LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡಕ್ಕೆ ಹೋರಾಡಿದವರ ನೆನಪು ಮಾಡಿಕೊಂಡು ಕನ್ನಡಕ್ಕೆ ಪ್ರೋತ್ಸಾಹವೆಂದ ಕೆ.ಬಿ.ಕೊಟ್ರೇಶ್

ದಾವಣಗೆರೆ : ನವೆಂಬರ್ ಒಂದು ಅಂದ್ರೆ ಸಾಕು ಎಲ್ಲರೂ ಕೂಡ ಕನ್ನಡ ಬಾವುಟ, ರಾಷ್ಟ್ರಧ್ವಜವನ್ನು ಮುಗಿಲುತ್ತೇರಕ್ಕೆ ಧ್ವಜಾರೋಹಣ ಮಾಡುವುದನ್ನು ಎಲ್ಲರೂ ನೋಡಿದ್ದೇವೆ..ಆದರೆ ಕನ್ನಡಕ್ಕಾಗಿ ಹೋರಾಡಿ ಮಡಿದವರನ್ನು ಯಾರು ನೆನಸಿಕೊಳ್ಳುವುದಿಲ್ಲ.ಆದ್ರೆ ಇಲ್ಲೊಬ್ಬರು ನಾಡು, ನುಡಿ ರಕ್ಷಣೆಗಾಗಿ ಬಲಿದಾನ ನೀಡಿದವರನ್ನು ಮೇಣದ ಬತ್ತಿ ಹಚ್ಚುವ ಮೂಲಕ ಅವರನ್ನು ನೆನೆದರು.

ನಗರದ ಎಕೆ ಫೌಂಡೇಶನ್ ಅಧ್ಯಕ್ಷ, ಲೋಕಸಭಾ ಬಿಜೆಪಿ ಟಿಕೆಟ್ ಆಕಾಂಕ್ಷಿ ಕೆ.ಬಿ.ಕೊಟ್ರೇಶ್ ಹಾಗೂ ಕನ್ನಡ ಪರ ಸಂಘಟನೆಗಳು ಜಯದೇವ ವೃತ್ತದಲ್ಲಿ ಮೇಣದ ಬತ್ತಿ ಹಚ್ಚುವ ಮೂಲಕ ಕನ್ನಡಕ್ಕಾಗಿ ಮಡಿದವರ ಆತ್ಮಕ್ಕೆ ಶಾಂತಿ ಕೋರಿದರು.

ನಂತರ ಮಾತನಾಡಿದ ಎ.ಕೆ.ಫೌಂಡೇಷನ್ ಅಧ್ಯಕ್ಷ ಕೆ.ಬಿ.ಕೊಟ್ರೇಶ್, ಕನ್ನಡಿಗರಿಗೆ ಸುಮ್ಮನೆ ಸ್ವಾತಂತ್ರ್ಯ ಸಿಕ್ಕಿಲ್ಲ, ಇದರ ಹಿಂದೆ ಸಾಕಷ್ಟು ಜನರ ಶ್ರಮವಿದೆ..ಕನ್ನಡ ಭಾಷೆ ಉಳಿವಿಗಾಗಿ ಗೋಕಾಕ್ ಚಳವಳಿ, ನಾಡು, ನುಡಿಗಾಗಿ ತ್ಯಾಗ, ಬಲಿದಾನ ನೀಡಿದ ಅನೇಕ ರಾಜ ಮಹಾರಾಜರನ್ನು ನೆನಸಿಕೊಳ್ಳಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದವರ ರಾಜ ಮಹಾರಾಜರನ್ನು ಈಗಲೂ ನೆನಸಿಕೊಳ್ಳಬೇಕು. ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಕೃಷ್ಣದೇವರಾಯ, ಅನಕೃ, ಕುವೆಂಪು, ಬೇಂದ್ರೆ, ನಾಲ್ವಡಿ ಕೃಷ್ಣರಾಜ್ ಒಡೆಯರ್ ಕನ್ನಡಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದು ಅವರನ್ನು ನೆನೆಯುವುದಕ್ಕಾಗಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.

[video width="640" height="368" mp4="https://beestimes.com/wp-content/uploads/2023/11/VID-20231103-WA0022.mp4"][/video]

ಕನ್ನಡಿಗರ ವಿರುದ್ದ ಪರ ಭಾಷಿಗರು ಹೋರಾಟ ನಡೆಸಿದಾಗ ಕನ್ನಡ ಪರ ಸಂಘಟನೆಗಳು ವಿಭಿನ್ನ ಹೋರಾಟದಲ್ಲಿ ಧುಮುಕಿವೆ..ಇನ್ನೂ ನಾಡು, ನುಡಿಗಾಗಿ ಸೇವೆ ಸಲ್ಲಿಸಲು ಸದಾ ಸಿದ್ದನಿದ್ದೇನೆ. ಅಲ್ಲದೇ ಕನ್ನಡ ಶಾಲೆ ಉಳಿವಿಗಾಗಿ ನಿಮ್ಮೆಲ್ಲ ಸಹಕಾರ ಅಗತ್ಯ ಎಂದು ಇದೇ ಸಂದರ್ಭದಲ್ಲಿ ಹೇಳಿದರು. ಕಾರ್ಯಕ್ರಮದ ನಂತರ ಮಹಿಳೆಯರು ಸೇರಿದಂತೆ ಇತರರು ಮೇಣದಬತ್ತಿ ಹಚ್ಚುವ ಮೂಲಕ ಕನ್ನಡಕ್ಕಾಗಿ ಹೋರಾಡಿದವರು ಅಜರಾಮರು ಎಂದು ತೋರಿಸಿಕೊಟ್ಟರು.

ಈ ಸಂದರ್ಭದಲ್ಲಿ ಪ್ರಮುಖರಾದ ಅರುಣ್ ಕುಮಾರ್, ಗೋಪಾಲಗೌಡ, ಮಾರುತಿ ಸೇರಿದಂತೆ ಕನ್ನಡ ಪರ ಸಂಘಟನೆಗಳು ಭಾಗವಹಿಸಿದ್ದವು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯಜನ್ಮಧಾತೆ ಕನ್ನಡ ಸಿನೆಮಾ ಮಾ.20 ರಂದು ಪ್ರದರ್ಶನಕನ್ನಡಿಗರ ಉದ್ಯೋಗಿಗಳನ್ನು ಕೇಂದ್ರ ಸರ್ಕಾರ ಅತಂತ್ರ ಸ್ಥಿತಿಗೆ ತಳ್ಳಿದೆ: ಸಿಎಂಹಲಸೂರು ಕೆರೆ ಹೂಳೆತ್ತುವುದರಿಂದ ನೀರು ಸಂಗ್ರಹ ಅಂತರ್ಜಲ ವೃದ್ಧಿ :ಚೋಳನ್ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಒಟ್ಟು 78 ಲಕ್ಷ ರೂ ದಂಡಎಲ್ ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-CM ಸಿದ್ದರಾಮಯ್ಯಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯ