾವೇರಿ ಆರತಿ ನಡೆಸುತ್ತೇವೆ. ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಸೇರಿಕೊಂಡು ಕಾರ್ಯಕ್ರಮ ಮಾಡುತ್ತಾರೆ ಎಂದು ಡಿಕೆ ಶಿವಕುಮಾರ್​ ತಿಳಿಸಿದ್ದಾರೆ.


ಇನ್ನು, ಈ ಬಾರಿ ಉತ್ತಮ ಮಳೆಯಾಗುತ್ತಿದೆ. ವರುಣನ ಕೃಪೆ, ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಕಾವೇರಿಗೆ ಬಾಗಿನ ಅರ್ಪಿಸುವ ಕಾಲಸನ್ನಿಹಿತವಾಗಿದೆ. ಕಳೆದ ವರ್ಷ ಕಷ್ಟದಲ್ಲಿ ಇದ್ದೆವು. ಆದರೂ ರೈತರನ್ನು ಕಾಪಾಡಿದ್ದೇವೆ. ಕಳೆದ ವರ್ಷ 200 ತಾಲೂಕುಗಳಲ್ಲಿ ಬರಗಾಲವಿತ್ತು. ಕಾವೇರಿ ಪ್ರಾಧಿಕಾರ ಆದೇಶದ ಪ್ರಕಾರ 40 ಟಿಎಂಸಿ ಬಿಡಬೇಕಿತ್ತು. ಆದರೆ 20 ಟಿಎಂಸಿ ಬಿಡಲು ಹೇಳಿತ್ತು. ಅಷ್ಟನ್ನೂ ನಾವು ಬಿಡಲಿಲ್ಲ. ಕೆಲವರು ನೀರು ಬಿಟ್ಟಿದ್ದೇವೆ ಎಂದು ವಾದ ಮಾಡಿದ್ದಾರೆ. ನಾವು ಎಲ್ಲರನ್ನು ಕರೆದು ಚರ್ಚೆ ಮಾಡಿದ್ದೇವೆ. ಆನಂತರ ನೀರು ಬಿಟ್ಟಿದ್ದೇವೆ. 30 ಟಿಎಂಸಿ ನೀರು ತಮಿಳುನಾಡಿಗೆ ತಲುಪಿಸಿದ್ದೇವೆ. ಇನ್ನು ಹತ್ತು ಟಿಎಂಸಿ ನೀರು ಬಿಡಬೇಕು. ಈ ವರ್ಷದ ಕೋಟಾ ಮುಗಿಯುತ್ತದೆ. 50 ಸಾವಿರ ಕ್ಯೂಸೆಕ್ ನೀರು ಹೋಗುತ್ತಿದೆ. ಆದೇಶವನ್ನು ಪಾಲನೆ ಮಾಡಿದ್ದೇವೆ ಎಂದು ಅವರು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು